<p><strong>ಮುಂಬೈ</strong>: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಮನೆಯಲ್ಲಿ ನಡೆದ ಗಣೇಶ ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡದ್ದು ಶಿಷ್ಟಾಚಾರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಶಿವಸೇನಾ (ಯುಬಿಟಿ) ಶುಕ್ರವಾರ ಹೇಳಿದೆ.</p>.<p>ಸಿಜೆಐ ನಿವಾಸಕ್ಕೆ ಮೋದಿ ಅವರು ಬುಧವಾರ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದು ಪರ–ವಿರೋಧ ಚರ್ಚೆಗೆ ಕಾರಣವಾಗಿತ್ತು. ‘ಪ್ರಧಾನಿ ಮತ್ತು ಸಿಜೆಐ ನಡುವಣ ಖಾಸಗಿ ಭೇಟಿಯು ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಏಳುವಂತೆ ಮಾಡಿದೆ’ ಎಂದು ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಹೇಳಿದೆ.</p>.<p>ಮೋದಿ ಅವರನ್ನು ಆಹ್ವಾನಿಸುವ ಚಂದ್ರಚೂಡ್ ನಿರ್ಧಾರವನ್ನೂ ಟೀಕಿಸಿದ್ದು, ‘ನಿವೃತ್ತಿಯ ಬಳಿಕ ಚಂದ್ರಚೂಡ್ ಅವರಿಗೆ ಮೋದಿ ಅವರು ಯಾವ ಸ್ಥಾನಮಾನ ನೀಡುವರು ಎಂಬುದು ಕುತೂಹಲದ ವಿಷಯ’ ಎಂದಿದೆ. ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿರುವ ಮಾಹಿತಿ ಪ್ರಕಾರ, ಚಂದ್ರಚೂಡ್ ಅವರು ಈ ವರ್ಷದ ನವೆಂಬರ್ 10ರಂದು ನಿವೃತ್ತಿ ಹೊಂದಲಿದ್ದಾರೆ.</p>.<p>ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ‘ತುಳಿಯುವ’ ಕೆಲಸದಲ್ಲಿ ಸರ್ಕಾರಕ್ಕೆ ಸಹಾಯ ಮಾಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಒಳ್ಳೆಯ ಸ್ಥಾನಮಾನ ನೀಡಲಾಗಿದೆ ಎಂದು ಟೀಕಿಸಿದೆ. </p>.<p>ಆದರೆ ಚಂದ್ರಚೂಡ್ ಅವರ ಬಗ್ಗೆ ವಿಭಿನ್ನ ದೃಷ್ಟಿಕೋನವಿತ್ತು ಹಾಗೂ ಈಗಲೂ ಇದೆ. ಏಕೆಂದರೆ ಅವರ ಕುಟುಂಬವು ನ್ಯಾಯ ನೀಡುವ ಪರಂಪರೆಯನ್ನು ಹೊಂದಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಅವರ ತಂದೆ ಕೂಡಾ ಸಿಜೆಐ ಆಗಿದ್ದರು ಎಂದು ಹೇಳಿದೆ.</p>.<p>ಚಂದ್ರಚೂಡ್ ಅವರು ಮಹಾರಾಷ್ಟ್ರದ ಮಗನಾಗಿರುವುದರಿಂದ ಯಾವುದೇ ರಾಜಕೀಯ ಪ್ರಭಾವಕ್ಕೆ ಮಣಿಯುವುದಿಲ್ಲ ಎಂಬ ಬಲವಾದ ನಂಬಿಕೆ ಇದೆ ಎಂದು ಸಂಪಾದಕೀಯ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಮನೆಯಲ್ಲಿ ನಡೆದ ಗಣೇಶ ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡದ್ದು ಶಿಷ್ಟಾಚಾರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಶಿವಸೇನಾ (ಯುಬಿಟಿ) ಶುಕ್ರವಾರ ಹೇಳಿದೆ.</p>.<p>ಸಿಜೆಐ ನಿವಾಸಕ್ಕೆ ಮೋದಿ ಅವರು ಬುಧವಾರ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದು ಪರ–ವಿರೋಧ ಚರ್ಚೆಗೆ ಕಾರಣವಾಗಿತ್ತು. ‘ಪ್ರಧಾನಿ ಮತ್ತು ಸಿಜೆಐ ನಡುವಣ ಖಾಸಗಿ ಭೇಟಿಯು ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಏಳುವಂತೆ ಮಾಡಿದೆ’ ಎಂದು ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಹೇಳಿದೆ.</p>.<p>ಮೋದಿ ಅವರನ್ನು ಆಹ್ವಾನಿಸುವ ಚಂದ್ರಚೂಡ್ ನಿರ್ಧಾರವನ್ನೂ ಟೀಕಿಸಿದ್ದು, ‘ನಿವೃತ್ತಿಯ ಬಳಿಕ ಚಂದ್ರಚೂಡ್ ಅವರಿಗೆ ಮೋದಿ ಅವರು ಯಾವ ಸ್ಥಾನಮಾನ ನೀಡುವರು ಎಂಬುದು ಕುತೂಹಲದ ವಿಷಯ’ ಎಂದಿದೆ. ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿರುವ ಮಾಹಿತಿ ಪ್ರಕಾರ, ಚಂದ್ರಚೂಡ್ ಅವರು ಈ ವರ್ಷದ ನವೆಂಬರ್ 10ರಂದು ನಿವೃತ್ತಿ ಹೊಂದಲಿದ್ದಾರೆ.</p>.<p>ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ‘ತುಳಿಯುವ’ ಕೆಲಸದಲ್ಲಿ ಸರ್ಕಾರಕ್ಕೆ ಸಹಾಯ ಮಾಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಒಳ್ಳೆಯ ಸ್ಥಾನಮಾನ ನೀಡಲಾಗಿದೆ ಎಂದು ಟೀಕಿಸಿದೆ. </p>.<p>ಆದರೆ ಚಂದ್ರಚೂಡ್ ಅವರ ಬಗ್ಗೆ ವಿಭಿನ್ನ ದೃಷ್ಟಿಕೋನವಿತ್ತು ಹಾಗೂ ಈಗಲೂ ಇದೆ. ಏಕೆಂದರೆ ಅವರ ಕುಟುಂಬವು ನ್ಯಾಯ ನೀಡುವ ಪರಂಪರೆಯನ್ನು ಹೊಂದಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಅವರ ತಂದೆ ಕೂಡಾ ಸಿಜೆಐ ಆಗಿದ್ದರು ಎಂದು ಹೇಳಿದೆ.</p>.<p>ಚಂದ್ರಚೂಡ್ ಅವರು ಮಹಾರಾಷ್ಟ್ರದ ಮಗನಾಗಿರುವುದರಿಂದ ಯಾವುದೇ ರಾಜಕೀಯ ಪ್ರಭಾವಕ್ಕೆ ಮಣಿಯುವುದಿಲ್ಲ ಎಂಬ ಬಲವಾದ ನಂಬಿಕೆ ಇದೆ ಎಂದು ಸಂಪಾದಕೀಯ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>