<p><strong>ನವದೆಹಲಿ</strong>: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚಿಸಿದ ಪ್ರಕರಣದ (ಪಿಎನ್ಬಿ ವಂಚನೆ ಪ್ರಕರಣ) ಆರೋಪಿ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಆರೋಗ್ಯ ಸಮಸ್ಯೆಯಿಂದ ಭಾರತಕ್ಕೆ ಬರಲು ಅಸಾಧ್ಯವಾಗುತ್ತದೆ ಎಂದು ಮತ್ತೆ ಹೇಳಿದ್ದಾರೆ.</p><p>ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ–ಮೆಹುಲ್ ಚೋಕ್ಸಿ ಇಬ್ಬರು ತನಿಖೆಗೆ ಹಾಜರಾಗಬೇಕು ಎಂದು ಸಿಬಿಐ ತಾಕೀತು ಮಾಡಿತ್ತು.</p><p>ವಿಶೇಷವೆಂದರೆ 2023 ರಲ್ಲಿ ಅವರು ತನಗೆ ಹೃದಯ ಖಾಯಿಲೆ ಇದೆ, ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿದ್ದರು. ಆದರೆ, ಇದೀಗ ತನಗೆ ರಕ್ತದ ಕ್ಯಾನ್ಸರ್ ಇದೆ ಎಂದು ಹೇಳಿದ್ದಾರೆ.</p><p>ತನಿಖೆಗೆ ಹಾಜರಾಗುವಂತೆ ಸಿಬಿಐ ತಾಕೀತು ಮಾಡಿದ್ದರ ಬಗೆಗಿನ ಆದೇಶವನ್ನು ಪ್ರಶ್ನಿಸಿ ಮುಂಬೈ ನ್ಯಾಯಾಲವೊಂದಕ್ಕೆ ತನ್ನ ವಕೀಲರ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ ಚೋಕ್ಸಿ ಈ ರೀತಿ ಹೇಳಿದ್ದಾನೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.</p><p>ಸದ್ಯ ಮೆಹುಲ್ ಚೋಕ್ಸಿ ಬೆಲ್ಜಿಯಂ ದೇಶದಲ್ಲಿದ್ದಾರೆ ಎಂದು ಹೇಳಲಾಗಿದೆ.</p><p>ಸರ್ಕಾರ ನನ್ನ ಪಾಸ್ಪೋರ್ಟ್ನ್ನು ರದ್ದುಗೊಳಿಸಿದೆ. ಇದಕ್ಕೆ ಮುಂಬೈ ಆರ್ಪಿಒ ಕಚೇರಿಯನ್ನು ಕೇಳಿದರೆ ಸಮರ್ಪಕವಾದ ವಿವರಣೆ ನೀಡುತ್ತಿಲ್ಲ. ನನ್ನ ಪಾಸ್ಪೋರ್ಟ್ನ್ನು ಯಾಕೆ ರದ್ದುಗೊಳಿಸಲಾಗಿದೆ. ಹೇಗೆ ನನಗೆ ಭಾರತದಲ್ಲಿ ಭದ್ರತೆ ದೊರೆಯುತ್ತದೆ’ ಎಂದು ಚೋಕ್ಸಿ ಈ ಹಿಂದೆ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚಿಸಿದ ಪ್ರಕರಣದ (ಪಿಎನ್ಬಿ ವಂಚನೆ ಪ್ರಕರಣ) ಆರೋಪಿ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಆರೋಗ್ಯ ಸಮಸ್ಯೆಯಿಂದ ಭಾರತಕ್ಕೆ ಬರಲು ಅಸಾಧ್ಯವಾಗುತ್ತದೆ ಎಂದು ಮತ್ತೆ ಹೇಳಿದ್ದಾರೆ.</p><p>ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ–ಮೆಹುಲ್ ಚೋಕ್ಸಿ ಇಬ್ಬರು ತನಿಖೆಗೆ ಹಾಜರಾಗಬೇಕು ಎಂದು ಸಿಬಿಐ ತಾಕೀತು ಮಾಡಿತ್ತು.</p><p>ವಿಶೇಷವೆಂದರೆ 2023 ರಲ್ಲಿ ಅವರು ತನಗೆ ಹೃದಯ ಖಾಯಿಲೆ ಇದೆ, ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿದ್ದರು. ಆದರೆ, ಇದೀಗ ತನಗೆ ರಕ್ತದ ಕ್ಯಾನ್ಸರ್ ಇದೆ ಎಂದು ಹೇಳಿದ್ದಾರೆ.</p><p>ತನಿಖೆಗೆ ಹಾಜರಾಗುವಂತೆ ಸಿಬಿಐ ತಾಕೀತು ಮಾಡಿದ್ದರ ಬಗೆಗಿನ ಆದೇಶವನ್ನು ಪ್ರಶ್ನಿಸಿ ಮುಂಬೈ ನ್ಯಾಯಾಲವೊಂದಕ್ಕೆ ತನ್ನ ವಕೀಲರ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ ಚೋಕ್ಸಿ ಈ ರೀತಿ ಹೇಳಿದ್ದಾನೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.</p><p>ಸದ್ಯ ಮೆಹುಲ್ ಚೋಕ್ಸಿ ಬೆಲ್ಜಿಯಂ ದೇಶದಲ್ಲಿದ್ದಾರೆ ಎಂದು ಹೇಳಲಾಗಿದೆ.</p><p>ಸರ್ಕಾರ ನನ್ನ ಪಾಸ್ಪೋರ್ಟ್ನ್ನು ರದ್ದುಗೊಳಿಸಿದೆ. ಇದಕ್ಕೆ ಮುಂಬೈ ಆರ್ಪಿಒ ಕಚೇರಿಯನ್ನು ಕೇಳಿದರೆ ಸಮರ್ಪಕವಾದ ವಿವರಣೆ ನೀಡುತ್ತಿಲ್ಲ. ನನ್ನ ಪಾಸ್ಪೋರ್ಟ್ನ್ನು ಯಾಕೆ ರದ್ದುಗೊಳಿಸಲಾಗಿದೆ. ಹೇಗೆ ನನಗೆ ಭಾರತದಲ್ಲಿ ಭದ್ರತೆ ದೊರೆಯುತ್ತದೆ’ ಎಂದು ಚೋಕ್ಸಿ ಈ ಹಿಂದೆ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>