<p><strong>ಗುವಾಹಟಿ</strong>: ಪೊಲೀಸರು ಶಸ್ತ್ರಸಜ್ಜಿತ ಕಳ್ಳ ಬೇಟೆಗಾರರನೊಬ್ಬನನ್ನು ಎನ್ಕೌಂಟರ್ನಲ್ಲಿ ಸಾಯಿಸಿರುವ ಘಟನೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ರಾತ್ರಿ ನಡೆದಿದೆ.</p><p>ರಾಷ್ಟ್ರೀಯ ಉದ್ಯಾನದ ಅಗೋರಟೋಲಿ ವಲಯದ ಧನಬಾರಿ ಬಳಿ ಈ ಘಟನೆ ನಡೆದಿದೆ ಎಂದು ಪಾರ್ಕ್ನ ಅಧಿಕಾರಿಗಳು ತಿಳಿಸಿದ್ದಾರೆ.</p><p>ಕೆಲವು ಶಸ್ತ್ರಸಜ್ಜಿತ ಕಳ್ಳ ಬೇಟೆಗಾರರು ಖಡ್ಗಮೃಗ ಸೇರಿದಂತೆ ಇತರ ಪ್ರಾಣಿಗಳನ್ನು ಭೇಟೆಯಾಡಿ ಸಾಗಿಸಲು ಹೊಂಚುಹಾಕಿ ಧನಬಾರಿ ಬಳಿ ನುಗ್ಗಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಕಾರ್ಯಾಚರಣೆ ನಡೆಸಲು ಸನ್ನದ್ದರಾಗಿದ್ದರು.</p><p>ರಾತ್ರಿ 10.30ರ ವೇಳೆ ಕಳ್ಳಬೇಟೆಗಾರರು ಪೊಲೀಸರ ಮೇಲೆ ಗುಂಡು ಹಾರಿಸಲು ಮುಂದಾದಾಗ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆಗ ಒಬ್ಬ ಕಳ್ಳಬೇಟೆಗಾರ ಹತ್ಯೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.</p><p>ಹತ್ಯೆಯಾದವನಿಂದ ಒಂದು ಎಕೆ 56 ರೈಫಲ್, 303 ರೈಫಲ್ ಹಾಗೂ ಕೊಡಲಿ, ಟಾರ್ಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದವರಿಗೆ ಶೋಧ ಮುಂದುವರೆದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಪೊಲೀಸರು ಶಸ್ತ್ರಸಜ್ಜಿತ ಕಳ್ಳ ಬೇಟೆಗಾರರನೊಬ್ಬನನ್ನು ಎನ್ಕೌಂಟರ್ನಲ್ಲಿ ಸಾಯಿಸಿರುವ ಘಟನೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ರಾತ್ರಿ ನಡೆದಿದೆ.</p><p>ರಾಷ್ಟ್ರೀಯ ಉದ್ಯಾನದ ಅಗೋರಟೋಲಿ ವಲಯದ ಧನಬಾರಿ ಬಳಿ ಈ ಘಟನೆ ನಡೆದಿದೆ ಎಂದು ಪಾರ್ಕ್ನ ಅಧಿಕಾರಿಗಳು ತಿಳಿಸಿದ್ದಾರೆ.</p><p>ಕೆಲವು ಶಸ್ತ್ರಸಜ್ಜಿತ ಕಳ್ಳ ಬೇಟೆಗಾರರು ಖಡ್ಗಮೃಗ ಸೇರಿದಂತೆ ಇತರ ಪ್ರಾಣಿಗಳನ್ನು ಭೇಟೆಯಾಡಿ ಸಾಗಿಸಲು ಹೊಂಚುಹಾಕಿ ಧನಬಾರಿ ಬಳಿ ನುಗ್ಗಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಕಾರ್ಯಾಚರಣೆ ನಡೆಸಲು ಸನ್ನದ್ದರಾಗಿದ್ದರು.</p><p>ರಾತ್ರಿ 10.30ರ ವೇಳೆ ಕಳ್ಳಬೇಟೆಗಾರರು ಪೊಲೀಸರ ಮೇಲೆ ಗುಂಡು ಹಾರಿಸಲು ಮುಂದಾದಾಗ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆಗ ಒಬ್ಬ ಕಳ್ಳಬೇಟೆಗಾರ ಹತ್ಯೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.</p><p>ಹತ್ಯೆಯಾದವನಿಂದ ಒಂದು ಎಕೆ 56 ರೈಫಲ್, 303 ರೈಫಲ್ ಹಾಗೂ ಕೊಡಲಿ, ಟಾರ್ಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದವರಿಗೆ ಶೋಧ ಮುಂದುವರೆದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>