<p><strong>ನವದೆಹಲಿ</strong>: ಪೊಲಾವರಂ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿದೆ.</p>.<p>ಈ ಯೋಜನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸಮಿತಿ ನೀಡಿರುವ ಶಿಫಾರಸುಗಳನ್ನು ಒಪ್ಪಿಕೊಂಡು ಎನ್ಜಿಟಿ ಆದೇಶ ಹೊರಡಿಸಿತ್ತು.</p>.<p>ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ, ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಮತ್ತು ಅರಣ್ಯ ಸಚಿವಾಲಯ ಮತ್ತು ಕಮ್ಮಮ್ ಜಿಲ್ಲಾಧಿಕಾರಿ ಅವರನ್ನೊಳಗೊಂಡ ನಾಲ್ವರು ಸದಸ್ಯರ ಸಮಿತಿಯ ವರದಿಯನ್ನು ಎನ್ಜಿಟಿ 2020ರ ಸೆಪ್ಟೆಂಬರ್ 18ರಂದು ಒಪ್ಪಿಕೊಂಡಿತ್ತು.</p>.<p>ಎನ್ಜಿಟಿಯ ಈ ಕ್ರಮವನ್ನು ಪ್ರಶ್ನಿಸಿ ಒಡಿಶಾ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ನೀಡದೆಯೇ ಈ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಒಡಿಶಾ ದೂರಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ನಜೀರ್ ಮತ್ತು ಕೃಷ್ಣಾ ಮುರಾರಿ ಅವರನ್ನೊಳಗೊಂಡ ಪೀಠವು ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ.</p>.<p>ತೆಲಂಗಾಣದಲ್ಲಿನ ಏತ ನೀರಾವರಿಗಾಗಿ ಪೊಲಾವರಂ ಯೋಜನೆಯನ್ನು ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೊಲಾವರಂ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿದೆ.</p>.<p>ಈ ಯೋಜನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸಮಿತಿ ನೀಡಿರುವ ಶಿಫಾರಸುಗಳನ್ನು ಒಪ್ಪಿಕೊಂಡು ಎನ್ಜಿಟಿ ಆದೇಶ ಹೊರಡಿಸಿತ್ತು.</p>.<p>ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ, ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಮತ್ತು ಅರಣ್ಯ ಸಚಿವಾಲಯ ಮತ್ತು ಕಮ್ಮಮ್ ಜಿಲ್ಲಾಧಿಕಾರಿ ಅವರನ್ನೊಳಗೊಂಡ ನಾಲ್ವರು ಸದಸ್ಯರ ಸಮಿತಿಯ ವರದಿಯನ್ನು ಎನ್ಜಿಟಿ 2020ರ ಸೆಪ್ಟೆಂಬರ್ 18ರಂದು ಒಪ್ಪಿಕೊಂಡಿತ್ತು.</p>.<p>ಎನ್ಜಿಟಿಯ ಈ ಕ್ರಮವನ್ನು ಪ್ರಶ್ನಿಸಿ ಒಡಿಶಾ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ನೀಡದೆಯೇ ಈ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಒಡಿಶಾ ದೂರಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ನಜೀರ್ ಮತ್ತು ಕೃಷ್ಣಾ ಮುರಾರಿ ಅವರನ್ನೊಳಗೊಂಡ ಪೀಠವು ತೆಲಂಗಾಣ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ.</p>.<p>ತೆಲಂಗಾಣದಲ್ಲಿನ ಏತ ನೀರಾವರಿಗಾಗಿ ಪೊಲಾವರಂ ಯೋಜನೆಯನ್ನು ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>