ಸಚಿವ ಕೆ.ಟಿ. ಜಲೀಲ್ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಈ ಯುವ ಕಾಂಗ್ರೆಸ್ ಕಾರ್ಯಕರ್ತ ಭಾಗಿಯಾಗಿದ್ದ. ಸಚಿವ ಜಲೀಲ್ ಅವರು ಭಾನುವಾರ ಮಲಪ್ಪುರಂನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದಾಗ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಎರ್ನಾಕುಲಂ ಜಿಲ್ಲೆಯ ಅಂಗಾಮಲಿಯಲ್ಲೂ ಪ್ರತಿಭಟನೆ ನಡೆದಿತ್ತು. ಸಚಿವರ ವಾಹನ ತಮ್ಮ ಠಾಣೆಯ ವ್ಯಾಪ್ತಿಯಲ್ಲಿ ಸುಗಮವಾಗಿ ಸಂಚರಿಸಲು ಅನುಕೂಲ ಮಾಡಿಕೊಡಲು ಮುಂದಾದ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ತೊಡಗಿದರು. ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಬಿದ್ದ ಕಾರ್ಯಕರ್ತನ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದೂರಲಾಗಿದೆ.