<p><strong>ಹೈದರಾಬಾದ್</strong>: ನಿಜಾಮಾಬಾದ್ ಪೊಲೀಸ್ ಕಮಿಷನರೇಟ್ನ ಕಾನ್ಸ್ಟೆಬಲ್ ಒಬ್ಬರಬನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಳ್ಳತನದ ಆರೋಪಿ ಶೇಖ್ ರಿಯಾಜ್ (24) ಎಂಬುವನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.</p><p>ನಿಜಾಮಾಬಾದ್ನ ಸಾರಂಗಪುರ ಬಳಿ ಇಂದು ಬೆಳಿಗ್ಗೆ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ರಿಯಾಜ್ನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಆತ ಬದುಕುಳಿಯಲಿಲ್ಲ ಎಂದು ಹೈದರಾಬಾದ್ನಲ್ಲಿರುವ ಡಿಜಿಪಿ ಕಚೇರಿ ತಿಳಿಸಿದೆ.</p><p>ಸಾರಂಗಪುರ ಬಳಿ ರಿಯಾಜ್ ಅವಿತಿರುವ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಲು ಹೋದ ವೇಳೆ ಪೊಲೀಸರ ಬಳಿಯ ಪಿಸ್ತೂಲ್ ಕಸಿದು ಗುಂಡು ಹಾರಿಸಲು ಪ್ರಯತ್ನಿಸಿದ್ದ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾಗ ಆತ ಸಾವನ್ನಪ್ಪಿದ್ದಾನೆ.</p><p>ಘಟನೆ ವೇಳೆ ಕೆಲ ಪೊಲೀಸರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ವಾಹನ ಕಳ್ಳತನದ ಪ್ರಕರಣದಲ್ಲಿ ಬಂಧಿತನಾಗಿದ್ದ ಶೇಖ್ ರಿಯಾಜ್ ಎಂಬಾತನನ್ನು ಕಳೆದ ಶುಕ್ರವಾರ ನಿಜಾಮಾಬಾದ್ ಪೊಲೀಸ್ ಠಾಣೆಗೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಕಾನ್ಸ್ಟೆಬಲ್ ಇ. ಪ್ರಮೋದ್ ಎನ್ನುವರ (42) ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಕೊಲೆ ಬಳಿಕ ಆರೋಪಿ ಪರಾರಿಯಾಗಿದ್ದ.</p><p>ಆರೋಪಿಯು ಚಾಕುವನ್ನು ಶೂ ಒಳಗೆ ಇರಿಸಿಕೊಂಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಪ್ರಮೋದ್ ಅಸುನೀಗಿದ್ದರು. ಕಾನ್ಸ್ಟೆಬಲ್ ಬೈಕ್ ಹಿಂಬಾಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಮೇಲೆಯೂ ಆರೋಪಿಯು ದಾಳಿ ನಡೆಸಿದ್ದು, ಅವರ ಬೆರಳುಗಳಿಗೆ ಗಾಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ನಿಜಾಮಾಬಾದ್ ಪೊಲೀಸ್ ಕಮಿಷನರೇಟ್ನ ಕಾನ್ಸ್ಟೆಬಲ್ ಒಬ್ಬರಬನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಳ್ಳತನದ ಆರೋಪಿ ಶೇಖ್ ರಿಯಾಜ್ (24) ಎಂಬುವನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.</p><p>ನಿಜಾಮಾಬಾದ್ನ ಸಾರಂಗಪುರ ಬಳಿ ಇಂದು ಬೆಳಿಗ್ಗೆ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ರಿಯಾಜ್ನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಆತ ಬದುಕುಳಿಯಲಿಲ್ಲ ಎಂದು ಹೈದರಾಬಾದ್ನಲ್ಲಿರುವ ಡಿಜಿಪಿ ಕಚೇರಿ ತಿಳಿಸಿದೆ.</p><p>ಸಾರಂಗಪುರ ಬಳಿ ರಿಯಾಜ್ ಅವಿತಿರುವ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಲು ಹೋದ ವೇಳೆ ಪೊಲೀಸರ ಬಳಿಯ ಪಿಸ್ತೂಲ್ ಕಸಿದು ಗುಂಡು ಹಾರಿಸಲು ಪ್ರಯತ್ನಿಸಿದ್ದ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾಗ ಆತ ಸಾವನ್ನಪ್ಪಿದ್ದಾನೆ.</p><p>ಘಟನೆ ವೇಳೆ ಕೆಲ ಪೊಲೀಸರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ವಾಹನ ಕಳ್ಳತನದ ಪ್ರಕರಣದಲ್ಲಿ ಬಂಧಿತನಾಗಿದ್ದ ಶೇಖ್ ರಿಯಾಜ್ ಎಂಬಾತನನ್ನು ಕಳೆದ ಶುಕ್ರವಾರ ನಿಜಾಮಾಬಾದ್ ಪೊಲೀಸ್ ಠಾಣೆಗೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಕಾನ್ಸ್ಟೆಬಲ್ ಇ. ಪ್ರಮೋದ್ ಎನ್ನುವರ (42) ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಕೊಲೆ ಬಳಿಕ ಆರೋಪಿ ಪರಾರಿಯಾಗಿದ್ದ.</p><p>ಆರೋಪಿಯು ಚಾಕುವನ್ನು ಶೂ ಒಳಗೆ ಇರಿಸಿಕೊಂಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಪ್ರಮೋದ್ ಅಸುನೀಗಿದ್ದರು. ಕಾನ್ಸ್ಟೆಬಲ್ ಬೈಕ್ ಹಿಂಬಾಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಮೇಲೆಯೂ ಆರೋಪಿಯು ದಾಳಿ ನಡೆಸಿದ್ದು, ಅವರ ಬೆರಳುಗಳಿಗೆ ಗಾಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>