ಮಾವೋವಾದಿಗಳ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆ.ಜೆ.ಎಂ.ಪಿ) ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ವೇಳೆ ರಂಕಾ ಪೊಲೀಸ್ ಠಾಣೆಯ ಉಸ್ತುವಾರಿ ಶಂಕರ್ ಪ್ರಸಾದ್ ಕುಶ್ವಾಹ ಅವರಿಗೆ ಗಾಯವಾಗಿದೆ ಎಂದು ಗಢ್ವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಪಾಂಡೆ ಮಾಹಿತಿ ನೀಡಿದ್ದಾರೆ.
ಗಢ್ವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ, ಕುಶ್ವಾಹ ಅವರನ್ನು ಉನ್ನತ ಚಿಕಿತ್ಸೆಗಾಗಿ ರಾಂಚಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಶ್ವಾಹ ಅವರ ಬಲಗೈಗೆ ಗುಂಡಿನ ಗಾಯಗಳಾಗಿವೆ.