<p><strong>ಮುಂಬೈ:</strong> ದೇಶದ ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಗಣೇಶೋತ್ಸವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚರಿಕೆವಹಿಸಿದ್ದಾರೆ. </p><p>ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸ್ಆ್ಯಪ್ ಸಂಖ್ಯೆಗೆ ಈ ಸಂದೇಶ ಬಂದಿದೆ. ನಗರಕ್ಕೆ 14 ಜನ ಭಯೋತ್ಪಾದಕರು ಬಂದಿದ್ದು ಸುಮಾರು 400 ಕೆ.ಜಿ ಆರ್ಡಿಎಕ್ಸ್ ಅನ್ನು 34 ವಾಹನಗಳಲ್ಲಿ ಇಡಲಾಗಿದ್ದು ಒಂದು ಕೋಟಿಗೂ ಹೆಚ್ಚು ಜನರ ರಕ್ತ ಹರಿಸಲಾಗುವುದು ಎಂದು ಉಗ್ರರು ಸಂದೇಶದಲ್ಲಿ ತಿಳಿಸಿದ್ದಾರೆ.</p><p>ಲಷ್ಕರ್ ಜಿಹಾದಿ ಉಗ್ರ ಸಂಘಟನೆ ಈ ಸಂದೇಶ ಕಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಬೆದರಿಕೆ ಸಂದೇಶ ಬಂದಿರುವುದು ನಿಜ, ಇದು ಹುಸಿ ಸಂದೇಶ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮಗಳಲ್ಲಿ ವಿವಿಧ ತಂಡಗಳು ತನಿಖೆ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.</p><p>ಮಹಾನಗರದಲ್ಲಿ ಗಣೇಶೋತ್ಸವ ವಿಸರ್ಜನೆ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ಎಲ್ಲಾ ಕಡೆ ಭದ್ರತೆ ಕೈಗೊಳ್ಳಲಾಗಿದೆ. ನೂರಾರು ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದ್ದು ವ್ಯಾಪಕ ತಪಾಸಣೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಗಣೇಶೋತ್ಸವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚರಿಕೆವಹಿಸಿದ್ದಾರೆ. </p><p>ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸ್ಆ್ಯಪ್ ಸಂಖ್ಯೆಗೆ ಈ ಸಂದೇಶ ಬಂದಿದೆ. ನಗರಕ್ಕೆ 14 ಜನ ಭಯೋತ್ಪಾದಕರು ಬಂದಿದ್ದು ಸುಮಾರು 400 ಕೆ.ಜಿ ಆರ್ಡಿಎಕ್ಸ್ ಅನ್ನು 34 ವಾಹನಗಳಲ್ಲಿ ಇಡಲಾಗಿದ್ದು ಒಂದು ಕೋಟಿಗೂ ಹೆಚ್ಚು ಜನರ ರಕ್ತ ಹರಿಸಲಾಗುವುದು ಎಂದು ಉಗ್ರರು ಸಂದೇಶದಲ್ಲಿ ತಿಳಿಸಿದ್ದಾರೆ.</p><p>ಲಷ್ಕರ್ ಜಿಹಾದಿ ಉಗ್ರ ಸಂಘಟನೆ ಈ ಸಂದೇಶ ಕಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ಬೆದರಿಕೆ ಸಂದೇಶ ಬಂದಿರುವುದು ನಿಜ, ಇದು ಹುಸಿ ಸಂದೇಶ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮಗಳಲ್ಲಿ ವಿವಿಧ ತಂಡಗಳು ತನಿಖೆ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.</p><p>ಮಹಾನಗರದಲ್ಲಿ ಗಣೇಶೋತ್ಸವ ವಿಸರ್ಜನೆ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ಎಲ್ಲಾ ಕಡೆ ಭದ್ರತೆ ಕೈಗೊಳ್ಳಲಾಗಿದೆ. ನೂರಾರು ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದ್ದು ವ್ಯಾಪಕ ತಪಾಸಣೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>