ನವದೆಹಲಿ: ಇಲ್ಲಿನ ಛತ್ರಸಾಲ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ, ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ನೀಡಬೇಕು ಎಂದಿದ್ದ ದೆಹಲಿ ಪೊಲೀಸರ ಮನವಿಯನ್ನು ಬುಧವಾರ ನ್ಯಾಯಾಲಯ ತಿರಸ್ಕರಿಸಿದೆ ಮತ್ತು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.