<p><strong>ಹೈದರಾಬಾದ್:</strong> ತಿರುಮಲದ ಪಾವಿತ್ರ್ಯತೆ ಮತ್ತು ಆಧ್ಯಾತ್ಮಿಕ ಶಾಂತಿ ಕಾಪಾಡಲು ತಿರುಮಲದಲ್ಲಿ ರಾಜಕೀಯ ಹಾಗೂ ದ್ವೇಷದ ಭಾಷಣಗಳಿಗೆ ಟಿಟಿಡಿ ನಿಷೇಧ ಹೇರಿದೆ.</p><p>ಸದಾ ಗೋವಿಂದಾ ನಾಮಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ವ್ಯಕ್ತಿಗಳು ಹಾಗೂ ರಾಜಕೀಯ ಮುಖಂಡರು ತಿರುಮಲ ದೇವಸ್ಥಾನದ ದರ್ಶನದ ನಂತರ ದೇವಸ್ಥಾನದ ಎದುರು ಮಾಧ್ಯಮಗಳ ಮುಂದೆ ರಾಜಕೀಯ ದ್ವೇಷದ ಹೇಳಿಕೆ ನೀಡಿ ಆಧ್ಯಾತ್ಮಿಕ ವಾತಾವರಣವನ್ನು ಕದಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಷೇಧ ಹೇರುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಟಿಟಿಡಿ ಮಂಡಳಿ ಹೇಳಿದೆ. </p><p>ಟಿಟಿಡಿ ಕೂಡ ತನ್ನ ನಿರ್ಧಾರಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದೆ. ಇದನ್ನು ಉಲ್ಲಂಘಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅದು ತಿಳಿಸಿದೆ.</p><p><strong>ಡಿ.3ರಂದು ದೇವರ ದರ್ಶನ: </strong>ತಿರುಮಲದಲ್ಲಿ ಡಿ.3ರಂದು ಸ್ಥಳೀಯರಿಗೆ ವೆಂಕಟೇಶ್ವರ ಸ್ವಾಮಿ ದರ್ಶನ ವ್ಯವಸ್ಥೆ ಮಾಡಲು ಟಿಟಿಡಿ ಇದೇ ವೇಳೆ ನಿರ್ಧರಿಸಿದೆ.</p><p>ತಿರುಪತಿಯ ಮಹತಿ ಆಡಿಟೋರಿಯಂ ಮತ್ತು ತಿರುಮಲದ ಸಮುದಾಯ ಭವನದಲ್ಲಿ ಡಿ.2 ರಂದು ಬೆಳಿಗ್ಗೆ 5 ಗಂಟೆಗೆ ಟೋಕನ್ ವಿತರಿಸಲಾಗುವುದು.</p><p>ನವೆಂಬರ್ 18 ರಂದು ನಡೆದ ಟಿಟಿಡಿ ಟ್ರಸ್ಟಿಗಳ ಮಂಡಳಿಯು ತನ್ನ ಮೊದಲ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸ್ಥಳೀಯರಿಗೆ ಶ್ರೀವಾರಿ ದರ್ಶನವನ್ನು ನೀಡಲು ನಿರ್ಧರಿಸಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 3ರಂದು ಸ್ಥಳೀಯರಿಗೆ ದರ್ಶನ ನೀಡಲು ಟಿಟಿಡಿ ವ್ಯವಸ್ಥೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತಿರುಮಲದ ಪಾವಿತ್ರ್ಯತೆ ಮತ್ತು ಆಧ್ಯಾತ್ಮಿಕ ಶಾಂತಿ ಕಾಪಾಡಲು ತಿರುಮಲದಲ್ಲಿ ರಾಜಕೀಯ ಹಾಗೂ ದ್ವೇಷದ ಭಾಷಣಗಳಿಗೆ ಟಿಟಿಡಿ ನಿಷೇಧ ಹೇರಿದೆ.</p><p>ಸದಾ ಗೋವಿಂದಾ ನಾಮಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ವ್ಯಕ್ತಿಗಳು ಹಾಗೂ ರಾಜಕೀಯ ಮುಖಂಡರು ತಿರುಮಲ ದೇವಸ್ಥಾನದ ದರ್ಶನದ ನಂತರ ದೇವಸ್ಥಾನದ ಎದುರು ಮಾಧ್ಯಮಗಳ ಮುಂದೆ ರಾಜಕೀಯ ದ್ವೇಷದ ಹೇಳಿಕೆ ನೀಡಿ ಆಧ್ಯಾತ್ಮಿಕ ವಾತಾವರಣವನ್ನು ಕದಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಷೇಧ ಹೇರುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಟಿಟಿಡಿ ಮಂಡಳಿ ಹೇಳಿದೆ. </p><p>ಟಿಟಿಡಿ ಕೂಡ ತನ್ನ ನಿರ್ಧಾರಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದೆ. ಇದನ್ನು ಉಲ್ಲಂಘಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅದು ತಿಳಿಸಿದೆ.</p><p><strong>ಡಿ.3ರಂದು ದೇವರ ದರ್ಶನ: </strong>ತಿರುಮಲದಲ್ಲಿ ಡಿ.3ರಂದು ಸ್ಥಳೀಯರಿಗೆ ವೆಂಕಟೇಶ್ವರ ಸ್ವಾಮಿ ದರ್ಶನ ವ್ಯವಸ್ಥೆ ಮಾಡಲು ಟಿಟಿಡಿ ಇದೇ ವೇಳೆ ನಿರ್ಧರಿಸಿದೆ.</p><p>ತಿರುಪತಿಯ ಮಹತಿ ಆಡಿಟೋರಿಯಂ ಮತ್ತು ತಿರುಮಲದ ಸಮುದಾಯ ಭವನದಲ್ಲಿ ಡಿ.2 ರಂದು ಬೆಳಿಗ್ಗೆ 5 ಗಂಟೆಗೆ ಟೋಕನ್ ವಿತರಿಸಲಾಗುವುದು.</p><p>ನವೆಂಬರ್ 18 ರಂದು ನಡೆದ ಟಿಟಿಡಿ ಟ್ರಸ್ಟಿಗಳ ಮಂಡಳಿಯು ತನ್ನ ಮೊದಲ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸ್ಥಳೀಯರಿಗೆ ಶ್ರೀವಾರಿ ದರ್ಶನವನ್ನು ನೀಡಲು ನಿರ್ಧರಿಸಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 3ರಂದು ಸ್ಥಳೀಯರಿಗೆ ದರ್ಶನ ನೀಡಲು ಟಿಟಿಡಿ ವ್ಯವಸ್ಥೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>