<p><strong>ತಿರುವನಂತಪುರ:</strong> ಕೇರಳ ಕಲಾಮಂಡಲಂ ವಿಶ್ವವಿದ್ಯಾಲಯದಲ್ಲಿನ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಅಲ್ಲಿನ ಕುಲಪತಿ, ಪ್ರಸಿದ್ಧ ಕಲಾವಿದೆ ಮಲ್ಲಿಕಾ ಸಾರಭಾಯಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಸಿಪಿಎಂ ಸರ್ಕಾರವನ್ನು ಮುಜುಗರಕ್ಕೀಡುಮಾಡಿದೆ.</p>.<p>‘ಕಲಾಮಂಡಲಂನಲ್ಲಿರುವ ಬಹುತೇಕ ನೌಕರರಿಗೆ ಪತ್ರ ಬರೆಯಲು ಅಥವಾ ಲೆಕ್ಕಪತ್ರಗಳನ್ನು ನಿರ್ವಹಿಸಲು ಕೂಡಾ ತಿಳಿದಿಲ್ಲ. ಅವರಿಗೆ ಸರಿಯಾದ ತರಬೇತಿಯನ್ನು ನೀಡಿಲ್ಲ. ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪವನ್ನು ನಾನು ವಿರೋಧಿಸಲ್ಲ, ಆದರೆ ಅರ್ಹ ವ್ಯಕ್ತಿಗಳ ನೇಮಕಾತಿಯನ್ನು ಬಯಸುತ್ತೇನೆ’ ಎಂದು ಮಲ್ಲಿಕಾ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p class="title">ವಿಶ್ವವಿದ್ಯಾಲಯದಲ್ಲಿನ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರನ್ನು 2022ರಲ್ಲಿ ಕುಲಪತಿ ಹುದ್ದೆಯಿಂದ ಕೈಬಿಟ್ಟು, ಸಾರಾಭಾಯಿ ಅವರನ್ನು ನೇಮಿಸಲಾಗಿತ್ತು.</p>.<p class="title">ಈ ಹಿಂದೆಯೂ ಸರ್ಕಾರದ ವಿರುದ್ಧ ಮಾತನಾಡಿದ್ದ ಮಲ್ಲಿಕಾ ಅವರು ಆಶಾ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಗೂ ಬೆಂಬಲ ನೀಡಿದ್ದರು. ‘ಕುಲಪತಿಯಾಗಿರುವ ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲಾಗುತ್ತಿದೆ’ ಎಂದೂ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಕಲಾಮಂಡಲಂ ವಿಶ್ವವಿದ್ಯಾಲಯದಲ್ಲಿನ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಅಲ್ಲಿನ ಕುಲಪತಿ, ಪ್ರಸಿದ್ಧ ಕಲಾವಿದೆ ಮಲ್ಲಿಕಾ ಸಾರಭಾಯಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಸಿಪಿಎಂ ಸರ್ಕಾರವನ್ನು ಮುಜುಗರಕ್ಕೀಡುಮಾಡಿದೆ.</p>.<p>‘ಕಲಾಮಂಡಲಂನಲ್ಲಿರುವ ಬಹುತೇಕ ನೌಕರರಿಗೆ ಪತ್ರ ಬರೆಯಲು ಅಥವಾ ಲೆಕ್ಕಪತ್ರಗಳನ್ನು ನಿರ್ವಹಿಸಲು ಕೂಡಾ ತಿಳಿದಿಲ್ಲ. ಅವರಿಗೆ ಸರಿಯಾದ ತರಬೇತಿಯನ್ನು ನೀಡಿಲ್ಲ. ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪವನ್ನು ನಾನು ವಿರೋಧಿಸಲ್ಲ, ಆದರೆ ಅರ್ಹ ವ್ಯಕ್ತಿಗಳ ನೇಮಕಾತಿಯನ್ನು ಬಯಸುತ್ತೇನೆ’ ಎಂದು ಮಲ್ಲಿಕಾ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p class="title">ವಿಶ್ವವಿದ್ಯಾಲಯದಲ್ಲಿನ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರನ್ನು 2022ರಲ್ಲಿ ಕುಲಪತಿ ಹುದ್ದೆಯಿಂದ ಕೈಬಿಟ್ಟು, ಸಾರಾಭಾಯಿ ಅವರನ್ನು ನೇಮಿಸಲಾಗಿತ್ತು.</p>.<p class="title">ಈ ಹಿಂದೆಯೂ ಸರ್ಕಾರದ ವಿರುದ್ಧ ಮಾತನಾಡಿದ್ದ ಮಲ್ಲಿಕಾ ಅವರು ಆಶಾ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಗೂ ಬೆಂಬಲ ನೀಡಿದ್ದರು. ‘ಕುಲಪತಿಯಾಗಿರುವ ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲಾಗುತ್ತಿದೆ’ ಎಂದೂ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>