ನಮ್ಮ ಪಕ್ಷವನ್ನು ವಿಲೀನಗೊಳಿಸಿರುವುದು ಪ್ರತಿಪಕ್ಷಗಳು ಒಗ್ಗಟ್ಟಾಗುವುದರ ಮೊದಲ ಹಂತ. ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಭಾರತದಾದ್ಯಂತ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕಿದೆ. ಸದ್ಯಕ್ಕೆ ಇದು ನಮ್ಮ ಆದ್ಯತೆಯಾಗಿದೆ. ಆಮೇಲೆ ಪ್ರತಿಪಕ್ಷಗಳ ಮೈತ್ರಿಕೂಟವನ್ನು ಯಾರು ಮುನ್ನಡೆಸಬಹುದು ಎಂಬ ಬಗ್ಗೆ ಯೋಚಿಸಬಹುದು ಎಂದು ಶರದ್ ಯಾದವ್ ಹೇಳಿದ್ದಾರೆ.