ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್ ಸಂಸ್ಥೆಯನ್ನು ಪ್ರತಿನಿಧಿಸಿದ್ದ ವಕೀಲ ಪ್ರಶಾಂತ್ ಭೂಷಣ್ ಅವರು, ಮಾಹಿತಿ ಹಕ್ಕು ಆಯೋಗವು (ಸಿಐಸಿ) 2013ರಲ್ಲಿ ಆದೇಶ ನೀಡಿದ್ದು, ಸರ್ಕಾರದಿಂದ ತೆರಿಗೆ ವಿನಾಯಿತಿ ಮತ್ತು ಭೂಮಿಯನ್ನು ಪಡೆಯುವ ರಾಜಕೀಯ ಪಕ್ಷಗಳನ್ನು ಆರ್ಟಿಐ ವ್ಯಾಪ್ತಿಗೆ ತರಬೇಕು ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿದರು.