<p><strong>ಚೆನ್ನೈ:</strong> ತಮಿಳುನಾಡಿನ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ ಮನವಿ ಮಾಡಿದರು.</p>.<p>ಸಿಇಸಿ ಮತ್ತು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.</p>.<p>‘ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕೆಂದು ಎಲ್ಲ ಪಕ್ಷಗಳು ಒತ್ತಾಯಿಸಿವೆ. ಆದರೆ, ರಾಜ್ಯದ ಹಬ್ಬಗಳನ್ನು ಗಮನಿಸಿ ಮತದಾನದ ದಿನವನ್ನು ನಿಗದಿಪಡಿಸಲಾಗುವುದು’ ಎಂದು ಸಿಇಸಿ ತಿಳಿಸಿದರು.</p>.<p>ಮತದಾರರ ವಯಸ್ಸಿನ ವಿವರಗಳನ್ನು ಪ್ರಕಟಿಸಲು ಜಿಲ್ಲಾ ಚುನಾವಣಾಧಿಕಾರಿಗಳು ನಿರಾಕರಿಸುತ್ತಿರುವುದಕ್ಕೆ ಆಡಳಿತಾರೂಢ ಡಿಎಂಕೆ ಆಕ್ಷೇಪಿಸಿದೆ. ಅಲ್ಲದೆ, ಏಕರೂಪದ ಮತ್ತು ಪ್ರಮಾಣಿತ ಮತದಾರರ ಪಟ್ಟಿಯನ್ನು ಪ್ರಕಟಿಸುವಂತೆ ಮುಖ್ಯ ಚುನಾವಣಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದೆ.</p>.<p>‘ಈಗಾಗಲೇ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಮತ್ತು ಇತರ ವಿವರಗಳನ್ನು ಗಣತಿ ನಮೂನೆಗೆ ಅನುಗುಣವಾಗಿ ದಾಖಲಿಸಿಲ್ಲ. ಹಳೆಯ ಮತದಾರರ ಪಟ್ಟಿಯ ವಿವರಗಳನ್ನೇ ಉಲ್ಲೇಖಿಸಲಾಗಿದೆ. ಇದನ್ನು ಶೀಘ್ರದಲ್ಲೇ ಸರಿಪಡಿಸಬೇಕು. ಇದಕ್ಕಾಗಿ ವಿಶೇಷ ಅಭಿಯಾನ ನಡೆಸಬೇಕು’ ಎಂದು ಡಿಎಂಕೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ ಮನವಿ ಮಾಡಿದರು.</p>.<p>ಸಿಇಸಿ ಮತ್ತು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.</p>.<p>‘ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕೆಂದು ಎಲ್ಲ ಪಕ್ಷಗಳು ಒತ್ತಾಯಿಸಿವೆ. ಆದರೆ, ರಾಜ್ಯದ ಹಬ್ಬಗಳನ್ನು ಗಮನಿಸಿ ಮತದಾನದ ದಿನವನ್ನು ನಿಗದಿಪಡಿಸಲಾಗುವುದು’ ಎಂದು ಸಿಇಸಿ ತಿಳಿಸಿದರು.</p>.<p>ಮತದಾರರ ವಯಸ್ಸಿನ ವಿವರಗಳನ್ನು ಪ್ರಕಟಿಸಲು ಜಿಲ್ಲಾ ಚುನಾವಣಾಧಿಕಾರಿಗಳು ನಿರಾಕರಿಸುತ್ತಿರುವುದಕ್ಕೆ ಆಡಳಿತಾರೂಢ ಡಿಎಂಕೆ ಆಕ್ಷೇಪಿಸಿದೆ. ಅಲ್ಲದೆ, ಏಕರೂಪದ ಮತ್ತು ಪ್ರಮಾಣಿತ ಮತದಾರರ ಪಟ್ಟಿಯನ್ನು ಪ್ರಕಟಿಸುವಂತೆ ಮುಖ್ಯ ಚುನಾವಣಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದೆ.</p>.<p>‘ಈಗಾಗಲೇ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಮತ್ತು ಇತರ ವಿವರಗಳನ್ನು ಗಣತಿ ನಮೂನೆಗೆ ಅನುಗುಣವಾಗಿ ದಾಖಲಿಸಿಲ್ಲ. ಹಳೆಯ ಮತದಾರರ ಪಟ್ಟಿಯ ವಿವರಗಳನ್ನೇ ಉಲ್ಲೇಖಿಸಲಾಗಿದೆ. ಇದನ್ನು ಶೀಘ್ರದಲ್ಲೇ ಸರಿಪಡಿಸಬೇಕು. ಇದಕ್ಕಾಗಿ ವಿಶೇಷ ಅಭಿಯಾನ ನಡೆಸಬೇಕು’ ಎಂದು ಡಿಎಂಕೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>