ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆಯೂ ಮಾತನಾಡಿರುವ ಅವರು, ಕಳೆದ ಕೆಲವು ವರ್ಷಗಳಲ್ಲಿ ಸಿಎಎ ಬಗ್ಗೆ ಮುಸ್ಲಿಮರನ್ನು ತಪ್ಪು ದಾರಿಗೆಳೆಯಲಾಗುತ್ತಿದೆ. ಈ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ. ಯಾವ ಪರಿಣಾಮವೂ ಬೀರದು. ಅಫ್ಗಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದ ಸಮಸ್ಯೆಗೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುತ್ತದೆ. ಯಾವುದೇ ಭಾರತೀಯರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಅಂತ ಯಾವುದೇ ಅವಕಾಶವೂ ಈ ಕಾನೂನಿನಲ್ಲಿ ಇಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.