<p><strong>ಚೆನ್ನೈ: </strong>ರಾಜ್ಯದಲ್ಲಿ ರಾಜಕೀಯ ಸಭೆಗಳು ಮತ್ತು ರ್ಯಾಲಿ ಆಯೋಜಿಸಲು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರಚಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ತಮಿಳುನಾಡು ಸರ್ಕಾರವು ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ.</p><p>ಎಸ್ಒಪಿ ರಚನೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನೀಡಿರುವ ಗಡುವು ಮುಗಿಯಲು ಒಂದು ವಾರ ಬಾಕಿ ಇರುವಾಗಲೇ ಸರ್ಕಾರ ಸಭೆ ಕರೆದಿದೆ.</p><p>ಗುರುವಾರ ನಡೆಯಲಿರುವ ಸಭೆಯಲ್ಲಿ ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಚುನಾವಣಾ ಆಯೋಗದ ಮಾನ್ಯತೆ ಹೊಂದಿರುವ ರಾಜಕೀಯ ಪಕ್ಷಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆದರೆ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ಸಭೆಯಲ್ಲಿ ಭಾಗವಹಿಸುತ್ತಿಲ್ಲ.</p><p>ಇತ್ತೀಚೆಗೆ ಕರೂರಿನಲ್ಲಿ ನಟ ವಿಜಯ್ ಅವರು ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟ ದುರಂತದ ಬಳಿಕ ಇಂಥ ಅವಘಡಗಳನ್ನು ತಡೆಯುವ ಉದ್ದೇಶದಿಂದ ಎಸ್ಒಪಿ ರಚನೆಗೆ ನಿರ್ಧರಿಸಲಾಗಿದೆ.</p><p>ಸಭೆ ಬಳಿಕ ಸರ್ಕಾರವು ಎಸ್ಒಪಿ ಕರಡನ್ನು ಮುಖ್ಯ ನ್ಯಾಯಮೂರ್ತಿ ಎಂ.ಎಂ.ಶ್ರೀವಾತ್ಸವ ಮತ್ತು ನ್ಯಾಯಮೂರ್ತಿ ಜಿ.ಅರುಣ್ ಮುರುಗನ್ ಅವರಿರುವ ಪೀಠಕ್ಕೆ ನವೆಂಬರ್ 11ರಂದು ಸಲ್ಲಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ರಾಜ್ಯದಲ್ಲಿ ರಾಜಕೀಯ ಸಭೆಗಳು ಮತ್ತು ರ್ಯಾಲಿ ಆಯೋಜಿಸಲು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರಚಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ತಮಿಳುನಾಡು ಸರ್ಕಾರವು ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ.</p><p>ಎಸ್ಒಪಿ ರಚನೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನೀಡಿರುವ ಗಡುವು ಮುಗಿಯಲು ಒಂದು ವಾರ ಬಾಕಿ ಇರುವಾಗಲೇ ಸರ್ಕಾರ ಸಭೆ ಕರೆದಿದೆ.</p><p>ಗುರುವಾರ ನಡೆಯಲಿರುವ ಸಭೆಯಲ್ಲಿ ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಚುನಾವಣಾ ಆಯೋಗದ ಮಾನ್ಯತೆ ಹೊಂದಿರುವ ರಾಜಕೀಯ ಪಕ್ಷಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆದರೆ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ಸಭೆಯಲ್ಲಿ ಭಾಗವಹಿಸುತ್ತಿಲ್ಲ.</p><p>ಇತ್ತೀಚೆಗೆ ಕರೂರಿನಲ್ಲಿ ನಟ ವಿಜಯ್ ಅವರು ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟ ದುರಂತದ ಬಳಿಕ ಇಂಥ ಅವಘಡಗಳನ್ನು ತಡೆಯುವ ಉದ್ದೇಶದಿಂದ ಎಸ್ಒಪಿ ರಚನೆಗೆ ನಿರ್ಧರಿಸಲಾಗಿದೆ.</p><p>ಸಭೆ ಬಳಿಕ ಸರ್ಕಾರವು ಎಸ್ಒಪಿ ಕರಡನ್ನು ಮುಖ್ಯ ನ್ಯಾಯಮೂರ್ತಿ ಎಂ.ಎಂ.ಶ್ರೀವಾತ್ಸವ ಮತ್ತು ನ್ಯಾಯಮೂರ್ತಿ ಜಿ.ಅರುಣ್ ಮುರುಗನ್ ಅವರಿರುವ ಪೀಠಕ್ಕೆ ನವೆಂಬರ್ 11ರಂದು ಸಲ್ಲಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>