<p><strong>ಪಟ್ನಾ:</strong> ಕಳೆದ ತಿಂಗಳಷ್ಟೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದ್ದ ನೂತನ ಸತ್ತರ್ಘಾಟ್ ಸೇತುವೆಗೆ ಸಂಪರ್ಕ ಕಲ್ಪಿಸಲು ನಿರ್ಮಿಸಲಾಗಿದ್ದ ರಸ್ತೆಯು ಪ್ರವಾಹದಿಂದಾಗಿಈಗ ಕೊಚ್ಚಿಹೋಗಿದೆ. ಇದು, ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.</p>.<p>ರಸ್ತೆ ಕುಸಿದಿರುವ ಚಿತ್ರವನ್ನು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ‘₹100 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆಗೆ ಇಷ್ಟು ಬೇಗ ಹಾನಿಯಾಗಿದೆ. ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ನಿತೀಶ್ಕುಮಾರ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ</p>.<p>ತೇಜಸ್ವಿ ಯಾದವ್ ಹೇಳಿಕೆಗೆ ಜೆಡಿಯು, ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ‘ವಿರೋಧ ಪಕ್ಷದ ಮುಖಂಡರಾಗಿ ಇಂತಹಬೇಜವಾಬ್ದಾರಿ ಹೇಳಿಕೆಯನ್ನು ಹೇಗೆ ನೀಡುತ್ತಿದ್ದೀರಿ. ಸೇತುವೆ ಮತ್ತು ಸಂಪರ್ಕ ರಸ್ತೆ ನಡುವಿನ ವ್ಯತ್ಯಾಸ ತಿಳಿಯುವುದಿಲ್ಲವೇ?’ ಎಂದಿದ್ದಾರೆ. ರಸ್ತೆಯ ಒಂದು ಭಾಗ ಕುಸಿದಿದೆ ಎಂದು ರಸ್ತೆ ನಿರ್ಮಾಣ ಇಲಾಖೆಸ್ಪಷ್ಟಪಡಿಸಿದೆ.</p>.<p>ಗೋಪಾಲ್ಗಂಜ್ ಮತ್ತು ಪೂರ್ವ ಚಂಪಾರಣ್ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಇದನ್ನು ಜೂನ್ 16 ರಂದು ಉದ್ಘಾಟಿಸಲಾಗಿತ್ತು.ಒಂದು ಕಿ.ಮೀ. ಉದ್ದದ ಈ ಸೇತುವೆಯನ್ನು ನಿರ್ಮಿಸಲು ಎಂಟು ವರ್ಷ ತೆಗೆದುಕೊಳ್ಳಲಾಗಿತ್ತು.</p>.<p><strong>ಪ್ರವಾಹಕ್ಕೆ ತತ್ತರಿಸಿದ ಬಿಹಾರ: </strong>ರಾಜ್ಯದ ಒಟ್ಟು ಎಂಟು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗೋಪಾಲ್ಗಂಜ್ ಮತ್ತು ಪೂರ್ವ ಚಂಪಾರಣ್ ಕೂಡ ಸೇರಿದೆ. ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹ 2.18 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ.ಈವರೆಗೆ 3,376 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಕಳೆದ ತಿಂಗಳಷ್ಟೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದ್ದ ನೂತನ ಸತ್ತರ್ಘಾಟ್ ಸೇತುವೆಗೆ ಸಂಪರ್ಕ ಕಲ್ಪಿಸಲು ನಿರ್ಮಿಸಲಾಗಿದ್ದ ರಸ್ತೆಯು ಪ್ರವಾಹದಿಂದಾಗಿಈಗ ಕೊಚ್ಚಿಹೋಗಿದೆ. ಇದು, ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.</p>.<p>ರಸ್ತೆ ಕುಸಿದಿರುವ ಚಿತ್ರವನ್ನು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ‘₹100 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆಗೆ ಇಷ್ಟು ಬೇಗ ಹಾನಿಯಾಗಿದೆ. ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ನಿತೀಶ್ಕುಮಾರ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ</p>.<p>ತೇಜಸ್ವಿ ಯಾದವ್ ಹೇಳಿಕೆಗೆ ಜೆಡಿಯು, ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ‘ವಿರೋಧ ಪಕ್ಷದ ಮುಖಂಡರಾಗಿ ಇಂತಹಬೇಜವಾಬ್ದಾರಿ ಹೇಳಿಕೆಯನ್ನು ಹೇಗೆ ನೀಡುತ್ತಿದ್ದೀರಿ. ಸೇತುವೆ ಮತ್ತು ಸಂಪರ್ಕ ರಸ್ತೆ ನಡುವಿನ ವ್ಯತ್ಯಾಸ ತಿಳಿಯುವುದಿಲ್ಲವೇ?’ ಎಂದಿದ್ದಾರೆ. ರಸ್ತೆಯ ಒಂದು ಭಾಗ ಕುಸಿದಿದೆ ಎಂದು ರಸ್ತೆ ನಿರ್ಮಾಣ ಇಲಾಖೆಸ್ಪಷ್ಟಪಡಿಸಿದೆ.</p>.<p>ಗೋಪಾಲ್ಗಂಜ್ ಮತ್ತು ಪೂರ್ವ ಚಂಪಾರಣ್ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಇದನ್ನು ಜೂನ್ 16 ರಂದು ಉದ್ಘಾಟಿಸಲಾಗಿತ್ತು.ಒಂದು ಕಿ.ಮೀ. ಉದ್ದದ ಈ ಸೇತುವೆಯನ್ನು ನಿರ್ಮಿಸಲು ಎಂಟು ವರ್ಷ ತೆಗೆದುಕೊಳ್ಳಲಾಗಿತ್ತು.</p>.<p><strong>ಪ್ರವಾಹಕ್ಕೆ ತತ್ತರಿಸಿದ ಬಿಹಾರ: </strong>ರಾಜ್ಯದ ಒಟ್ಟು ಎಂಟು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗೋಪಾಲ್ಗಂಜ್ ಮತ್ತು ಪೂರ್ವ ಚಂಪಾರಣ್ ಕೂಡ ಸೇರಿದೆ. ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹ 2.18 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ.ಈವರೆಗೆ 3,376 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>