<p><strong>ನವದೆಹಲಿ</strong>: ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುನ್ನವೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿತ್ತು ಎಂಬ ದೂರು ರಾಜಕೀಯ ಪ್ರೇರಿತವಾದುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದೆಹಲಿ ನ್ಯಾಯಾಲಯಕ್ಕೆ ಶನಿವಾರ ಹೇಳಿಕೆ ಸಲ್ಲಿಸಿದ್ದಾರೆ.</p>.<p>ಈ ಆರೋಪದ ಬಗ್ಗೆ ತನಿಖೆ ನಡೆಸಲು ನಿರಾಕರಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ 2025ರ ಸೆ.11ರಂದು ಸಲ್ಲಿಸಲಾಗಿದ್ದ ಪರಿಷ್ಕರಣಾ ಅರ್ಜಿಯ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶ ವಿಶಾಲ್ ಗೊಗನೆ ಅವರ ಮುಂದೆ ಈ ಹೇಳಿಕೆ ಸಲ್ಲಿಸಲಾಗಿದೆ.</p>.<p>ಸೋನಿಯಾ ಗಾಂಧಿ ಅವರ ಪರ ವಕೀಲರ ತಂಡವು ಹೇಳಿಕೆ ಸಲ್ಲಿಸಿದ ಬಳಿಕ, ಫೆ.21ರಂದು ಮುಂದಿನ ವಿಚಾರಣೆ ನಡೆಸುವುದಾಗಿ ನ್ಯಾಯಾಲಯವು ಪ್ರಕಟಿಸಿತು.</p>.<p>ರೂಸ್ ಅವೆನ್ಯೂ ನ್ಯಾಯಾಲಯಗಳ ಸೆಂಟ್ರಲ್ ದೆಹಲಿ ಕೋರ್ಟ್ ಬಾರ್ ಅಸೋಸಿಯೇಷನ್ನ ಉಪಾಧ್ಯಕ್ಷ, ವಕೀಲ ವಿಕಾಸ್ ತ್ರಿಪಾಠಿ ಸಲ್ಲಿಸಿದ್ದ ದೂರನ್ನು ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ವಜಾಗೊಳಿಸಿತ್ತು.</p>.<p>ವಕೀಲರಾದ ತರನ್ನುಮ್ ಚೀಮಾ, ಕನಿಷ್ಕಾ ಸಿಂಗ್, ಆಕಾಶ್ ಸಿಂಗ್ ಅವರು ಸೋನಿಯಾ ಗಾಂಧಿ ಪರ ನ್ಯಾಯಾಲಯಕ್ಕೆ ಹೇಳಿಕೆ ಸಲ್ಲಿಸಿದರು. ಇದು ತಪ್ಪು ಕಲ್ಪನೆಯ ಆರೋಪ. ಕ್ಷುಲ್ಲಕ, ರಾಜಕೀಯ ಪ್ರೇರಿತ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುನ್ನವೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿತ್ತು ಎಂಬ ದೂರು ರಾಜಕೀಯ ಪ್ರೇರಿತವಾದುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದೆಹಲಿ ನ್ಯಾಯಾಲಯಕ್ಕೆ ಶನಿವಾರ ಹೇಳಿಕೆ ಸಲ್ಲಿಸಿದ್ದಾರೆ.</p>.<p>ಈ ಆರೋಪದ ಬಗ್ಗೆ ತನಿಖೆ ನಡೆಸಲು ನಿರಾಕರಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ 2025ರ ಸೆ.11ರಂದು ಸಲ್ಲಿಸಲಾಗಿದ್ದ ಪರಿಷ್ಕರಣಾ ಅರ್ಜಿಯ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶ ವಿಶಾಲ್ ಗೊಗನೆ ಅವರ ಮುಂದೆ ಈ ಹೇಳಿಕೆ ಸಲ್ಲಿಸಲಾಗಿದೆ.</p>.<p>ಸೋನಿಯಾ ಗಾಂಧಿ ಅವರ ಪರ ವಕೀಲರ ತಂಡವು ಹೇಳಿಕೆ ಸಲ್ಲಿಸಿದ ಬಳಿಕ, ಫೆ.21ರಂದು ಮುಂದಿನ ವಿಚಾರಣೆ ನಡೆಸುವುದಾಗಿ ನ್ಯಾಯಾಲಯವು ಪ್ರಕಟಿಸಿತು.</p>.<p>ರೂಸ್ ಅವೆನ್ಯೂ ನ್ಯಾಯಾಲಯಗಳ ಸೆಂಟ್ರಲ್ ದೆಹಲಿ ಕೋರ್ಟ್ ಬಾರ್ ಅಸೋಸಿಯೇಷನ್ನ ಉಪಾಧ್ಯಕ್ಷ, ವಕೀಲ ವಿಕಾಸ್ ತ್ರಿಪಾಠಿ ಸಲ್ಲಿಸಿದ್ದ ದೂರನ್ನು ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ವಜಾಗೊಳಿಸಿತ್ತು.</p>.<p>ವಕೀಲರಾದ ತರನ್ನುಮ್ ಚೀಮಾ, ಕನಿಷ್ಕಾ ಸಿಂಗ್, ಆಕಾಶ್ ಸಿಂಗ್ ಅವರು ಸೋನಿಯಾ ಗಾಂಧಿ ಪರ ನ್ಯಾಯಾಲಯಕ್ಕೆ ಹೇಳಿಕೆ ಸಲ್ಲಿಸಿದರು. ಇದು ತಪ್ಪು ಕಲ್ಪನೆಯ ಆರೋಪ. ಕ್ಷುಲ್ಲಕ, ರಾಜಕೀಯ ಪ್ರೇರಿತ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>