ಮಾಜಿ ಐಪಿಎಸ್ ಅಧಿಕಾರಿಯೂಆಗಿರುವ ಅಣ್ಣಾಮಲೈ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬೂತ್ ಮಟ್ಟದಲ್ಲಿ ಮೈತ್ರಿ ಧರ್ಮಕಾಪಾಡಿಕೊಳ್ಳುವುದು ಕಷ್ಟ. 9 ಜಿಲ್ಲೆಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ, ನಮ್ಮ ಸ್ಥಳೀಯ ಕಾರ್ಯಕರ್ತರು ಮತ್ತು ಮುಖಂಡರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವುದಕ್ಕಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ನಾವು ಮಾಡಿರುವ ಮನವಿಯನ್ನು ಎಐಎಡಿಎಂಕೆ ಗೌರವಿಸಿದೆ. ಆದರೆ, ನಮ್ಮ ಬೂತ್ ಮಟ್ಟದ ನಾಯಕರಿಗೆ ಅವಕಾಶ ಕಲ್ಪಿಸಿಕೊಡುವ ಅಗತ್ಯವಿದೆ. ಹಾಗಾಗಿ,ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.