<p><strong>ನವದೆಹಲಿ:</strong> ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳ ಪ್ರಸಾರದಿಂದ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಹೆಚ್ಚು ಧಕ್ಕೆ ಉಂಟಾಗಲಿದೆ’ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಗುರುವಾರ ಹೇಳಿದರು. </p>.<p>‘ಚುನಾವಣಾ ವ್ಯವಸ್ಥೆಯ ಪ್ರಮುಖ ಹಂತಗಳ ಸಂದರ್ಭಗಳನ್ನೇ ಗುರಿಯಾಗಿಸಿ ಸುಳ್ಳು ಸುದ್ದಿಗಳನ್ನು ಪ್ರಸರಣ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p class="bodytext">ಚುನಾವಣಾ ಆಯೋಗ ಇಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ವಿವಿಧ ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರಮುಖರು ಭಾಗವಹಿಸಿದ್ದರು.</p>.<p class="bodytext">ಸಮ್ಮೇಳನದಲ್ಲಿ ಭಾಗವಹಿಸಿದ್ದ ಶ್ರೀಲಂಕಾ, ಉಜ್ಬೇಕಿಸ್ತಾನ, ಮಾರಿಷಸ್, ಇಂಡೊನೇಷ್ಯಾ, ಕಜಕಸ್ತಾನದ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಕೂಡ ಚುನಾವಣಾ ಪ್ರಕ್ರಿಯೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ ಸುಳ್ಳು ಮಾಹಿತಿಗಳ ಕುರಿತು ಕಳವಳ ವ್ಯಕ್ತಪಡಿಸಿದರು.</p>.<p>ನಮೀಬಿಯಾ, ಇಂಡೊನೇಷ್ಯಾದ ಸಿಇಸಿಗಳು, ನಕಲಿ ಸುದ್ದಿಗಳ ಹಾವಳಿ ತಡೆಗೆ ತ್ವರಿತವಾಗಿ ಮಾಹಿತಿ ಹಂಚಿಕೊಳ್ಳಲು ಪ್ರತ್ಯೇಕ ವಾಟ್ಸ್ಆ್ಯಪ್ ಚಾನಲ್ ಹೊಂದುವ ಸಾಧ್ಯತೆ ಕುರಿತ ಸಲಹೆ ಮುಂದಿಟ್ಟರು.</p>.<p>ತಮ್ಮ ಭಾಷಣದಲ್ಲಿ ರಾಜೀವ್ ಕುಮಾರ್ ಅವರು, ಕೃತಕಬುದ್ಧಿಮತ್ತೆ (ಎ.ಐ) ಬೆಂಬಲಿತ ಚುನಾವಣಾ ಪ್ರಕ್ರಿಯೆ, ಆನ್ಲೈನ್ ಮತದಾನ, ಗುರುತಿನ ಖಾತರಿಗೆ ಬಯೊಮೆಟ್ರಿಕ್ ಬಳಕೆ ಸಾಧ್ಯತೆ ಉಲ್ಲೇಖಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳ ಪ್ರಸಾರದಿಂದ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಹೆಚ್ಚು ಧಕ್ಕೆ ಉಂಟಾಗಲಿದೆ’ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಗುರುವಾರ ಹೇಳಿದರು. </p>.<p>‘ಚುನಾವಣಾ ವ್ಯವಸ್ಥೆಯ ಪ್ರಮುಖ ಹಂತಗಳ ಸಂದರ್ಭಗಳನ್ನೇ ಗುರಿಯಾಗಿಸಿ ಸುಳ್ಳು ಸುದ್ದಿಗಳನ್ನು ಪ್ರಸರಣ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p class="bodytext">ಚುನಾವಣಾ ಆಯೋಗ ಇಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ವಿವಿಧ ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರಮುಖರು ಭಾಗವಹಿಸಿದ್ದರು.</p>.<p class="bodytext">ಸಮ್ಮೇಳನದಲ್ಲಿ ಭಾಗವಹಿಸಿದ್ದ ಶ್ರೀಲಂಕಾ, ಉಜ್ಬೇಕಿಸ್ತಾನ, ಮಾರಿಷಸ್, ಇಂಡೊನೇಷ್ಯಾ, ಕಜಕಸ್ತಾನದ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಕೂಡ ಚುನಾವಣಾ ಪ್ರಕ್ರಿಯೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ ಸುಳ್ಳು ಮಾಹಿತಿಗಳ ಕುರಿತು ಕಳವಳ ವ್ಯಕ್ತಪಡಿಸಿದರು.</p>.<p>ನಮೀಬಿಯಾ, ಇಂಡೊನೇಷ್ಯಾದ ಸಿಇಸಿಗಳು, ನಕಲಿ ಸುದ್ದಿಗಳ ಹಾವಳಿ ತಡೆಗೆ ತ್ವರಿತವಾಗಿ ಮಾಹಿತಿ ಹಂಚಿಕೊಳ್ಳಲು ಪ್ರತ್ಯೇಕ ವಾಟ್ಸ್ಆ್ಯಪ್ ಚಾನಲ್ ಹೊಂದುವ ಸಾಧ್ಯತೆ ಕುರಿತ ಸಲಹೆ ಮುಂದಿಟ್ಟರು.</p>.<p>ತಮ್ಮ ಭಾಷಣದಲ್ಲಿ ರಾಜೀವ್ ಕುಮಾರ್ ಅವರು, ಕೃತಕಬುದ್ಧಿಮತ್ತೆ (ಎ.ಐ) ಬೆಂಬಲಿತ ಚುನಾವಣಾ ಪ್ರಕ್ರಿಯೆ, ಆನ್ಲೈನ್ ಮತದಾನ, ಗುರುತಿನ ಖಾತರಿಗೆ ಬಯೊಮೆಟ್ರಿಕ್ ಬಳಕೆ ಸಾಧ್ಯತೆ ಉಲ್ಲೇಖಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>