ಚುನಾವಣಾ ಅಕ್ರಮದ ಆರೋಪದ ಕಾರಣಕ್ಕೆ ಸಂದೇಶ್ಖಾಲಿಯಲ್ಲಿ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆಯಿತು. ಟಿಎಂಸಿಯ ಗೂಂಡಾಗಳು ಮತದಾರರಿಗೆ ಹಕ್ಕು ಚಲಾಯಿಸಲು ಬಿಡುತ್ತಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾ ಆರೋಪಿಸಿದರು. ಬಿಜೆಪಿಯ ಗೂಂಡಾಗಳು ಹಾಗೂ ರೇಖಾ ಅವರು ಚುನಾವಣೆಯ ಸಂದರ್ಭದಲ್ಲಿ ವಾತಾವರಣ ಹಾಳುಗೆಡವಲು ಯತ್ನಿಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿತು.