<p><strong>ಬಹರಂಪುರ್(ಪಶ್ಚಿಮ ಬಂಗಾಳ):</strong> ಲೋಕಸಭೆಗೆ ಈವರೆಗೆ ನಡೆದಿರುವ 191 ಕ್ಷೇತ್ರಗಳ ಮತದಾನವು, ಎನ್ಡಿಎ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿಗೆ ಅಧಿಕಾರಕ್ಕೇರುವ ಸೂಚನೆ ಕೊಟ್ಟಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಎಲ್ಲ 80 <sup>ಕ್ಷೇತ್ರಗಳ</sup> ಗೆಲುವನ್ನು ಮೋದಿಗೆ ಉಡುಗೊರೆಯಾಗಿ ನೀಡಲಾಗುವುದು ಎಂದು ಅವರು ಬಹರಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿರ್ಮಲ್ ಕುಮಾರ್ ಸಹಾ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.</p><p>ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಎರಡು ಹಂತಗಳಲ್ಲಿ ಮತದಾನ ಮುಗಿದಿದೆ. 3ನೇ ಹಂತದ ಮತದಾನ ಮೇ 7ಕ್ಕೆ ನಡೆಯಲಿದೆ.</p><p>ಸಂದೇಶ್ಖಾಲಿ ಅಪರಾಧ ಮತ್ತು ರಾಮನವಮಿ ಗಲಭೆಗಳ ತಪ್ಪಿತಸ್ಥರನ್ನು ಕಾನೂನಿನ ಮೂಲಕ ಶಿಕ್ಷಿಸಲಾಗುವುದು ಎಂದು ಹೇಳಿದರು.</p><p>‘ಇಂತಹ ಘಟನೆಗಳು ಉತ್ತರ ಪ್ರದೇಶದಲ್ಲಿ ನಡೆದಿದ್ದರೆ ತಪ್ಪಿತಸ್ಥರ ಮುಂದಿನ 7 ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳುವಂತಹ ಪಾಠ ಕಲಿಸುತ್ತಿದ್ದೆ’ ಎಂದೂ ಗುಡುಗಿದ್ದಾರೆ.</p><p>‘ಯಾವುದೇ ತಾರತಮ್ಯವಿಲ್ಲದ ಅಭಿವೃದ್ಧಿಯ ಗ್ಯಾರಂಟಿ ನೀಡಲು ನಾನು ಇಲ್ಲಿಗೆ ಬಂದಿರುವೆ’ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹರಂಪುರ್(ಪಶ್ಚಿಮ ಬಂಗಾಳ):</strong> ಲೋಕಸಭೆಗೆ ಈವರೆಗೆ ನಡೆದಿರುವ 191 ಕ್ಷೇತ್ರಗಳ ಮತದಾನವು, ಎನ್ಡಿಎ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿಗೆ ಅಧಿಕಾರಕ್ಕೇರುವ ಸೂಚನೆ ಕೊಟ್ಟಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಎಲ್ಲ 80 <sup>ಕ್ಷೇತ್ರಗಳ</sup> ಗೆಲುವನ್ನು ಮೋದಿಗೆ ಉಡುಗೊರೆಯಾಗಿ ನೀಡಲಾಗುವುದು ಎಂದು ಅವರು ಬಹರಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿರ್ಮಲ್ ಕುಮಾರ್ ಸಹಾ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.</p><p>ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಎರಡು ಹಂತಗಳಲ್ಲಿ ಮತದಾನ ಮುಗಿದಿದೆ. 3ನೇ ಹಂತದ ಮತದಾನ ಮೇ 7ಕ್ಕೆ ನಡೆಯಲಿದೆ.</p><p>ಸಂದೇಶ್ಖಾಲಿ ಅಪರಾಧ ಮತ್ತು ರಾಮನವಮಿ ಗಲಭೆಗಳ ತಪ್ಪಿತಸ್ಥರನ್ನು ಕಾನೂನಿನ ಮೂಲಕ ಶಿಕ್ಷಿಸಲಾಗುವುದು ಎಂದು ಹೇಳಿದರು.</p><p>‘ಇಂತಹ ಘಟನೆಗಳು ಉತ್ತರ ಪ್ರದೇಶದಲ್ಲಿ ನಡೆದಿದ್ದರೆ ತಪ್ಪಿತಸ್ಥರ ಮುಂದಿನ 7 ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳುವಂತಹ ಪಾಠ ಕಲಿಸುತ್ತಿದ್ದೆ’ ಎಂದೂ ಗುಡುಗಿದ್ದಾರೆ.</p><p>‘ಯಾವುದೇ ತಾರತಮ್ಯವಿಲ್ಲದ ಅಭಿವೃದ್ಧಿಯ ಗ್ಯಾರಂಟಿ ನೀಡಲು ನಾನು ಇಲ್ಲಿಗೆ ಬಂದಿರುವೆ’ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>