<p><strong>ಗುವಾಹಟಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ಮಂಡಿಸಿದ್ದಾರೆ.</p><p>ಅಸ್ಸಾಂನ ಜನಪ್ರಿಯ ಗಾಯಕಿ ಜುಬೀನ್ ಗರ್ಗ್ ಅವರ ಸಾವಿನ ಕುರಿತಾದ ಚರ್ಚೆಯ ಬೆನ್ನಲ್ಲೇ ವಿರೋಧ ಪಕ್ಷಗಳಾದ ಕಾಂಗ್ರೆಸ್, ಸಿಪಿಐ(ಎಂ) ಶಾಸಕರು ಸಭಾತ್ಯಾಗ ಮಾಡಿದ್ದರು. ವಿಪಕ್ಷಗಳ ಶಾಸಕರ ಅನುಪಸ್ಥಿತಿಯಲ್ಲಿ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ–2025 ಅನ್ನು ಮಂಡಿಸಿದ್ದಾರೆ.</p><p>ಚಳಿಗಾಲದ ಅಧಿವೇಶನದ ಮೊದಲ ದಿನದಂದು ಮಸೂದೆಯನ್ನು ಮಂಡಿಸಲಾಗಿದ್ದು, ಮಸೂದೆಗೆ ಅಂಗೀಕಾರ ಸಿಕ್ಕ ಬಳಿಕ ಚರ್ಚೆ ನಡೆಸಲಾಗುತ್ತದೆ. ಹಾಗೆಯೇ ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುತ್ತದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.</p><p>ನವೆಂಬರ್ 10ರಂದು ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಚಿವ ಸಂಪುಟ ಸಭೆ ಅನುಮೋದನೆ ದೊರಕಿತ್ತು. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ಮಂಡಿಸಿದ್ದಾರೆ.</p><p>ಅಸ್ಸಾಂನ ಜನಪ್ರಿಯ ಗಾಯಕಿ ಜುಬೀನ್ ಗರ್ಗ್ ಅವರ ಸಾವಿನ ಕುರಿತಾದ ಚರ್ಚೆಯ ಬೆನ್ನಲ್ಲೇ ವಿರೋಧ ಪಕ್ಷಗಳಾದ ಕಾಂಗ್ರೆಸ್, ಸಿಪಿಐ(ಎಂ) ಶಾಸಕರು ಸಭಾತ್ಯಾಗ ಮಾಡಿದ್ದರು. ವಿಪಕ್ಷಗಳ ಶಾಸಕರ ಅನುಪಸ್ಥಿತಿಯಲ್ಲಿ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ–2025 ಅನ್ನು ಮಂಡಿಸಿದ್ದಾರೆ.</p><p>ಚಳಿಗಾಲದ ಅಧಿವೇಶನದ ಮೊದಲ ದಿನದಂದು ಮಸೂದೆಯನ್ನು ಮಂಡಿಸಲಾಗಿದ್ದು, ಮಸೂದೆಗೆ ಅಂಗೀಕಾರ ಸಿಕ್ಕ ಬಳಿಕ ಚರ್ಚೆ ನಡೆಸಲಾಗುತ್ತದೆ. ಹಾಗೆಯೇ ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುತ್ತದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.</p><p>ನವೆಂಬರ್ 10ರಂದು ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಚಿವ ಸಂಪುಟ ಸಭೆ ಅನುಮೋದನೆ ದೊರಕಿತ್ತು. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>