<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದವರನ್ನು ವಂಚಿಸುತ್ತಿದೆ. ನಿಯಂತ್ರಣಕ್ಕೆ ಬಾರದ ನಿರುದ್ಯೋಗ ಮತ್ತು ನಿಯಂತ್ರಣ ಮೀರಿದ ಹಣದುಬ್ಬರದಂಥ ಸಮಸ್ಯೆಗಳಿಗೆ ಕಾಂಗ್ರೆಸ್ ಹೆಚ್ಚಿನ ಮಹತ್ವ ನೀಡುತ್ತದೆ. ಈ ಸಮಸ್ಯೆಗಳ ಕುರಿತು ರಾಷ್ಟ್ರವ್ಯಾಪಿ ಅಭಿಯಾನ ರೂಪಿಸಲಿದ್ದೇವೆ’ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದರು. </p><p>ಚುನಾವಣೆ ದೃಷ್ಟಿಯಿಂದ ಪಕ್ಷದ ಸಂಘಟನೆ, ದೇಶಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಸಭೆ ನಡೆಸಿತು. ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳು ಪಾಲ್ಗೊಂಡಿದ್ದ ಈ ಸಭೆಯ ನೇತೃತ್ವವನ್ನು ಖರ್ಗೆ ವಹಿಸಿದ್ದರು. </p>.<p>ಇದೇವೇಳೆ, ಸೆಬಿ ಮತ್ತು ಅದಾನಿ ನಡುವಿನ ಸಂಬಂಧದ ಕುರಿತೂ ಕೂಲಂಕಷ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ‘ಸಣ್ಣ ಮಟ್ಟದ ಹೂಡಿಕೆದಾರರ ಹಣಕ್ಕೆ ಹಾನಿ ಮಾಡುವಂತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೂಡಲೇ ಸೆಬಿ ಮುಖ್ಯಸ್ಥರ ರಾಜೀನಾಮೆ ಪಡೆಯಬೇಕು. ಈ ನಿಟ್ಟಿನಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಬೇಕು’ ಎಂದು ಹೇಳಿದರು.</p><p>‘ಎನ್ಡಿಎ ಸರ್ಕಾರವು ಸಂವಿಧಾನದ ಮೇಲೆ ದಾಳಿ ನಡೆಸುವುದನ್ನು ಈಗಲೂ ಮುಂದುವರಿಸಿದೆ. ಜನಗಣತಿ ನಡೆಸಬೇಕು ಎಂಬುದು ಜನರ ಆಗ್ರಹವಾಗಿದೆ’ ಎಂದರು. </p><p>ಜೊತೆಗೆ, ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸುವ ನಿಟ್ಟಿನಲ್ಲಿ ಮತ್ತು ಅಗ್ನಿಪಥ ಯೋಜನೆಯನ್ನು ರದ್ದುಪಡಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹೇಳಿದರು. </p>.ರಾಷ್ಟ್ರೀಯ ಭದ್ರತೆ | ಸಂಸತ್ತು ವಿಶ್ವಾಸಕ್ಕೆ ಪಡೆಯಿರಿ: ಮಲ್ಲಿಕಾರ್ಜುನ ಖರ್ಗೆ. ಮಲ್ಲಿಕಾರ್ಜುನ ಖರ್ಗೆ ಜನ್ಮದಿನ: ಅರ್ಥಪೂರ್ಣ ಆಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದವರನ್ನು ವಂಚಿಸುತ್ತಿದೆ. ನಿಯಂತ್ರಣಕ್ಕೆ ಬಾರದ ನಿರುದ್ಯೋಗ ಮತ್ತು ನಿಯಂತ್ರಣ ಮೀರಿದ ಹಣದುಬ್ಬರದಂಥ ಸಮಸ್ಯೆಗಳಿಗೆ ಕಾಂಗ್ರೆಸ್ ಹೆಚ್ಚಿನ ಮಹತ್ವ ನೀಡುತ್ತದೆ. ಈ ಸಮಸ್ಯೆಗಳ ಕುರಿತು ರಾಷ್ಟ್ರವ್ಯಾಪಿ ಅಭಿಯಾನ ರೂಪಿಸಲಿದ್ದೇವೆ’ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದರು. </p><p>ಚುನಾವಣೆ ದೃಷ್ಟಿಯಿಂದ ಪಕ್ಷದ ಸಂಘಟನೆ, ದೇಶಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಸಭೆ ನಡೆಸಿತು. ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳು ಪಾಲ್ಗೊಂಡಿದ್ದ ಈ ಸಭೆಯ ನೇತೃತ್ವವನ್ನು ಖರ್ಗೆ ವಹಿಸಿದ್ದರು. </p>.<p>ಇದೇವೇಳೆ, ಸೆಬಿ ಮತ್ತು ಅದಾನಿ ನಡುವಿನ ಸಂಬಂಧದ ಕುರಿತೂ ಕೂಲಂಕಷ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ‘ಸಣ್ಣ ಮಟ್ಟದ ಹೂಡಿಕೆದಾರರ ಹಣಕ್ಕೆ ಹಾನಿ ಮಾಡುವಂತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೂಡಲೇ ಸೆಬಿ ಮುಖ್ಯಸ್ಥರ ರಾಜೀನಾಮೆ ಪಡೆಯಬೇಕು. ಈ ನಿಟ್ಟಿನಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಬೇಕು’ ಎಂದು ಹೇಳಿದರು.</p><p>‘ಎನ್ಡಿಎ ಸರ್ಕಾರವು ಸಂವಿಧಾನದ ಮೇಲೆ ದಾಳಿ ನಡೆಸುವುದನ್ನು ಈಗಲೂ ಮುಂದುವರಿಸಿದೆ. ಜನಗಣತಿ ನಡೆಸಬೇಕು ಎಂಬುದು ಜನರ ಆಗ್ರಹವಾಗಿದೆ’ ಎಂದರು. </p><p>ಜೊತೆಗೆ, ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸುವ ನಿಟ್ಟಿನಲ್ಲಿ ಮತ್ತು ಅಗ್ನಿಪಥ ಯೋಜನೆಯನ್ನು ರದ್ದುಪಡಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹೇಳಿದರು. </p>.ರಾಷ್ಟ್ರೀಯ ಭದ್ರತೆ | ಸಂಸತ್ತು ವಿಶ್ವಾಸಕ್ಕೆ ಪಡೆಯಿರಿ: ಮಲ್ಲಿಕಾರ್ಜುನ ಖರ್ಗೆ. ಮಲ್ಲಿಕಾರ್ಜುನ ಖರ್ಗೆ ಜನ್ಮದಿನ: ಅರ್ಥಪೂರ್ಣ ಆಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>