<p><strong>ಕೊಚ್ಚಿ:</strong> ಈ ಬಾರಿಯ ತ್ರಿಶ್ಯೂರ್ ಪೂರಂನಲ್ಲಿ 54 ವರ್ಷದ ಥೇಚಿಕೊಟ್ಟುಕಾವು ರಾಮಚಂದ್ರನ್ ಹೆಸರಿನ ಆನೆಗೆ ಪಾಲ್ಗೊಳ್ಳಲು ಅವಕಾಶ ನೀಡುವ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಈ ಬಗ್ಗೆ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಅನು ಶಿವರಾಮನ್ ಹೇಳಿದ್ದಾರೆ.</p>.<p>ಭಾರತದ ಅತಿ ಎತ್ತರದ ಸಾಕಾನೆ ಎಂಬ ಕೀರ್ತಿಗೆ ಪಾತ್ರವಾಗಿರುವ ಈ ಆನೆಯನ್ನು ಪೂರಂನ ಪ್ರಮುಖ ಆಚರಣೆಗಳಲ್ಲಿ ಬಳಸಿಕೊಳ್ಳಲು ಅನುಮತಿ ನೀಡಬೇಕೆಂದು ಆನೆಯ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು.</p>.<p>ಪೂರಂ ಆಚರಣೆಗಳಲ್ಲಿ ಈ ಆನೆಯನ್ನು ಬಳಸಿಕೊಳ್ಳಲು ಅಧಿಕಾರಿಗಳು ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದೂ ಆನೆಯ ಮಾಲೀಕರು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದರು.</p>.<p>ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿರುವ ಕಾರಣ ಜಿಲ್ಲಾಧಿಕಾರಿ, ವಿಭಾಗೀಯ ಅರಣ್ಯಾಧಿಕಾರಿ ಮತ್ತಿತರರನ್ನು ಒಳಗೊಂಡಿರುವ ತಜ್ಞರ ಸಮಿತಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ.</p>.<p>ಉತ್ಸವಗಳ ಮೆರವಣಿಗೆಯಲ್ಲಿ ಈ ಆನೆಯನ್ನು ಬಳಸಿಕೊಳ್ಳುವುದಕ್ಕೆ ಜಿಲ್ಲಾಡಳಿತವು ನಿಷೇಧ ಹೇರಿತ್ತು. ಈ ಆನೆಯು ಭಾಗಶಃ ಕುರುಡಾಗಿದೆ.</p>.<p>ಇತ್ತೀಚೆಗಿನ ಕೆಲವು ವರ್ಷಗಳಿಂದ ರಾಮಚಂದ್ರನ್ ಆನೆಯು ತ್ರಿಶ್ಯೂರ್ನ ವಡಕ್ಕುನಾಥನ್ ದೇವಾಲಯದ ದಕ್ಷಿಣ ಭಾಗದಲ್ಲಿರುವ ಬಾಗಿಲನ್ನು ತೆರೆಯುವ ಮೂಲಕ ಪೂರಂಗೆ ಚಾಲನೆ ನೀಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಈ ಬಾರಿಯ ತ್ರಿಶ್ಯೂರ್ ಪೂರಂನಲ್ಲಿ 54 ವರ್ಷದ ಥೇಚಿಕೊಟ್ಟುಕಾವು ರಾಮಚಂದ್ರನ್ ಹೆಸರಿನ ಆನೆಗೆ ಪಾಲ್ಗೊಳ್ಳಲು ಅವಕಾಶ ನೀಡುವ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಈ ಬಗ್ಗೆ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಅನು ಶಿವರಾಮನ್ ಹೇಳಿದ್ದಾರೆ.</p>.<p>ಭಾರತದ ಅತಿ ಎತ್ತರದ ಸಾಕಾನೆ ಎಂಬ ಕೀರ್ತಿಗೆ ಪಾತ್ರವಾಗಿರುವ ಈ ಆನೆಯನ್ನು ಪೂರಂನ ಪ್ರಮುಖ ಆಚರಣೆಗಳಲ್ಲಿ ಬಳಸಿಕೊಳ್ಳಲು ಅನುಮತಿ ನೀಡಬೇಕೆಂದು ಆನೆಯ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು.</p>.<p>ಪೂರಂ ಆಚರಣೆಗಳಲ್ಲಿ ಈ ಆನೆಯನ್ನು ಬಳಸಿಕೊಳ್ಳಲು ಅಧಿಕಾರಿಗಳು ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದೂ ಆನೆಯ ಮಾಲೀಕರು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದರು.</p>.<p>ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿರುವ ಕಾರಣ ಜಿಲ್ಲಾಧಿಕಾರಿ, ವಿಭಾಗೀಯ ಅರಣ್ಯಾಧಿಕಾರಿ ಮತ್ತಿತರರನ್ನು ಒಳಗೊಂಡಿರುವ ತಜ್ಞರ ಸಮಿತಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ.</p>.<p>ಉತ್ಸವಗಳ ಮೆರವಣಿಗೆಯಲ್ಲಿ ಈ ಆನೆಯನ್ನು ಬಳಸಿಕೊಳ್ಳುವುದಕ್ಕೆ ಜಿಲ್ಲಾಡಳಿತವು ನಿಷೇಧ ಹೇರಿತ್ತು. ಈ ಆನೆಯು ಭಾಗಶಃ ಕುರುಡಾಗಿದೆ.</p>.<p>ಇತ್ತೀಚೆಗಿನ ಕೆಲವು ವರ್ಷಗಳಿಂದ ರಾಮಚಂದ್ರನ್ ಆನೆಯು ತ್ರಿಶ್ಯೂರ್ನ ವಡಕ್ಕುನಾಥನ್ ದೇವಾಲಯದ ದಕ್ಷಿಣ ಭಾಗದಲ್ಲಿರುವ ಬಾಗಿಲನ್ನು ತೆರೆಯುವ ಮೂಲಕ ಪೂರಂಗೆ ಚಾಲನೆ ನೀಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>