<p><strong>ನವದೆಹಲಿ:</strong> ಪುಣೆ ಪೋಶೆ ಕಾರು ಅಪಘಾತ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಜತೆಗೆ, ಬಾಲಾಪರಾಧಿಗಳನ್ನು ಒಳಗೊಂಡ ಇಂತಹ ಘಟನೆಗಳಿಗೆ ಪೋಷಕರೇ ಕಾರಣ ಎಂದೂ ಅಭಿಪ್ರಾಯಪಟ್ಟಿದೆ.</p><p>ಸದ್ಯದ ಕಾಲಘಟ್ಟದಲ್ಲಿ ಮಕ್ಕಳನ್ನು ನಿಯಂತ್ರಿಸಲು ಪೋಷಕರಿಗೆ ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತಿಳಿಸಿದೆ.</p><p>ಮಾದಕ ವಸ್ತುಗಳ ದುರುಪಯೋಗ ಒಂದು ಕಡೆಯಾದರೆ, ಪೋಷಕರು ಮಕ್ಕಳಿಗೆ ಹಣ ಮತ್ತು ವಾಹನ ಚಲಾಯಿಸಲು ಅವಕಾಶ ನೀಡುತ್ತಿರುವುದು ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದೆ ಎಂದೂ ನ್ಯಾಯಪೀಠ ಹೇಳಿದೆ. </p><p>ಬಾಂಬೆ ಹೈಕೋರ್ಟ್ 2025ರ ಡಿಸೆಂಬರ್ 16ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಆರೋಪಿ ಅಮರ್ ಸತೀಶ್ ಗಾಯಕ್ವಾಡ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p><p>ಪ್ರಕರಣದ ಪ್ರಮುಖ ಆರೋಪಿ 17 ವರ್ಷದ ಬಾಲಕನನ್ನು ಬಚಾವ್ ಮಾಡಲು ಮತ್ತು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ಅಮರ್ ಸತೀಶ್ ಗಾಯಕ್ವಾಡ್ ಆಸ್ಪತ್ರೆಯ ವೈದ್ಯರಿಗೆ ₹3 ಲಕ್ಷ ಹಣ ನೀಡಿದ್ದ ಎಂದು ಆರೋಪಿಸಲಾಗಿದೆ. </p><p>2024ರ ಮೇ 19ರಂದು ಪುಣೆಯ ಕಲ್ಯಾಣಿನಗರದಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕಿಗಳು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಬಾಲಕ, ಆತನ ತಂದೆ ಸೇರಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.ಪೋಶೆ ಕಾರು ಅಪಘಾತ ಪ್ರಕರಣ: ಮತ್ತೆ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!.ಪೋಶೆ ಕಾರು ಅಪಘಾತ: ಪೊಲೀಸರ ಮನವಿ ತಿರಸ್ಕರಿಸಿದ ಜೆಜೆಬಿ.ಪೋಶೆ ಕಾರು ಅಪಘಾತ: ಹಾಸ್ಯ ಕಲಾವಿದ ಉತ್ಸವ್ ದೀಕ್ಷಿತ್ ಬಂಧನ.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪುಣೆ ಪೋಶೆ ಕಾರು ಅಪಘಾತ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಜತೆಗೆ, ಬಾಲಾಪರಾಧಿಗಳನ್ನು ಒಳಗೊಂಡ ಇಂತಹ ಘಟನೆಗಳಿಗೆ ಪೋಷಕರೇ ಕಾರಣ ಎಂದೂ ಅಭಿಪ್ರಾಯಪಟ್ಟಿದೆ.</p><p>ಸದ್ಯದ ಕಾಲಘಟ್ಟದಲ್ಲಿ ಮಕ್ಕಳನ್ನು ನಿಯಂತ್ರಿಸಲು ಪೋಷಕರಿಗೆ ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತಿಳಿಸಿದೆ.</p><p>ಮಾದಕ ವಸ್ತುಗಳ ದುರುಪಯೋಗ ಒಂದು ಕಡೆಯಾದರೆ, ಪೋಷಕರು ಮಕ್ಕಳಿಗೆ ಹಣ ಮತ್ತು ವಾಹನ ಚಲಾಯಿಸಲು ಅವಕಾಶ ನೀಡುತ್ತಿರುವುದು ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದೆ ಎಂದೂ ನ್ಯಾಯಪೀಠ ಹೇಳಿದೆ. </p><p>ಬಾಂಬೆ ಹೈಕೋರ್ಟ್ 2025ರ ಡಿಸೆಂಬರ್ 16ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಆರೋಪಿ ಅಮರ್ ಸತೀಶ್ ಗಾಯಕ್ವಾಡ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p><p>ಪ್ರಕರಣದ ಪ್ರಮುಖ ಆರೋಪಿ 17 ವರ್ಷದ ಬಾಲಕನನ್ನು ಬಚಾವ್ ಮಾಡಲು ಮತ್ತು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ಅಮರ್ ಸತೀಶ್ ಗಾಯಕ್ವಾಡ್ ಆಸ್ಪತ್ರೆಯ ವೈದ್ಯರಿಗೆ ₹3 ಲಕ್ಷ ಹಣ ನೀಡಿದ್ದ ಎಂದು ಆರೋಪಿಸಲಾಗಿದೆ. </p><p>2024ರ ಮೇ 19ರಂದು ಪುಣೆಯ ಕಲ್ಯಾಣಿನಗರದಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕಿಗಳು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಬಾಲಕ, ಆತನ ತಂದೆ ಸೇರಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.ಪೋಶೆ ಕಾರು ಅಪಘಾತ ಪ್ರಕರಣ: ಮತ್ತೆ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!.ಪೋಶೆ ಕಾರು ಅಪಘಾತ: ಪೊಲೀಸರ ಮನವಿ ತಿರಸ್ಕರಿಸಿದ ಜೆಜೆಬಿ.ಪೋಶೆ ಕಾರು ಅಪಘಾತ: ಹಾಸ್ಯ ಕಲಾವಿದ ಉತ್ಸವ್ ದೀಕ್ಷಿತ್ ಬಂಧನ.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>