<p><strong>ಪುಣೆ:</strong> ನಗರದಲ್ಲಿ ನಡೆದಿರುವ ಪೋಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಸ್ಥಳೀಯ ಪ್ರಾದೇಶಿಕ ಸಾರಿಗೆ ಕಚೇರಿಯು(ಆರ್ಟಿಒ) ಪೊಲೀಸರಿಗೆ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>‘ಪೋಶೆ ಕಾರು ಅಪಘಾತಕ್ಕೆ ಸಂಬಂಧಿಸಿದ ವರದಿಯನ್ನು ತನಿಖಾಧಿಕಾರಿಗಳಿಗೆ ನೀಡಿದ್ದೇವೆ’ ಎಂದು ಪುಣೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂಜೀವ್ ಭೋರ್ ಹೇಳಿದ್ದಾರೆ.</p>.<p>ಬೆಂಗಳೂರು ಮೂಲದ ಡೀಲರ್ವೊಬ್ಬರು ಕಳೆದ ಮಾರ್ಚ್ನಲ್ಲಿ ಈ ಐಶಾರಾಮಿ ಪೋಶೆ ಟೈಕಾನ್ ಎಲೆಕ್ಟ್ರಿಕ್ ಕಾರನ್ನು ಆಮದು ಮಾಡಿಕೊಂಡಿದ್ದರು. ಬಳಿಕ ಮಹಾರಾಷ್ಟ್ರದಲ್ಲಿ ತಾತ್ಕಾಲಿಕ ನೋಂದಣಿ ಮಾಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಪೋಶೆ ಕಂಪನಿಯ ಪ್ರತಿನಿಧಿಗಳು ಕಾರಿನ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p>.<p>ಮೇ 19ರ ನಸುಕಿನಲ್ಲಿ ಇಲ್ಲಿನ ಕಲ್ಯಾಣ ನಗರ ಪ್ರದೇಶದಲ್ಲಿ 17 ವರ್ಷದ ಬಾಲಕನೊಬ್ಬ ಪೋಶೆ ಕಾರನ್ನು ಅತಿವೇಗದಿಂದ ಚಲಾಯಿಸುತ್ತಿದ್ದಾಗ ನಡೆದ ಅಪಘಾತದಲ್ಲಿ ಇಬ್ಬರು ಐಟಿ ಉದ್ಯೋಗಿಗಳು ಮೃತಪಟ್ಟಿದ್ದರು. ಅಪಘಾತ ನಡೆದ ಸಂದರ್ಭದಲ್ಲಿ, ಬಾಲಕ ಮದ್ಯಪಾನ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ನಗರದಲ್ಲಿ ನಡೆದಿರುವ ಪೋಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಸ್ಥಳೀಯ ಪ್ರಾದೇಶಿಕ ಸಾರಿಗೆ ಕಚೇರಿಯು(ಆರ್ಟಿಒ) ಪೊಲೀಸರಿಗೆ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>‘ಪೋಶೆ ಕಾರು ಅಪಘಾತಕ್ಕೆ ಸಂಬಂಧಿಸಿದ ವರದಿಯನ್ನು ತನಿಖಾಧಿಕಾರಿಗಳಿಗೆ ನೀಡಿದ್ದೇವೆ’ ಎಂದು ಪುಣೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂಜೀವ್ ಭೋರ್ ಹೇಳಿದ್ದಾರೆ.</p>.<p>ಬೆಂಗಳೂರು ಮೂಲದ ಡೀಲರ್ವೊಬ್ಬರು ಕಳೆದ ಮಾರ್ಚ್ನಲ್ಲಿ ಈ ಐಶಾರಾಮಿ ಪೋಶೆ ಟೈಕಾನ್ ಎಲೆಕ್ಟ್ರಿಕ್ ಕಾರನ್ನು ಆಮದು ಮಾಡಿಕೊಂಡಿದ್ದರು. ಬಳಿಕ ಮಹಾರಾಷ್ಟ್ರದಲ್ಲಿ ತಾತ್ಕಾಲಿಕ ನೋಂದಣಿ ಮಾಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಪೋಶೆ ಕಂಪನಿಯ ಪ್ರತಿನಿಧಿಗಳು ಕಾರಿನ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p>.<p>ಮೇ 19ರ ನಸುಕಿನಲ್ಲಿ ಇಲ್ಲಿನ ಕಲ್ಯಾಣ ನಗರ ಪ್ರದೇಶದಲ್ಲಿ 17 ವರ್ಷದ ಬಾಲಕನೊಬ್ಬ ಪೋಶೆ ಕಾರನ್ನು ಅತಿವೇಗದಿಂದ ಚಲಾಯಿಸುತ್ತಿದ್ದಾಗ ನಡೆದ ಅಪಘಾತದಲ್ಲಿ ಇಬ್ಬರು ಐಟಿ ಉದ್ಯೋಗಿಗಳು ಮೃತಪಟ್ಟಿದ್ದರು. ಅಪಘಾತ ನಡೆದ ಸಂದರ್ಭದಲ್ಲಿ, ಬಾಲಕ ಮದ್ಯಪಾನ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>