ರಕ್ತದ ಮಾದರಿಯನ್ನು ಬದಲಾಯಿಸಿರುವುದು ಬೆಳಕಿಗೆ ಬಂದ ನಂತರದಲ್ಲಿ ಆಸ್ಪತ್ರೆಯ ವಿಧಿವಿಜ್ಞಾನ ಔಷಧಗಳ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಅಜಯ್ ತವಾರೆ, ವೈದ್ಯಕೀಯ ಅಧಿಕಾರಿ ಡಾ. ಶ್ರೀಹರಿ ಹಲ್ನೋರ್ ಮತ್ತು ಆಸ್ಪತ್ರೆಯ ನೌಕರ ಅತುಲ್ ಘಟಕಾಂಬ್ಳೆ ಅವರನ್ನು ಬಂಧಿಸಲಾಯಿತು. ಈ ಮೂವರ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡ ಕಾರಣ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.