<p><strong>ಬದರಿನಾಥ (ಉತ್ತರಾಖಂಡ):</strong> ಆರು ತಿಂಗಳಿಂದ ಮುಚ್ಚಲ್ಪಟ್ಟಿದ್ದ ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯದ ದ್ವಾರಗಳನ್ನು ಭಾನುವಾರ ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ.</p><p>ಭಗವಂತ ವಿಷ್ಣುವಿಗೆ ಸಮರ್ಪಿತವಾದ ದೇವಾಲಯದ ಬಾಗಿಲುಗಳನ್ನು ವೇದ ಮಂತ್ರಗಳ ನಡುವೆ ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು.</p><p>ವಿವಿಧ ಬಗೆಯ ಹದಿನೈದು ಟನ್ ಹೂವುಗಳಿಂದ ದೇವಾಲಯವನ್ನು ಅಲಂಕರಿಸಲಾಗಿತ್ತು. ಭಾರತೀಯ ಸೇನೆಯು ದೇವಾಲಯದ ಮುಂದೆ ಭಕ್ತಿ ಗೀತೆಯನ್ನು ನುಡಿಸಿತು.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಮತ್ತು ತೆಹ್ರಿ ಶಾಸಕ ಕಿಶೋರ್ ಉಪಾಧ್ಯಾಯ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p><p>ಬದರಿನಾಥ ಧಾಮದ ಮುಖ್ಯ ಅರ್ಚಕ, ಧರ್ಮಾಧಿಕಾರಿ ಮತ್ತು ವೇದಪತಿಗಳು ಮೊದಲು ವಿಶೇಷ ಪೂಜೆ ಸಲ್ಲಿಸಿದರು.</p><p>ಮುಖ್ಯ ದೇವಾಲಯದ ಜೊತೆಗೆ, ಬದರಿನಾಥ ಧಾಮದಲ್ಲಿರುವ ಗಣೇಶ, ಘಂಟಕರ್ಣ, ಆದಿ ಕೇದಾರೇಶ್ವರ, ಆದಿ ಗುರು ಶಂಕರಾಚಾರ್ಯ ದೇವಸ್ಥಾನ ಮತ್ತು ಮಾತಾ ಮೂರ್ತಿ ದೇವಸ್ಥಾನದ ಬಾಗಿಲುಗಳನ್ನು ಸಹ ಭಕ್ತರಿಗಾಗಿ ತೆರೆಯಲಾಗಿದೆ.</p><p>ಬದರಿನಾಥಕ್ಕೆ ಬರುವವರ ಪ್ರಯಾಣ ಸುರಕ್ಷಿತ ಮತ್ತು ಸುಗಮವಾಗಿಸಲು ಸ್ಥಳೀಯ ಆಡಳಿತವು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರತಿ ವರ್ಷ ದೀಪಾವಳಿ ಬಳಿಕ ಚಾರ್ ಧಾಮಗಳಾದ ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಬಾಗಿಲು ಮುಚ್ಚಲಾಗುತ್ತದೆ. ಏಪ್ರಿಲ್–ಮೇ ತಿಂಗಳಿನಲ್ಲಿ ಈ ದೇಗುಲಗಳ ಬಾಗಿಲು ತೆರೆಯಲಾಗುತ್ತದೆ. ದೇಶ–ವಿದೆಶಗಳಿಂದ ಜನರು ಇಲ್ಲಿಗೆ ಅಗಮಿಸುತ್ತಾರೆ.</p><p>ಹಿಮಾಲಯದ ತಪ್ಪಲಿನ ಕೇದಾರನಾಥ ದೇಗುಲದ ಬಾಗಿಲನ್ನು ಕಳೆದ ಶುಕ್ರವಾರವೇ ತೆರೆಯಲಾಗಿದ್ದು, ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಬಾಗಿಲನ್ನು ಮೇ 30ರಂದೇ ತೆರೆಯಲಾಗಿದೆ.</p> .Kedarnath Yatra | ಭಕ್ತರಿಗೆ ದರ್ಶನ ನೀಡಿದ 'ಕೇದಾರನಾಥ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದರಿನಾಥ (ಉತ್ತರಾಖಂಡ):</strong> ಆರು ತಿಂಗಳಿಂದ ಮುಚ್ಚಲ್ಪಟ್ಟಿದ್ದ ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯದ ದ್ವಾರಗಳನ್ನು ಭಾನುವಾರ ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ.</p><p>ಭಗವಂತ ವಿಷ್ಣುವಿಗೆ ಸಮರ್ಪಿತವಾದ ದೇವಾಲಯದ ಬಾಗಿಲುಗಳನ್ನು ವೇದ ಮಂತ್ರಗಳ ನಡುವೆ ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು.</p><p>ವಿವಿಧ ಬಗೆಯ ಹದಿನೈದು ಟನ್ ಹೂವುಗಳಿಂದ ದೇವಾಲಯವನ್ನು ಅಲಂಕರಿಸಲಾಗಿತ್ತು. ಭಾರತೀಯ ಸೇನೆಯು ದೇವಾಲಯದ ಮುಂದೆ ಭಕ್ತಿ ಗೀತೆಯನ್ನು ನುಡಿಸಿತು.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಮತ್ತು ತೆಹ್ರಿ ಶಾಸಕ ಕಿಶೋರ್ ಉಪಾಧ್ಯಾಯ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p><p>ಬದರಿನಾಥ ಧಾಮದ ಮುಖ್ಯ ಅರ್ಚಕ, ಧರ್ಮಾಧಿಕಾರಿ ಮತ್ತು ವೇದಪತಿಗಳು ಮೊದಲು ವಿಶೇಷ ಪೂಜೆ ಸಲ್ಲಿಸಿದರು.</p><p>ಮುಖ್ಯ ದೇವಾಲಯದ ಜೊತೆಗೆ, ಬದರಿನಾಥ ಧಾಮದಲ್ಲಿರುವ ಗಣೇಶ, ಘಂಟಕರ್ಣ, ಆದಿ ಕೇದಾರೇಶ್ವರ, ಆದಿ ಗುರು ಶಂಕರಾಚಾರ್ಯ ದೇವಸ್ಥಾನ ಮತ್ತು ಮಾತಾ ಮೂರ್ತಿ ದೇವಸ್ಥಾನದ ಬಾಗಿಲುಗಳನ್ನು ಸಹ ಭಕ್ತರಿಗಾಗಿ ತೆರೆಯಲಾಗಿದೆ.</p><p>ಬದರಿನಾಥಕ್ಕೆ ಬರುವವರ ಪ್ರಯಾಣ ಸುರಕ್ಷಿತ ಮತ್ತು ಸುಗಮವಾಗಿಸಲು ಸ್ಥಳೀಯ ಆಡಳಿತವು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರತಿ ವರ್ಷ ದೀಪಾವಳಿ ಬಳಿಕ ಚಾರ್ ಧಾಮಗಳಾದ ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಬಾಗಿಲು ಮುಚ್ಚಲಾಗುತ್ತದೆ. ಏಪ್ರಿಲ್–ಮೇ ತಿಂಗಳಿನಲ್ಲಿ ಈ ದೇಗುಲಗಳ ಬಾಗಿಲು ತೆರೆಯಲಾಗುತ್ತದೆ. ದೇಶ–ವಿದೆಶಗಳಿಂದ ಜನರು ಇಲ್ಲಿಗೆ ಅಗಮಿಸುತ್ತಾರೆ.</p><p>ಹಿಮಾಲಯದ ತಪ್ಪಲಿನ ಕೇದಾರನಾಥ ದೇಗುಲದ ಬಾಗಿಲನ್ನು ಕಳೆದ ಶುಕ್ರವಾರವೇ ತೆರೆಯಲಾಗಿದ್ದು, ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳ ಬಾಗಿಲನ್ನು ಮೇ 30ರಂದೇ ತೆರೆಯಲಾಗಿದೆ.</p> .Kedarnath Yatra | ಭಕ್ತರಿಗೆ ದರ್ಶನ ನೀಡಿದ 'ಕೇದಾರನಾಥ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>