<p><strong>ನವದೆಹಲಿ:</strong> ‘ತಾಲಿಬಾನ್ ನಿಯಂತ್ರಿತ ಅಫ್ಗಾನಿಸ್ತಾನ, ಪಾಕಿಸ್ತಾನ ಹಾಗೂ ಚೀನಾ ನಡುವಿನ ಸಂಭಾವ್ಯ ಮೈತ್ರಿಕೂಟ ಚಿಂತೆಗೆ ಕಾರಣವಾಗಿದೆ. ಈ ಬಗ್ಗೆ ಎಚ್ಚರಿಕೆ ಅಗತ್ಯ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.</p>.<p>‘ಅಫ್ಗಾನಿಸ್ತಾನದಲ್ಲಿನ ವಿದ್ಯಮಾನಗಳ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕಠಿಣ ನಿರ್ಣಯ ಕೈಗೊಂಡಿದ್ದಕ್ಕೆ ಸಂಭ್ರಮಿಸಲು ಕಾಲ ಇನ್ನೂ ಪಕ್ವವಾಗಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>'ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂಥ ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನಗೆ ತಾನೇ ಅಭಿನಂದನೆ ಹೇಳಿಕೊಳ್ಳುತ್ತಿದೆ. ಇದು ಈಗ ಅಗತ್ಯ ಇರಲಿಲ್ಲ’ ಎಂದು ಟೀಕಿಸಿದರು.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಆಗಸ್ಟ್ ಅವಧಿಗೆ ಭಾರತ ಅಧ್ಯಕ್ಷೀಯ ಸ್ಥಾನದಲ್ಲಿತ್ತು. ಅಫ್ಗಾನಿಸ್ತಾನದ ನೆಲವನ್ನು ಭಯೋತ್ಪಾದಕರಿಗೆ ಆಶ್ರಯ ನೀಡಲು ಅಥವಾ ಇತರ ದೇಶಗಳಿಗೆ ಬೆದರಿಕೆವೊಡ್ಡಲು ಬಳಸಬಾರದು ಎಂಬುದಾಗಿ ಮಂಡಳಿಯು ಇತ್ತೀಚೆಗೆ ನಿರ್ಣಯವನ್ನು ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರ ಹೇಳಿಕೆಗೆ ಮಹತ್ವ ಬಂದಿದೆ.</p>.<p><a href="https://www.prajavani.net/world-news/post-afghan-withdrawal-india-and-us-can-together-fight-terrorism-krishnamoorthi-862851.html" itemprop="url">ಭಯೋತ್ಪಾದನೆ ವಿರುದ್ಧ ಅಮೆರಿಕದ ಹೋರಾಟ ಮುಂದುವರಿಯಲಿದೆ: ರಾಜಾ ಕೃಷ್ಣಮೂರ್ತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ತಾಲಿಬಾನ್ ನಿಯಂತ್ರಿತ ಅಫ್ಗಾನಿಸ್ತಾನ, ಪಾಕಿಸ್ತಾನ ಹಾಗೂ ಚೀನಾ ನಡುವಿನ ಸಂಭಾವ್ಯ ಮೈತ್ರಿಕೂಟ ಚಿಂತೆಗೆ ಕಾರಣವಾಗಿದೆ. ಈ ಬಗ್ಗೆ ಎಚ್ಚರಿಕೆ ಅಗತ್ಯ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.</p>.<p>‘ಅಫ್ಗಾನಿಸ್ತಾನದಲ್ಲಿನ ವಿದ್ಯಮಾನಗಳ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕಠಿಣ ನಿರ್ಣಯ ಕೈಗೊಂಡಿದ್ದಕ್ಕೆ ಸಂಭ್ರಮಿಸಲು ಕಾಲ ಇನ್ನೂ ಪಕ್ವವಾಗಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>'ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂಥ ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನಗೆ ತಾನೇ ಅಭಿನಂದನೆ ಹೇಳಿಕೊಳ್ಳುತ್ತಿದೆ. ಇದು ಈಗ ಅಗತ್ಯ ಇರಲಿಲ್ಲ’ ಎಂದು ಟೀಕಿಸಿದರು.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಆಗಸ್ಟ್ ಅವಧಿಗೆ ಭಾರತ ಅಧ್ಯಕ್ಷೀಯ ಸ್ಥಾನದಲ್ಲಿತ್ತು. ಅಫ್ಗಾನಿಸ್ತಾನದ ನೆಲವನ್ನು ಭಯೋತ್ಪಾದಕರಿಗೆ ಆಶ್ರಯ ನೀಡಲು ಅಥವಾ ಇತರ ದೇಶಗಳಿಗೆ ಬೆದರಿಕೆವೊಡ್ಡಲು ಬಳಸಬಾರದು ಎಂಬುದಾಗಿ ಮಂಡಳಿಯು ಇತ್ತೀಚೆಗೆ ನಿರ್ಣಯವನ್ನು ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರ ಹೇಳಿಕೆಗೆ ಮಹತ್ವ ಬಂದಿದೆ.</p>.<p><a href="https://www.prajavani.net/world-news/post-afghan-withdrawal-india-and-us-can-together-fight-terrorism-krishnamoorthi-862851.html" itemprop="url">ಭಯೋತ್ಪಾದನೆ ವಿರುದ್ಧ ಅಮೆರಿಕದ ಹೋರಾಟ ಮುಂದುವರಿಯಲಿದೆ: ರಾಜಾ ಕೃಷ್ಣಮೂರ್ತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>