<p><strong>ನವದೆಹಲಿ</strong>: ‘ಬಿಹಾರ, ಆಂಧ್ರ ಪ್ರದೇಶಕ್ಕೆ ಬಜೆಟ್ನಲ್ಲಿ ದೊಡ್ಡ ಮೊತ್ತದ ಅನುದಾನ ಘೋಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೊಂಡಿದ್ದಾರೆ. ಆದರೆ, ಈ ಆರ್ಥಿಕ ವರ್ಷದಲ್ಲಿಯೇ ಅನುದಾನ ಮಂಜೂರಾಗುವುದಿಲ್ಲ. ಹಲವು ವರ್ಷಗಳೇ ಆಗಬಹುದು. ನಿರ್ಮಲಾ ಅವರು ಈ ರಾಜ್ಯಗಳಿಗೆ ಟೋಪಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ‘ ಎಂದು ಕಾಂಗ್ರೆಸ್ ಹೇಳಿದೆ.</p>.<p>ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ. ‘ಈಗಾಗಲೇ ಕುಸಿತದ ಅಂಚಿನಲ್ಲಿರುವ ಬ್ಯಾಂಕೊಂದರ ಮುಂದಿನ ಯಾವುದೋ ದಿನಾಂಕ ನಮೂದಿಸಿದ ಚೆಕ್ ಅನ್ನು ನೀಡಿದ ಹಾಗೆ ಬಜೆಟ್ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುದಾನ ಘೋಷಿಸಲಾಗಿದೆ’ ಎಂದು ಲೇವಡಿ ಮಾಡಿದ್ದಾರೆ.</p>.<p>‘ಈ ಎರಡೂ ರಾಜ್ಯಗಳಿಗೆ ದೊರಕುವ ಮೊತ್ತವು ₹20,000 ಕೋಟಿಯಿಂದ ₹30,000 ಕೋಟಿ ಮಾತ್ರ ಎಂಬ ಮಾಧ್ಯಮವೊಂದರ ವರದಿಯನ್ನು ಅವರು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನಮ್ಮ ಅತಿಮಾನುಷ ಪ್ರಧಾನಿ ಅವರ ‘ಕುರ್ಚಿ ಬಜಾವ್’ ಬಜೆಟ್ನಲ್ಲಿ ಬಿಹಾರಕ್ಕೆ ₹58,900 ಕೋಟಿ ನೀಡುವುದಾಗಿ ಹೇಳಲಾಗಿದೆ. ಆಂಧ್ರ ಪ್ರದೇಶದ ಪೊಲವರಂ ಯೋಜನೆಯ ಮೊದಲನೇ ಹಂತದ ನೀರಾವರಿ ಕಾಮಗಾರಿಗೆ ಸುಮಾರು ₹14,000 ಕೋಟಿ ನೀಡುವುದಾಗಿ ಕೇಂದ್ರ ಹೇಳಿದೆ. ಈ ನೀರಾವರಿ ಯೋಜನೆಯ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಾಗಿ ಕೇಂದ್ರ ಸರ್ಕಾರವು ಈಗಾಗಲೇ ಹೇಳಿದೆ’ ಎಂದು ವಿವರಿಸಿದ್ದಾರೆ.</p>.<p>‘ಈ ಎರಡೂ ರಾಜ್ಯಗಳ ವಿವಿಧ ಯೋಜನೆಗಳಿಗೆ ಕೆಲವು ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ಬಜೆಟ್ನಲ್ಲಿ ಹೇಳಲಾಗಿದೆ. ಆದರೆ, ಈ ಎರಡೂ ರಾಜ್ಯಗಳಿಗಾಗಿ ಕೇಂದ್ರವು ಈ ವರ್ಷ ವೆಚ್ಚ ಮಾಡಲಿರುವ ಮೊತ್ತವು ₹20,000 ಕೋಟಿಯಷ್ಟೇ ಆಗಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಬಿಹಾರ, ಆಂಧ್ರ ಪ್ರದೇಶಕ್ಕೆ ಬಜೆಟ್ನಲ್ಲಿ ದೊಡ್ಡ ಮೊತ್ತದ ಅನುದಾನ ಘೋಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೊಂಡಿದ್ದಾರೆ. ಆದರೆ, ಈ ಆರ್ಥಿಕ ವರ್ಷದಲ್ಲಿಯೇ ಅನುದಾನ ಮಂಜೂರಾಗುವುದಿಲ್ಲ. ಹಲವು ವರ್ಷಗಳೇ ಆಗಬಹುದು. ನಿರ್ಮಲಾ ಅವರು ಈ ರಾಜ್ಯಗಳಿಗೆ ಟೋಪಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ‘ ಎಂದು ಕಾಂಗ್ರೆಸ್ ಹೇಳಿದೆ.</p>.<p>ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ. ‘ಈಗಾಗಲೇ ಕುಸಿತದ ಅಂಚಿನಲ್ಲಿರುವ ಬ್ಯಾಂಕೊಂದರ ಮುಂದಿನ ಯಾವುದೋ ದಿನಾಂಕ ನಮೂದಿಸಿದ ಚೆಕ್ ಅನ್ನು ನೀಡಿದ ಹಾಗೆ ಬಜೆಟ್ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುದಾನ ಘೋಷಿಸಲಾಗಿದೆ’ ಎಂದು ಲೇವಡಿ ಮಾಡಿದ್ದಾರೆ.</p>.<p>‘ಈ ಎರಡೂ ರಾಜ್ಯಗಳಿಗೆ ದೊರಕುವ ಮೊತ್ತವು ₹20,000 ಕೋಟಿಯಿಂದ ₹30,000 ಕೋಟಿ ಮಾತ್ರ ಎಂಬ ಮಾಧ್ಯಮವೊಂದರ ವರದಿಯನ್ನು ಅವರು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನಮ್ಮ ಅತಿಮಾನುಷ ಪ್ರಧಾನಿ ಅವರ ‘ಕುರ್ಚಿ ಬಜಾವ್’ ಬಜೆಟ್ನಲ್ಲಿ ಬಿಹಾರಕ್ಕೆ ₹58,900 ಕೋಟಿ ನೀಡುವುದಾಗಿ ಹೇಳಲಾಗಿದೆ. ಆಂಧ್ರ ಪ್ರದೇಶದ ಪೊಲವರಂ ಯೋಜನೆಯ ಮೊದಲನೇ ಹಂತದ ನೀರಾವರಿ ಕಾಮಗಾರಿಗೆ ಸುಮಾರು ₹14,000 ಕೋಟಿ ನೀಡುವುದಾಗಿ ಕೇಂದ್ರ ಹೇಳಿದೆ. ಈ ನೀರಾವರಿ ಯೋಜನೆಯ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಾಗಿ ಕೇಂದ್ರ ಸರ್ಕಾರವು ಈಗಾಗಲೇ ಹೇಳಿದೆ’ ಎಂದು ವಿವರಿಸಿದ್ದಾರೆ.</p>.<p>‘ಈ ಎರಡೂ ರಾಜ್ಯಗಳ ವಿವಿಧ ಯೋಜನೆಗಳಿಗೆ ಕೆಲವು ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ಬಜೆಟ್ನಲ್ಲಿ ಹೇಳಲಾಗಿದೆ. ಆದರೆ, ಈ ಎರಡೂ ರಾಜ್ಯಗಳಿಗಾಗಿ ಕೇಂದ್ರವು ಈ ವರ್ಷ ವೆಚ್ಚ ಮಾಡಲಿರುವ ಮೊತ್ತವು ₹20,000 ಕೋಟಿಯಷ್ಟೇ ಆಗಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>