<p class="title"><strong>ಮುಂಬೈ</strong>: ವಿಮಾನ ಸೇವೆ ಪುನರಾರಂಭವಾದ ಬಳಿಕ ಆರಂಭದ ದಿನಗಳಲ್ಲಿ ಕ್ಯಾಬಿನ್ ಬ್ಯಾಗೇಜ್ಗೆ ಅವಕಾಶ ನೀಡಬಾರದು ಮತ್ತು ಕೋವಿಡ್ ಕುರಿತು ಪ್ರಯಾಣಿಕರಿಂದ ಸಮಗ್ರ ಮಾಹಿತಿ ಪಡೆಯಬೇಕು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಸಲಹೆ ಮಾಡಿದೆ.</p>.<p class="title">ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕು, ಎರಡು ಗಂಟೆ ಮೊದಲು ವಿಮಾನನಿಲ್ದಾಣ ತಲುಪಬೇಕು ಎಂಬುದು ವಾಣಿಜ್ಯ ಸೇವೆ ಪುನರಾರಂಭದ ಆರಂಭದಲ್ಲಿ ಪ್ರಯಾಣಿಕರು ಪಾಲಿಸಬೇಕಾದ ಕ್ರಮಗಳಿವು.</p>.<p class="title">ಕೇಂದ್ರ ವಿಮಾನಯಾನ ಸಚಿವಾಲಯವು ಈ ಕುರಿತು ಸಮಗ್ರ ಕರಡು ನಿಯಮಗಳನ್ನು ರೂಪಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರ ದೇಶದಲ್ಲಿ ಮಾರ್ಚ್ 25ರಿಂದ ವಿಮಾನ ಸೇವೆ ಬಂದ್ ಆಗಿದೆ.</p>.<p class="title">ಆರೋಗ್ಯ ಸೇತು ಆ್ಯಪ್ನಲ್ಲಿ ಹಸಿರು ಸ್ಥಿತಿ, ವೆಬ್ ಚೆಕ್ ಇನ್, ಎಲ್ಲ ಪ್ರಯಾಣಿಕರ ದೇಹದ ಉಷ್ಣಾಂಶ ತಪಾಸಣೆ ನಡೆಸಲು ಶಿಫಾರಸು ಮಾಡಲಾಗಿದೆ. ಅಲ್ಲದೆ, ಕ್ಯಾಬಿನ್ ಮತ್ತು ಕಾಕ್ಪಿಟ್ ಸಿಬ್ಬಂದಿ, ಭದ್ರತಾ ಸಿಬ್ಬಂದಿಗೂ ಇಂಥದೇ ನಿಯಮಗಳನ್ನು ರೂಪಿಸಲಾಗಿದೆ.</p>.<p>ಕೊರೊನಾ ಸೋಂಕು ಹರಡುವುದನ್ನು ತಡೆಯಲುವಿಮಾನಯಾನ ಸಂಸ್ಥೆಗಳು, ನಿರ್ವಾಹಕರು ಸೇರಿದಂತೆ ಎಲ್ಲ ಭಾಗಿದಾರರ ಜೊತೆಗೆ ಚರ್ಚಿಸಿ ಈ ನಿಯಮಗಳನ್ನು ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಆದರೆ, ಅಂತರ ಕಾಯ್ದುಕೊಳ್ಳುವಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮಧ್ಯದ ಆಸನವನ್ನು ಖಾಲಿ ಬಿಡಲಾಗುತ್ತದೆಯೇ ಎಂಬುದರ ಕುರಿತಂತೆ ನಿಯಮಗಳಲ್ಲಿ ಯಾವುದೇ ಉಲ್ಲೇಖವಿಲ್ಲ. ವಿಮಾನಯಾನ ನಿಯಂತ್ರಣ ಪ್ರಾಧಿಕಾರವಾದ ಡಿಜಿಸಿಎ ಈ ಉರಿತು ಸಲಹೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ವಿಮಾನ ಸೇವೆ ಪುನರಾರಂಭವಾದ ಬಳಿಕ ಆರಂಭದ ದಿನಗಳಲ್ಲಿ ಕ್ಯಾಬಿನ್ ಬ್ಯಾಗೇಜ್ಗೆ ಅವಕಾಶ ನೀಡಬಾರದು ಮತ್ತು ಕೋವಿಡ್ ಕುರಿತು ಪ್ರಯಾಣಿಕರಿಂದ ಸಮಗ್ರ ಮಾಹಿತಿ ಪಡೆಯಬೇಕು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಸಲಹೆ ಮಾಡಿದೆ.</p>.<p class="title">ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕು, ಎರಡು ಗಂಟೆ ಮೊದಲು ವಿಮಾನನಿಲ್ದಾಣ ತಲುಪಬೇಕು ಎಂಬುದು ವಾಣಿಜ್ಯ ಸೇವೆ ಪುನರಾರಂಭದ ಆರಂಭದಲ್ಲಿ ಪ್ರಯಾಣಿಕರು ಪಾಲಿಸಬೇಕಾದ ಕ್ರಮಗಳಿವು.</p>.<p class="title">ಕೇಂದ್ರ ವಿಮಾನಯಾನ ಸಚಿವಾಲಯವು ಈ ಕುರಿತು ಸಮಗ್ರ ಕರಡು ನಿಯಮಗಳನ್ನು ರೂಪಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾದ ನಂತರ ದೇಶದಲ್ಲಿ ಮಾರ್ಚ್ 25ರಿಂದ ವಿಮಾನ ಸೇವೆ ಬಂದ್ ಆಗಿದೆ.</p>.<p class="title">ಆರೋಗ್ಯ ಸೇತು ಆ್ಯಪ್ನಲ್ಲಿ ಹಸಿರು ಸ್ಥಿತಿ, ವೆಬ್ ಚೆಕ್ ಇನ್, ಎಲ್ಲ ಪ್ರಯಾಣಿಕರ ದೇಹದ ಉಷ್ಣಾಂಶ ತಪಾಸಣೆ ನಡೆಸಲು ಶಿಫಾರಸು ಮಾಡಲಾಗಿದೆ. ಅಲ್ಲದೆ, ಕ್ಯಾಬಿನ್ ಮತ್ತು ಕಾಕ್ಪಿಟ್ ಸಿಬ್ಬಂದಿ, ಭದ್ರತಾ ಸಿಬ್ಬಂದಿಗೂ ಇಂಥದೇ ನಿಯಮಗಳನ್ನು ರೂಪಿಸಲಾಗಿದೆ.</p>.<p>ಕೊರೊನಾ ಸೋಂಕು ಹರಡುವುದನ್ನು ತಡೆಯಲುವಿಮಾನಯಾನ ಸಂಸ್ಥೆಗಳು, ನಿರ್ವಾಹಕರು ಸೇರಿದಂತೆ ಎಲ್ಲ ಭಾಗಿದಾರರ ಜೊತೆಗೆ ಚರ್ಚಿಸಿ ಈ ನಿಯಮಗಳನ್ನು ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಆದರೆ, ಅಂತರ ಕಾಯ್ದುಕೊಳ್ಳುವಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮಧ್ಯದ ಆಸನವನ್ನು ಖಾಲಿ ಬಿಡಲಾಗುತ್ತದೆಯೇ ಎಂಬುದರ ಕುರಿತಂತೆ ನಿಯಮಗಳಲ್ಲಿ ಯಾವುದೇ ಉಲ್ಲೇಖವಿಲ್ಲ. ವಿಮಾನಯಾನ ನಿಯಂತ್ರಣ ಪ್ರಾಧಿಕಾರವಾದ ಡಿಜಿಸಿಎ ಈ ಉರಿತು ಸಲಹೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>