ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಪಿ. ದೀಪಕ್, ‘ಮಹಿಳೆ ಮತ್ತು ಮಕ್ಕಳ ದುಸ್ಥಿತಿ ಬಗ್ಗೆ ಕರೆ ಬಂದ ನಂತರ ಸ್ಥಳಕ್ಕೆಭೇಟಿ ನೀಡಿದ್ದ ಮಂಡಳಿ ಅಧಿಕಾರಿಗಳು, ಮಕ್ಕಳು ಕರುಣಾಜನಕ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ಈ ಕುಟುಂಬಕ್ಕೆ ಸಮಾಜ ಕಲ್ಯಾಣ ಯೋಜನೆಗಳಡಿ ಯಾವಸೌಲಭ್ಯವೂ ಸಿಗದ ಬಗ್ಗೆ ಖಾತರಿಪಡಿಸಿಕೊಂಡಿದ್ದಾರೆ’ ಎಂದು ಹೇಳುವ ಮೂಲಕ ಮಂಡಳಿಯ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.