<p><strong>ನವದೆಹಲಿ</strong>: ವಿದ್ಯುತ್ (ತಿದ್ದುಪಡಿ) ಮಸೂದೆಯ ಕರಡಿನ ಪ್ರಸ್ತಾವ 2025ಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದ್ಯುತ್ ಸಚಿವ ಮನೋಹರ್ ಲಾಲ್ ಅವರು ಸಂಸತ್ ಸದಸ್ಯರ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ ಎಂದು ವಿದ್ಯುತ್ ಸಚಿವಾಲಯ ಶನಿವಾರ ತಿಳಿಸಿದೆ.</p>.<p>ವಿವಿಧ ಪಕ್ಷಗಳಿಗೆ ಸೇರಿದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ತಿದ್ದುಪಡಿ ಮಸೂದೆಯಲ್ಲಿರುವ ವಿವಿಧ ಪ್ರಸ್ತಾವಗಳ ಕುರಿತು ಸದಸ್ಯರೊಂದಿಗೆ ಸಮಾಲೋಚಿಸಲು ಸಚಿವರು ಈ ಸಭೆಯನ್ನು ಕರೆದಿದ್ದರು.</p>.<p>ಈ ತಿದ್ದುಪಡಿ ಮಸೂದೆಯು ದೇಶದ ವಿದ್ಯುತ್ ವಲಯವನ್ನು ಸದೃಢಗೊಳಿಸುವ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ. </p>.<p>ರಾಜ್ಯ ಸರ್ಕಾರಗಳು ಗೃಹ, ಕೃಷಿ ಗ್ರಾಹಕರಂತಹ ಗುಂಪುಗಳಿಗೆ ಸಬ್ಸಿಡಿಗಳನ್ನು ನೀಡುವುದನ್ನು ಮುಂದುವರಿಸಬಹುದು. ಈ ಗ್ರಾಹಕರಿಗೆ ವೆಚ್ಚದಲ್ಲಿ ಯಾವುದೇ ಹೆಚ್ಚಳವಾಗದಿರಬಹುದು. ಮಸೂದೆಯು ದೇಶದ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಹ ಪ್ರಯತ್ನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದೆ.</p>.<p>ಪ್ರಸ್ತಾವಿತ ಈ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟವು (ಎಐಪಿಇಎಫ್) ಡಿಸೆಂಬರ್ 23ರಂದು ದೇಶ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಕಾರ್ಮಿಕ ಒಕ್ಕೂಟಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿದ್ಯುತ್ (ತಿದ್ದುಪಡಿ) ಮಸೂದೆಯ ಕರಡಿನ ಪ್ರಸ್ತಾವ 2025ಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದ್ಯುತ್ ಸಚಿವ ಮನೋಹರ್ ಲಾಲ್ ಅವರು ಸಂಸತ್ ಸದಸ್ಯರ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ ಎಂದು ವಿದ್ಯುತ್ ಸಚಿವಾಲಯ ಶನಿವಾರ ತಿಳಿಸಿದೆ.</p>.<p>ವಿವಿಧ ಪಕ್ಷಗಳಿಗೆ ಸೇರಿದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ತಿದ್ದುಪಡಿ ಮಸೂದೆಯಲ್ಲಿರುವ ವಿವಿಧ ಪ್ರಸ್ತಾವಗಳ ಕುರಿತು ಸದಸ್ಯರೊಂದಿಗೆ ಸಮಾಲೋಚಿಸಲು ಸಚಿವರು ಈ ಸಭೆಯನ್ನು ಕರೆದಿದ್ದರು.</p>.<p>ಈ ತಿದ್ದುಪಡಿ ಮಸೂದೆಯು ದೇಶದ ವಿದ್ಯುತ್ ವಲಯವನ್ನು ಸದೃಢಗೊಳಿಸುವ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ. </p>.<p>ರಾಜ್ಯ ಸರ್ಕಾರಗಳು ಗೃಹ, ಕೃಷಿ ಗ್ರಾಹಕರಂತಹ ಗುಂಪುಗಳಿಗೆ ಸಬ್ಸಿಡಿಗಳನ್ನು ನೀಡುವುದನ್ನು ಮುಂದುವರಿಸಬಹುದು. ಈ ಗ್ರಾಹಕರಿಗೆ ವೆಚ್ಚದಲ್ಲಿ ಯಾವುದೇ ಹೆಚ್ಚಳವಾಗದಿರಬಹುದು. ಮಸೂದೆಯು ದೇಶದ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಹ ಪ್ರಯತ್ನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದೆ.</p>.<p>ಪ್ರಸ್ತಾವಿತ ಈ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟವು (ಎಐಪಿಇಎಫ್) ಡಿಸೆಂಬರ್ 23ರಂದು ದೇಶ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಕಾರ್ಮಿಕ ಒಕ್ಕೂಟಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>