<p class="title"><strong>ನವದೆಹಲಿ (ಪಿಟಿಐ): </strong>ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ರದ್ದುಪಡಿಸಲು ದತ್ತವಾಗಿರುವ ಅಧಿಕಾರವನ್ನು ಅಪರೂಪಕ್ಕೆ ಬಳಸಬೇಕು. ಅದು ಕೂಡಾ ಅಪರೂಪದಲ್ಲಿ ಅಪರೂಪ ಎಂಬ ಪ್ರಕರಣಗಳಿಗಷ್ಟೇ ಅನ್ವಯಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">ಆಸ್ತಿ ವಿವಾದಕ್ಕೆ ಸಂಬಂಧಿಸಿ ಮೂವರ ವಿರುದ್ಧ ದಾಖಲಿಸಿದ್ದ ವಂಚನೆ, ನಕಲಿ ದಾಖಲೆ ಸೃಷ್ಟಿ ಕುರಿತ ಪ್ರಕರಣವನ್ನು ವಜಾಗೊಳಿಸಿದ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಎಸ್.ರವೀಂದ್ರ ಭಟ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಮೇಲ್ನೋಟದ ಸಾಕ್ಷ್ಯವನ್ನಷ್ಟೇ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲು ಮತ್ತು ಖಾಸಗಿ ಅಥವಾ ವೈಯಕ್ತಿಕ ವೈಮನಸ್ಯದಿಂದಾಗಿ ಆರೋಪಿಗಳ ವಿರುದ್ಧದ ದ್ವೇಷಸಾಧನೆಗಾಗಿ ಪ್ರಕರಣ ದಾಖಲಿಸಿರುವ ಸಂದರ್ಭಗಳಲ್ಲಿ ಈ ಅಧಿಕಾರವನ್ನು ಬಳಸಬಹುದು ಎಂದು ಪೀಠ ಹೇಳಿತು.</p>.<p>ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಮೊಕದ್ದಮೆ ದಾಖಲಿಸಲಾಗಿದೆ. ಸೆಕ್ಷನ್ 156 (3)ರ ಅನ್ವಯ ಮ್ಯಾಜಿಸ್ಟ್ರೇಟರು ಆದೇಶ ನೀಡುವ ಮುನ್ನ ಸುಪ್ರೀಂ ಕೋರ್ಟ್ ಜಾರಿಗೊಳಿಸಿರುವ ಕಾನೂನು ಅರ್ಥಮಾಡಿಕೊಂಡಿಲ್ಲ ಎಂದು ಪೀಠ ಹೇಳಿತು.</p>.<p>ಸಿಆರ್ಪಿಸಿ ಕಾಯ್ದೆ 1973ರ ಸೆಕ್ಷನ್ 156 (3)ರಡಿ ದತ್ತವಾಗಿರುವ ಅಧಿಕಾರದಡಿ ಮ್ಯಾಜಿಸ್ಟ್ರೇಟ್ ಅವರು, ಅಪರಾಧ ಗೋಚರವಾಗುವ ಸಂದರ್ಭದಲ್ಲಿ ಮಾತ್ರವೇ ತನಿಖೆ ನಡೆಸುವಂತೆ ಪೊಲೀಸರಿಗೆ ಅಧಿಕಾರ ನೀಡಬಹುದಾಗಿದೆ ಎಂದು ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ): </strong>ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ರದ್ದುಪಡಿಸಲು ದತ್ತವಾಗಿರುವ ಅಧಿಕಾರವನ್ನು ಅಪರೂಪಕ್ಕೆ ಬಳಸಬೇಕು. ಅದು ಕೂಡಾ ಅಪರೂಪದಲ್ಲಿ ಅಪರೂಪ ಎಂಬ ಪ್ರಕರಣಗಳಿಗಷ್ಟೇ ಅನ್ವಯಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">ಆಸ್ತಿ ವಿವಾದಕ್ಕೆ ಸಂಬಂಧಿಸಿ ಮೂವರ ವಿರುದ್ಧ ದಾಖಲಿಸಿದ್ದ ವಂಚನೆ, ನಕಲಿ ದಾಖಲೆ ಸೃಷ್ಟಿ ಕುರಿತ ಪ್ರಕರಣವನ್ನು ವಜಾಗೊಳಿಸಿದ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಎಸ್.ರವೀಂದ್ರ ಭಟ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಮೇಲ್ನೋಟದ ಸಾಕ್ಷ್ಯವನ್ನಷ್ಟೇ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲು ಮತ್ತು ಖಾಸಗಿ ಅಥವಾ ವೈಯಕ್ತಿಕ ವೈಮನಸ್ಯದಿಂದಾಗಿ ಆರೋಪಿಗಳ ವಿರುದ್ಧದ ದ್ವೇಷಸಾಧನೆಗಾಗಿ ಪ್ರಕರಣ ದಾಖಲಿಸಿರುವ ಸಂದರ್ಭಗಳಲ್ಲಿ ಈ ಅಧಿಕಾರವನ್ನು ಬಳಸಬಹುದು ಎಂದು ಪೀಠ ಹೇಳಿತು.</p>.<p>ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಮೊಕದ್ದಮೆ ದಾಖಲಿಸಲಾಗಿದೆ. ಸೆಕ್ಷನ್ 156 (3)ರ ಅನ್ವಯ ಮ್ಯಾಜಿಸ್ಟ್ರೇಟರು ಆದೇಶ ನೀಡುವ ಮುನ್ನ ಸುಪ್ರೀಂ ಕೋರ್ಟ್ ಜಾರಿಗೊಳಿಸಿರುವ ಕಾನೂನು ಅರ್ಥಮಾಡಿಕೊಂಡಿಲ್ಲ ಎಂದು ಪೀಠ ಹೇಳಿತು.</p>.<p>ಸಿಆರ್ಪಿಸಿ ಕಾಯ್ದೆ 1973ರ ಸೆಕ್ಷನ್ 156 (3)ರಡಿ ದತ್ತವಾಗಿರುವ ಅಧಿಕಾರದಡಿ ಮ್ಯಾಜಿಸ್ಟ್ರೇಟ್ ಅವರು, ಅಪರಾಧ ಗೋಚರವಾಗುವ ಸಂದರ್ಭದಲ್ಲಿ ಮಾತ್ರವೇ ತನಿಖೆ ನಡೆಸುವಂತೆ ಪೊಲೀಸರಿಗೆ ಅಧಿಕಾರ ನೀಡಬಹುದಾಗಿದೆ ಎಂದು ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>