ಸಾರಿಗೆ ನಿಗಮಗಳಿಗೆ 5,675 ಬಸ್ ಖರೀದಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ನೇಕಾರರಿಗೆ ಸಿಹಿ ಸುದ್ದಿ; ಮಗ್ಗಗಳಿಗೆ ಉಚಿತ ವಿದ್ಯುತ್: ಜವಳಿ ಸಚಿವ ಶಿವಾನಂದ, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 5,675 ಬಸ್ಗಳನ್ನು ಖರೀದಿಸಲು ಪ್ರಕ್ರಿಯೆ ತ್ವರಿತಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದೆ. 10 ಎಚ್.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ 250 ಯುನಿಟ್ವರೆಗೆ ಉಚಿತ ವಿದ್ಯುತ್ ಒದಗಿಸುವ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದರು.
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
‘ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಮೂರೂವರೆ ತಿಂಗಳಷ್ಟೇ ಆಗಿದೆ. ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಕೊರತೆಯಿರುವುದು ಗಮನಕ್ಕಿದ್ದು, 2024ರ ಅಂತ್ಯದ ವೇಳೆಗೆ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
ನಕಲಿ ಚುನಾವಣಾ ಗುರುತಿನ ಚೀಟಿ, ಆಧಾರ್ ಹಾಗೂ ಚಾಲನೆ ಪರವಾನಗಿ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ 33 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆಗೊಳಿಸಿದೆ. ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸರ್ದಾರಪುರ ಕ್ಷೇತ್ರದಿಂದ ಕಣಕ್ಕಿಳಿದರೆ, ಟೋಂಕ್ನಿಂದ ಸಚಿನ್ ಪೈಲಟ್ ಸ್ಪರ್ಧೆ ಮಾಡಲಿದ್ದಾರೆ.
ಪಾಕಿಸ್ತಾನದ ಬ್ಯಾಲಿಸ್ಟಿಕ್ ಕ್ಷಿಪಣಿಗೆ ಬಳಸುವ ಸಾಧನಗಗಳನ್ನು ಪೂರೈಕೆ ಮಾಡಿರುವ ಚೀನಾ ಮೂಲದ ಮೂರು ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ. ಪಾಕಿಸ್ತಾನವು ಅಬಾಬೀಲ್ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಪರೀಕ್ಷೆ ನಡೆಸಿದ ಕೆಲವು ದಿನಗಳ ನಂತರ ಅಮೆರಿಕ ಈ ನಿರ್ಬಂಧಗಳನ್ನು ಹೇರಿದೆ.
ಇ–ಕಾಮರ್ಸ್ ವಲಯದ ಕಂಪನಿಗಳು ಹಬ್ಬದ ಋತುವಿನ ಮೊದಲ ವಾರ ₹47 ಸಾವಿರ ಕೋಟಿ ಮೌಲ್ಯದಷ್ಟು ಮಾರಾಟ ನಡೆಸಿವೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮಾರಾಟದಲ್ಲಿ 19ರಷ್ಟು ಹೆಚ್ಚಳ ಆಗಿದೆ ಎಂದು ಸಂಶೋಧನಾ ಸಂಸ್ಥೆ ರೆಡ್ಶೀರ್ ಸ್ಟ್ರ್ಯಾಟಜಿ ಕನ್ಸಲ್ಟಂಟ್ಸ್ ತಿಳಿಸಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಅವರು ವಿರಾಟ್ ಕೊಹ್ಲಿ ಅವರನ್ನು ತಮ್ಮಿಷ್ಟದ ಭಾರತೀಯ ಕ್ರಿಕೆಟಿಗ ಎಂದು ಹೇಳಿದ್ದಾರೆ.