<p><strong>ನವದೆಹಲಿ</strong>: ‘ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿಯ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ ಅರ್ಜಿಯನ್ನು ವಜಾಗೊಳಿಸಿದೆ</p><p>‘ಕಾರ್ಯಾಂಗವು ತನ್ನ ಇತಿಮಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ನ.26ರಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೀಗಾಗಿ, ದೇಗುಲಗಳಲ್ಲಿ ವಿತರಿಸುವ ಪ್ರಸಾದ ಅಥವಾ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ನಿಯಮಾವಳಿ ರೂಪಿಸಬೇಕು’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠವನ್ನು ಕೋರಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈ ಅರ್ಜಿ ಹಾಗೂ ಅದರಲ್ಲಿನ ನಿವೇದನೆಯು ಸರ್ಕಾರದ ನೀತಿ ನಿರೂಪಣೆಗೆ ಸಂಬಂಧಿಸಿದ್ದು. ಹೀಗಾಗಿ ಈ ಅರ್ಜಿಯನ್ನು ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸಿ’ ಎಂದು ಹೇಳಿತು.</p><p>ವಿವಿಧ ದೇವಸ್ಥಾನಗಳಲ್ಲಿ ಅನ್ನ ಪ್ರಸಾದ ಅಥವಾ ಪ್ರಸಾದ ಸೇವಿಸಿದ ನಂತರ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆ ಪಿಐಎಲ್ ಸಲ್ಲಿಸಲಾಗಿದೆಯೇ ಹೊರತು ಪ್ರಚಾರದ ಉದ್ದೇಶದಿಂದಲ್ಲ ಎಂದು ಅರ್ಜಿದಾರರು ಪೀಠದ ಗಮನ ಸೆಳೆದಿದ್ದಾರೆ.</p><p>ಸರಬರಾಜಾದ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲದಿರುವುದರಿಂದ ದೇವಸ್ಥಾನಗಳ ಪ್ರಸಾದಗಳಲ್ಲಿ ಅನರ್ಥವಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.</p><p>‘ಹಾಗಿದ್ದರೆ, ಪ್ರಸಾದದ ಗುಣಮಟ್ಟಕ್ಕೆ ಮಾತ್ರ ನಿಯಮಾವಳಿ ಕೋರಿ ಅರ್ಜಿ ಏಕೆ ಸಲ್ಲಿಸಿದ್ದೀರಿ? ಹೋಟೆಲ್ ಆಹಾರಗಳ ಮೇಲೂ ನಿಯಮಾವಳಿಗೆ ಅರ್ಜಿ ಸಲ್ಲಿಸಿ. ದಿನಸಿ ಅಂಗಡಿಗಳಲ್ಲಿ ಖರೀದಿಸುವ ಆಹಾರ ಪದಾರ್ಥಗಳ ಗುಣಮಟ್ಟವನ್ನೂ ಪ್ರಶ್ನಿಸಿ. ಅಲ್ಲಿಯೂ ಕಲಬೆರಕೆಯ ಆರೋಪಗಳಿವೆ’ಎಂದು ಪೀಠ ಹೇಳಿದೆ.</p><p>‘ಇಂತಹ ವಿಷಯಗಳಲ್ಲಿ ಕ್ರಮ ಜರುಗಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್ಎಸ್ಎಸ್ಎಐ) ಅಧಿಕಾರ ಇದೆ. ಅದರೆ, ಕ್ರಮ ಕೈಗೊಳ್ಳುವುದಕ್ಕೆ ಅದರ ಮಾರ್ಗಸೂಚಿಗಳು ಅಡ್ಡಿಯಾಗುತ್ತಿವೆ. ಹೀಗಾಗಿ, ನಿಯಂತ್ರಣ ವ್ಯವಸ್ಥೆಗೆ ಮನವಿ ಮಾಡಲಾಗಿದೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.</p><p><br>ಆಗ, ‘ಯಾವುದೇ ನಿರ್ದಿಷ್ಟ ದೇವಸ್ಥಾನ ಕುರಿತು ಪ್ರಕರಣವಿದ್ದಲ್ಲಿ, ಬಾಧಿತ ವ್ಯಕ್ತಿ ಸಂಬಂಧಪಟ್ಟ ಹೈಕೋರ್ಟ್ಗೆ ಮನವಿ ಸಲ್ಲಿಸಲಿ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿಯ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ ಅರ್ಜಿಯನ್ನು ವಜಾಗೊಳಿಸಿದೆ</p><p>‘ಕಾರ್ಯಾಂಗವು ತನ್ನ ಇತಿಮಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ನ.26ರಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೀಗಾಗಿ, ದೇಗುಲಗಳಲ್ಲಿ ವಿತರಿಸುವ ಪ್ರಸಾದ ಅಥವಾ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ನಿಯಮಾವಳಿ ರೂಪಿಸಬೇಕು’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠವನ್ನು ಕೋರಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈ ಅರ್ಜಿ ಹಾಗೂ ಅದರಲ್ಲಿನ ನಿವೇದನೆಯು ಸರ್ಕಾರದ ನೀತಿ ನಿರೂಪಣೆಗೆ ಸಂಬಂಧಿಸಿದ್ದು. ಹೀಗಾಗಿ ಈ ಅರ್ಜಿಯನ್ನು ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸಿ’ ಎಂದು ಹೇಳಿತು.</p><p>ವಿವಿಧ ದೇವಸ್ಥಾನಗಳಲ್ಲಿ ಅನ್ನ ಪ್ರಸಾದ ಅಥವಾ ಪ್ರಸಾದ ಸೇವಿಸಿದ ನಂತರ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆ ಪಿಐಎಲ್ ಸಲ್ಲಿಸಲಾಗಿದೆಯೇ ಹೊರತು ಪ್ರಚಾರದ ಉದ್ದೇಶದಿಂದಲ್ಲ ಎಂದು ಅರ್ಜಿದಾರರು ಪೀಠದ ಗಮನ ಸೆಳೆದಿದ್ದಾರೆ.</p><p>ಸರಬರಾಜಾದ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲದಿರುವುದರಿಂದ ದೇವಸ್ಥಾನಗಳ ಪ್ರಸಾದಗಳಲ್ಲಿ ಅನರ್ಥವಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.</p><p>‘ಹಾಗಿದ್ದರೆ, ಪ್ರಸಾದದ ಗುಣಮಟ್ಟಕ್ಕೆ ಮಾತ್ರ ನಿಯಮಾವಳಿ ಕೋರಿ ಅರ್ಜಿ ಏಕೆ ಸಲ್ಲಿಸಿದ್ದೀರಿ? ಹೋಟೆಲ್ ಆಹಾರಗಳ ಮೇಲೂ ನಿಯಮಾವಳಿಗೆ ಅರ್ಜಿ ಸಲ್ಲಿಸಿ. ದಿನಸಿ ಅಂಗಡಿಗಳಲ್ಲಿ ಖರೀದಿಸುವ ಆಹಾರ ಪದಾರ್ಥಗಳ ಗುಣಮಟ್ಟವನ್ನೂ ಪ್ರಶ್ನಿಸಿ. ಅಲ್ಲಿಯೂ ಕಲಬೆರಕೆಯ ಆರೋಪಗಳಿವೆ’ಎಂದು ಪೀಠ ಹೇಳಿದೆ.</p><p>‘ಇಂತಹ ವಿಷಯಗಳಲ್ಲಿ ಕ್ರಮ ಜರುಗಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್ಎಸ್ಎಸ್ಎಐ) ಅಧಿಕಾರ ಇದೆ. ಅದರೆ, ಕ್ರಮ ಕೈಗೊಳ್ಳುವುದಕ್ಕೆ ಅದರ ಮಾರ್ಗಸೂಚಿಗಳು ಅಡ್ಡಿಯಾಗುತ್ತಿವೆ. ಹೀಗಾಗಿ, ನಿಯಂತ್ರಣ ವ್ಯವಸ್ಥೆಗೆ ಮನವಿ ಮಾಡಲಾಗಿದೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.</p><p><br>ಆಗ, ‘ಯಾವುದೇ ನಿರ್ದಿಷ್ಟ ದೇವಸ್ಥಾನ ಕುರಿತು ಪ್ರಕರಣವಿದ್ದಲ್ಲಿ, ಬಾಧಿತ ವ್ಯಕ್ತಿ ಸಂಬಂಧಪಟ್ಟ ಹೈಕೋರ್ಟ್ಗೆ ಮನವಿ ಸಲ್ಲಿಸಲಿ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>