<p><strong>ಮುಜಾಫುರ್(ಬಿಹಾರ):</strong> ‘ತಾಕತ್ತಿದ್ದರೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಾಲ ಬಳಿ ಇಟ್ಟಿದ್ದ ಲಾಲೂ ಪ್ರಸಾದ್ ಅವರನ್ನು ಟೀಕಿಸಿ’ ಎಂದು ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ. </p><p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವು ಬಿಹಾರದಲ್ಲಿ ಆರ್ಜೆಡಿ ಹಂಗಿನಲ್ಲಿ ಇದ್ದಂತಿದೆ. ಹಿಂದೆ ರಾಜ್ಯ ಕಾಂಗ್ರೆಸ್ ಘಟಕ ಲಾಲೂ ಪ್ರಸಾದ್ ಅವರ ನಿಯಂತ್ರಣದಲ್ಲಿತ್ತು. ಈಗ ಅವರ ಪುತ್ರ ತೇಜಸ್ವಿ ಯಾದವ್ ಆ ನಿಯಂತ್ರಣ ಹೊಂದಿದ್ದಾರೆ’ ಎಂದು ಟೀಕಿಸಿದ್ದಾರೆ.</p><p>‘ನನ್ನ ಅಭಿಪ್ರಾಯ ತಪ್ಪು ಎಂದಾದರೆ, ಅಂಬೇಡ್ಕರ್ ಭಾವಚಿತ್ರವನ್ನು ಕಾಲ ಬಳಿ ಇಟ್ಟುಕೊಂಡಿದ್ದ ಲಾಲೂ ಪ್ರಸಾದ್ ಅವರನ್ನು ರಾಹುಲ್ ಗಾಂಧಿ ಟೀಕಿಸಲಿ’ ಎಂದು ಹೇಳಿದ್ದಾರೆ.</p><p>ಇದೇ ವೇಳೆ, ಮುಜಾಫುರದಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಮಂಗಲ್ ಪಾಂಡೆ ರಾಜೀನಾಮೆ ನೀಡಬೇಕೆಂದೂ ಆಗ್ರಹಿಸಿದ್ದಾರೆ.</p><p><strong>ಘಟನೆ ಏನು?</strong></p><p>ಲಾಲೂ ಪ್ರಸಾದ್ ಅವರ 78ನೇ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಸೋಫಾದ ಮೇಲೆ ಕೂತಿದ್ದ ಲಾಲೂ ಅವರ ಕಾಲಿನ ಬಳಿ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು ಅವರ ಬೆಂಬಗಲಿರು ಆಶೀರ್ವಾದ ಪಡೆದುಕೊಳ್ಳುತ್ತಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಾಫುರ್(ಬಿಹಾರ):</strong> ‘ತಾಕತ್ತಿದ್ದರೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಾಲ ಬಳಿ ಇಟ್ಟಿದ್ದ ಲಾಲೂ ಪ್ರಸಾದ್ ಅವರನ್ನು ಟೀಕಿಸಿ’ ಎಂದು ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ. </p><p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವು ಬಿಹಾರದಲ್ಲಿ ಆರ್ಜೆಡಿ ಹಂಗಿನಲ್ಲಿ ಇದ್ದಂತಿದೆ. ಹಿಂದೆ ರಾಜ್ಯ ಕಾಂಗ್ರೆಸ್ ಘಟಕ ಲಾಲೂ ಪ್ರಸಾದ್ ಅವರ ನಿಯಂತ್ರಣದಲ್ಲಿತ್ತು. ಈಗ ಅವರ ಪುತ್ರ ತೇಜಸ್ವಿ ಯಾದವ್ ಆ ನಿಯಂತ್ರಣ ಹೊಂದಿದ್ದಾರೆ’ ಎಂದು ಟೀಕಿಸಿದ್ದಾರೆ.</p><p>‘ನನ್ನ ಅಭಿಪ್ರಾಯ ತಪ್ಪು ಎಂದಾದರೆ, ಅಂಬೇಡ್ಕರ್ ಭಾವಚಿತ್ರವನ್ನು ಕಾಲ ಬಳಿ ಇಟ್ಟುಕೊಂಡಿದ್ದ ಲಾಲೂ ಪ್ರಸಾದ್ ಅವರನ್ನು ರಾಹುಲ್ ಗಾಂಧಿ ಟೀಕಿಸಲಿ’ ಎಂದು ಹೇಳಿದ್ದಾರೆ.</p><p>ಇದೇ ವೇಳೆ, ಮುಜಾಫುರದಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಮಂಗಲ್ ಪಾಂಡೆ ರಾಜೀನಾಮೆ ನೀಡಬೇಕೆಂದೂ ಆಗ್ರಹಿಸಿದ್ದಾರೆ.</p><p><strong>ಘಟನೆ ಏನು?</strong></p><p>ಲಾಲೂ ಪ್ರಸಾದ್ ಅವರ 78ನೇ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಸೋಫಾದ ಮೇಲೆ ಕೂತಿದ್ದ ಲಾಲೂ ಅವರ ಕಾಲಿನ ಬಳಿ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು ಅವರ ಬೆಂಬಗಲಿರು ಆಶೀರ್ವಾದ ಪಡೆದುಕೊಳ್ಳುತ್ತಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>