<p><strong>ಲಖನೌ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಲವು ಟೆಂಟ್ಗಳು, ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>ಮೊದಲು ನಾರಾಯಣ ಶುಕ್ಲಾ ಧಾಮ ಕ್ಯಾಂಪ್ ಸಮೀಪ ಬೆಂಕಿ ಕಾಣಿಸಿಕೊಂಡಿತು. ಇದು ಕ್ಷಿಪ್ರವಾಗಿ ಸಮೀಪದ ಟೆಂಟ್ಗಳಿಗೆ ವ್ಯಾಪಿಸಿತು. ಮಾಘ ಮೇಳದಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಟೆಂಟ್ಗಳಲ್ಲಿ ಉಳಿದುಕೊಂಡಿದ್ದ ‘ಕಲ್ಪವಾಸಿಗಳು’ ತಕ್ಷಣವೇ ಹೊರಗೋಡಿ ಬಂದು ಜೀವ ಉಳಿಸಿಕೊಂಡರು. </p>.<p>ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಅಗ್ನಿ ಅವಘಡ ಸಂಭವಿಸಿರುವುದು ಅಗ್ನಿಶಾಮಕ ದಳದ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ. ಮಾಘ ಮೇಳದಲ್ಲಿ ಭಾಗವಹಿಸಲು ದೇಶದ ಹಲವೆಡೆಯಿಂದ ಬಂದಿರುವ ಸಂತರು, ಭಕ್ತರು ಗಂಗಾ ನದಿ ತಟದಲ್ಲಿ ಟೆಂಟ್ಗಳನ್ನು ನಿರ್ಮಿಸಿಕೊಂಡಿದ್ದಾರೆ. </p>.<p class="title">ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಲ್ಕು ದಿನಗಳ ಹಿಂದಷ್ಟೇ ಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಮರಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಲವು ಟೆಂಟ್ಗಳು, ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>ಮೊದಲು ನಾರಾಯಣ ಶುಕ್ಲಾ ಧಾಮ ಕ್ಯಾಂಪ್ ಸಮೀಪ ಬೆಂಕಿ ಕಾಣಿಸಿಕೊಂಡಿತು. ಇದು ಕ್ಷಿಪ್ರವಾಗಿ ಸಮೀಪದ ಟೆಂಟ್ಗಳಿಗೆ ವ್ಯಾಪಿಸಿತು. ಮಾಘ ಮೇಳದಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಟೆಂಟ್ಗಳಲ್ಲಿ ಉಳಿದುಕೊಂಡಿದ್ದ ‘ಕಲ್ಪವಾಸಿಗಳು’ ತಕ್ಷಣವೇ ಹೊರಗೋಡಿ ಬಂದು ಜೀವ ಉಳಿಸಿಕೊಂಡರು. </p>.<p>ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಅಗ್ನಿ ಅವಘಡ ಸಂಭವಿಸಿರುವುದು ಅಗ್ನಿಶಾಮಕ ದಳದ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ. ಮಾಘ ಮೇಳದಲ್ಲಿ ಭಾಗವಹಿಸಲು ದೇಶದ ಹಲವೆಡೆಯಿಂದ ಬಂದಿರುವ ಸಂತರು, ಭಕ್ತರು ಗಂಗಾ ನದಿ ತಟದಲ್ಲಿ ಟೆಂಟ್ಗಳನ್ನು ನಿರ್ಮಿಸಿಕೊಂಡಿದ್ದಾರೆ. </p>.<p class="title">ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಲ್ಕು ದಿನಗಳ ಹಿಂದಷ್ಟೇ ಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಮರಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>