<p><strong>ನವದೆಹಲಿ</strong>: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ ಸಾಮೂಹಿಕವಾಗಿ ಹೆಸರುಗಳನ್ನು ಅಳಿಸುವ ಸಂಚನ್ನು ಬಿಜೆಪಿ ರೂಪಿಸಿದೆ ಎಂದು ಆರೋಪಿಸಿರುವ ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್, 3000 ಪುಟಗಳ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.</p><p>ಚುನಾವಣಾ ಆಯುಕ್ತರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡವರು, ದಲಿತರು, ವಿಶೇಷವಾಗಿ ಕೊಳೆಗೇರಿಯಲ್ಲಿ ವಾಸಿಸುತ್ತಿರುವವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಸಾಮಾನ್ಯ ವ್ಯಕ್ತಿಗೆ ಒಂದು ಮತ ಬಹಳಷ್ಟು ಮೌಲ್ಯಯುತವಾದದ್ದಾಗಿದೆ. ಈ ದೇಶದ ನಾಗರಿಕತ್ವವನ್ನು ಅದು ಅವರಿಗೆ ಒದಗಿಸುತ್ತದೆ ಎಂದಿದ್ದಾರೆ.</p><p>ಶಹದಾರದ ಬಿಜೆಪಿ ಮುಖಂಡರೊಬ್ಬರು 11,008 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗ ಈ ಸಂಬಂಧ ರಹಸ್ಯವಾಗಿ ಕೆಲಸ ಮಾಡುತ್ತಿದೆ ಎಂದಿದ್ದಾರೆ.</p><p>‘ಜನಕಪುರಿಯಲ್ಲಿ 4,874 ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆಯುವಂತೆ 25 ಮಂದಿ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ತುಘಲಕಾಬಾದ್ನಲ್ಲಿ 15 ಮಂದಿ ಬಿಜೆಪಿ ಕಾರ್ಯಕರ್ತರು 2,435 ಮತದಾರರ ಹೆಸರುಗಳನ್ನು ತೆಗೆಯಲು ಮನವಿ ಸಲ್ಲಿಸಿದ್ದಾರೆ. ತುಘಲಕಾಬಾದ್ನ ಬೂತ್ ಸಂಖ್ಯೆ. 117ರಲ್ಲಿ 1,337 ಮತದಾರರಿದ್ದು, ಈ ಪೈಕಿ 554 ಮತದಾರರ ಹೆಸರುಗಳನ್ನು ತೆಗೆಯುವಂತೆ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ. ಇದರರ್ಥ, ಪ್ರತಿ ಬೂತ್ನಲ್ಲಿ ಶೇ 40ರಷ್ಟು ಮತದಾರರನ್ನು ಕಡಿಮೆ ಮಾಡುವುದು ಇವರ ಉದ್ದೇಶವಾಗಿದೆ’ಎಂದು ಕೇಜ್ರಿವಾಲ್ ದೂರಿದ್ದಾರೆ.</p>. <p>ಈ ರೀತಿ ಸಾಮೂಹಿಕವಾಗಿ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಮತ್ತು ಅರ್ಜಿ ಹಾಕಿದವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಚುನಾವಣಾ ಆಯೋಗವು ನಾಲ್ಕು ಭರವಸೆಗಳನ್ನು ನಮಗೆ ನೀಡಿದೆ. ಮೊದಲನೆಯದಾಗಿ, ಚುನಾವಣೆಯ ಮೊದಲು ಮತದಾರರ ಪಟ್ಟಿಯಿಂದ ಸಾಮೂಹಿಕ ಹೆಸರು ಅಳಿಸುವಿಕೆ ನಡೆಯುವುದಿಲ್ಲ. ಎರಡನೆಯದಾಗಿ, ಮತದಾರರ ಹೆಸರುಗಳನ್ನು ತೆಗೆಸಲು ಬಯಸುವ ಯಾರಾದರೂ ಈಗ ನಮೂನೆ 7 ಅನ್ನು ಭರ್ತಿ ಮಾಡಬೇಕಾಗುತ್ತದೆ. ಯಾವುದೇ ಮತದಾರರ ಹೆಸರನ್ನು ಅಳಿಸುವ ಮೊದಲು, ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಮೂಲಕ ಪರಿಶೀಲನೆ ನಡೆಸಲಾಗುವುದು. ಇದು ಮತದಾರರ ಪಟ್ಟಿಯಲ್ಲಿ ತಪ್ಪಾಗಿ ಹೆಸರು ಅಳಿಸುವಿಕೆಯನ್ನು ತಡೆಯುತ್ತದೆ ಎಂದು ನಾವು ನಂಬುತ್ತೇವೆ ಎಂದು ಅವರು ಹೇಳಿದ್ದಾರೆ.</p><p>‘ನಮಗೆ ದೊರೆತ ಇನ್ನೊಂದು ಭರವಸೆ ಏನೆಂದರೆ, ಒಬ್ಬ ವ್ಯಕ್ತಿಯು ಐದಕ್ಕಿಂತ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಅರ್ಜಿ ಸಲ್ಲಿಸಿದರೆ, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಖುದ್ದಾಗಿ ಕ್ಷೇತ್ರಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ’ಎಂದು ಕೇಜ್ರಿವಾಲ್ ತಿಳಿಸಿದರು.</p><p>2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯ ಇದೆ. 2020ರ ಚುನಾವಣೆಯಲ್ಲಿ 70 ಕ್ಷೇತ್ರಗಳ ಪೈಕಿ ಎಎಪಿ 62 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ ಸಾಮೂಹಿಕವಾಗಿ ಹೆಸರುಗಳನ್ನು ಅಳಿಸುವ ಸಂಚನ್ನು ಬಿಜೆಪಿ ರೂಪಿಸಿದೆ ಎಂದು ಆರೋಪಿಸಿರುವ ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್, 3000 ಪುಟಗಳ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.</p><p>ಚುನಾವಣಾ ಆಯುಕ್ತರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡವರು, ದಲಿತರು, ವಿಶೇಷವಾಗಿ ಕೊಳೆಗೇರಿಯಲ್ಲಿ ವಾಸಿಸುತ್ತಿರುವವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಸಾಮಾನ್ಯ ವ್ಯಕ್ತಿಗೆ ಒಂದು ಮತ ಬಹಳಷ್ಟು ಮೌಲ್ಯಯುತವಾದದ್ದಾಗಿದೆ. ಈ ದೇಶದ ನಾಗರಿಕತ್ವವನ್ನು ಅದು ಅವರಿಗೆ ಒದಗಿಸುತ್ತದೆ ಎಂದಿದ್ದಾರೆ.</p><p>ಶಹದಾರದ ಬಿಜೆಪಿ ಮುಖಂಡರೊಬ್ಬರು 11,008 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗ ಈ ಸಂಬಂಧ ರಹಸ್ಯವಾಗಿ ಕೆಲಸ ಮಾಡುತ್ತಿದೆ ಎಂದಿದ್ದಾರೆ.</p><p>‘ಜನಕಪುರಿಯಲ್ಲಿ 4,874 ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆಯುವಂತೆ 25 ಮಂದಿ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ತುಘಲಕಾಬಾದ್ನಲ್ಲಿ 15 ಮಂದಿ ಬಿಜೆಪಿ ಕಾರ್ಯಕರ್ತರು 2,435 ಮತದಾರರ ಹೆಸರುಗಳನ್ನು ತೆಗೆಯಲು ಮನವಿ ಸಲ್ಲಿಸಿದ್ದಾರೆ. ತುಘಲಕಾಬಾದ್ನ ಬೂತ್ ಸಂಖ್ಯೆ. 117ರಲ್ಲಿ 1,337 ಮತದಾರರಿದ್ದು, ಈ ಪೈಕಿ 554 ಮತದಾರರ ಹೆಸರುಗಳನ್ನು ತೆಗೆಯುವಂತೆ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ. ಇದರರ್ಥ, ಪ್ರತಿ ಬೂತ್ನಲ್ಲಿ ಶೇ 40ರಷ್ಟು ಮತದಾರರನ್ನು ಕಡಿಮೆ ಮಾಡುವುದು ಇವರ ಉದ್ದೇಶವಾಗಿದೆ’ಎಂದು ಕೇಜ್ರಿವಾಲ್ ದೂರಿದ್ದಾರೆ.</p>. <p>ಈ ರೀತಿ ಸಾಮೂಹಿಕವಾಗಿ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಮತ್ತು ಅರ್ಜಿ ಹಾಕಿದವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಚುನಾವಣಾ ಆಯೋಗವು ನಾಲ್ಕು ಭರವಸೆಗಳನ್ನು ನಮಗೆ ನೀಡಿದೆ. ಮೊದಲನೆಯದಾಗಿ, ಚುನಾವಣೆಯ ಮೊದಲು ಮತದಾರರ ಪಟ್ಟಿಯಿಂದ ಸಾಮೂಹಿಕ ಹೆಸರು ಅಳಿಸುವಿಕೆ ನಡೆಯುವುದಿಲ್ಲ. ಎರಡನೆಯದಾಗಿ, ಮತದಾರರ ಹೆಸರುಗಳನ್ನು ತೆಗೆಸಲು ಬಯಸುವ ಯಾರಾದರೂ ಈಗ ನಮೂನೆ 7 ಅನ್ನು ಭರ್ತಿ ಮಾಡಬೇಕಾಗುತ್ತದೆ. ಯಾವುದೇ ಮತದಾರರ ಹೆಸರನ್ನು ಅಳಿಸುವ ಮೊದಲು, ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಮೂಲಕ ಪರಿಶೀಲನೆ ನಡೆಸಲಾಗುವುದು. ಇದು ಮತದಾರರ ಪಟ್ಟಿಯಲ್ಲಿ ತಪ್ಪಾಗಿ ಹೆಸರು ಅಳಿಸುವಿಕೆಯನ್ನು ತಡೆಯುತ್ತದೆ ಎಂದು ನಾವು ನಂಬುತ್ತೇವೆ ಎಂದು ಅವರು ಹೇಳಿದ್ದಾರೆ.</p><p>‘ನಮಗೆ ದೊರೆತ ಇನ್ನೊಂದು ಭರವಸೆ ಏನೆಂದರೆ, ಒಬ್ಬ ವ್ಯಕ್ತಿಯು ಐದಕ್ಕಿಂತ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಅರ್ಜಿ ಸಲ್ಲಿಸಿದರೆ, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಖುದ್ದಾಗಿ ಕ್ಷೇತ್ರಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ’ಎಂದು ಕೇಜ್ರಿವಾಲ್ ತಿಳಿಸಿದರು.</p><p>2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯ ಇದೆ. 2020ರ ಚುನಾವಣೆಯಲ್ಲಿ 70 ಕ್ಷೇತ್ರಗಳ ಪೈಕಿ ಎಎಪಿ 62 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>