<p><strong>ನವದೆಹಲಿ:</strong> ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಸಹಿ ಮಾಡಿದ್ದಾರೆ ಎಂದು ಗೃಹಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಅಕ್ಟೋಬರ್ 31ರಿಂದ ಜಾರಿಯಾಗುವಂತೆ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ. ಅಂದುದೇಶದ ಮೊದಲ ಗೃಹಸಚಿವ ಸರ್ದಾರ್ ಪಟೇಲ್ ಅವರ ಜನ್ಮ ದಿನವೂ ಆಗಿದೆ.</p>.<p>ಜಮ್ಮು ಕಾಶ್ಮೀರವು ಶಾಸನಸಭೆ ಸಹಿತವಾದ ಕೇಂದ್ರಾಡಳಿತ ಪ್ರದೇಶವಾಗಲಿದೆ. ಲಡಾಖ್, ಚಂಡಿಗಡದಂತೆ ಶಾಸನಸಭೆರಹಿತ ಕೇಂದ್ರಾಡಳಿತ ಪ್ರದೇಶವೆನಿಸಲಿದೆ. ಸದ್ಯಕ್ಕೆ ಜಮ್ಮು ಕಾಶ್ಮೀರದ ಶಾಸನಸಭೆಯು ಗರಿಷ್ಠ 107 ಸದಸ್ಯರನ್ನು ಹೊಂದಿರುತ್ತದೆ. ಕ್ಷೇತ್ರ ಮರು ವಿಂಗಡಣೆಯ ಬಳಿಕ ಆ ಸಂಖ್ಯೆಯನ್ನು 114ಕ್ಕೆ ಹೆಚ್ಚಿಸಲಾಗುವುದು. ಇಲ್ಲಿನ 24 ಕ್ಷೇತ್ರಗಳು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಬರುವುದರಿಂದ ಅವು ಖಾಲಿ ಉಳಿಯಲಿವೆ. ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳನ್ನುಲಡಾಖ್ ಒಳಗೊಂಡಿರುತ್ತದೆ.</p>.<p>ಲೋಕಸಭೆಯಲ್ಲಿ ಜಮ್ಮು ಕಾಶ್ಮೀರದ ಐವರು ಸದಸ್ಯರು ಹಾಗೂ ಲಡಾಖ್ನ ಒಬ್ಬ ಪ್ರತಿನಿಧಿ ಇರುತ್ತಾರೆ.</p>.<p class="Subhead">ನೀತಿ ಬದಲಾವಣೆ ಇಲ್ಲ– ಅಮೆರಿಕ: ‘ಜಮ್ಮು ಕಾಶ್ಮೀರ ಕುರಿತಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತ– ಪಾಕಿಸ್ತಾನ ಮಾತುಕತೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಅಮೆರಿಕ ಸ್ಪಷ್ಟಪಡಿಸಿದೆ.</p>.<p>ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅಮೆರಿಕದ ವಿದೇಶಾಂಗ ವ್ಯವಹಾರಗಳ ವಕ್ತಾರ ಮಾರ್ಗನ್ ಒರ್ಟೆಗಸ್, ‘ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು. ಭಾರತ– ಪಾಕಿಸ್ತಾನ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಅಮೆರಿಕ ಬಯಸುತ್ತದೆ’ ಎಂದರು.</p>.<p class="Subhead">ಮಾತುಕತೆಗೆ ಚೀನಾ ಸಲಹೆ: ‘ಕಾಶ್ಮೀರ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು’ ಎಂದು ಚೀನಾ ಪಾಕಿಸ್ತಾನಕ್ಕೆ ಸಲಹೆ ಕೊಟ್ಟಿದೆ.</p>.<p>ವಿಶೇಷಾಧಿಕಾರ ರದ್ದತಿ ಬಳಿಕ ಚೀನಾದ ಬೆಂಬಲ ಕೋರಲು ಆ ದೇಶಕ್ಕೆ ತೆರಳಿದ್ದ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ಚೀನಾ ಈ ಸಲಹೆ ನೀಡಿದೆ.</p>.<p>ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಚೀನಾ, ‘ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿ ಆ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು’ ಎಂದಿರುವುದಲ್ಲದೆ, ‘ಯಾವುದೇ ಒಂದು ರಾಷ್ಟ್ರವು ಅಲ್ಲಿನ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಿ, ಶಾಂತಿ ಕದಡುವ ಪ್ರಯತ್ನ ಮಾಡಬಾರದು’ ಎಂದು ಭಾರತದ ಹೆಸರು ಉಲ್ಲೇಖಿಸದೆಯೇ ಹೇಳಿದೆ.</p>.<p>ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಆಗಸ್ಟ್ 11ರಿಂದ ಮೂರು ದಿನಗಳ ಕಾಲ ಚೀನಾ ಪ್ರವಾಸ ಮಾಡಲಿದ್ದಾರೆ.</p>.<p><strong>ಯೆಚೂರಿ, ರಾಜಾಗೆ ವಿಮಾನ ನಿಲ್ದಾಣದಲ್ಲಿ ತಡೆ</strong></p>.<p><strong>ನವದೆಹಲಿ:</strong> ಜಮ್ಮು ಕಾಶ್ಮೀರದ ಸಿಪಿಎಂ ಮುಖಂಡ ಮೊಹಮ್ಮದ್ ಯೂಸುಫ್ ತಾರಿಗಾಮಿ ಅವರನ್ನು ಭೇಟಿಯಾಗಲು ಹೋಗಿದ್ದ ಪಕ್ಷದ ಮುಖಂಡರಾದ ಸೀತಾರಾಂ ಯೆಚೂರಿ ಹಾಗೂ ಸಿಪಿಐ ನಾಯಕ ಡಿ. ರಾಜಾ ಅವರನ್ನು ಶುಕ್ರವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಮರಳಿ ದೆಹಲಿಗೆ ಕಳುಹಿಸಲಾಗಿದೆ.</p>.<p>‘ಶ್ರೀನಗರಕ್ಕೆ ಹೊರಗಿನವರಿಗೆ ಪ್ರವೇಶ ನಿರಾಕರಿಸುವ ಅಧಿಕೃತ ಆದೇಶವನ್ನು ಅಧಿಕಾರಿಗಳು ನಮಗೆ ತೋರಿಸಿದರು. ಭದ್ರತೆಯ ಕಾರಣದಿಂದಾಗಿ ಬೆಂಗಾವಲು ಸಹಿತವಾದ ಪ್ರವೇಶವನ್ನೂ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ’ ಎಂದು ಯೆಚೂರಿ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.</p>.<p>ಶ್ರೀನಗರ ವಿಮಾನ ನಿಲ್ದಾಣದಿಂದ ಅವರಿಬ್ಬರನ್ನೂ ಮರಳಿ ದೆಹಲಿಗೆ ಕಳುಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮುಖಂಡ ಗುಲಾಂನಬಿ ಆಜಾದ್ ಅವರನ್ನೂ ಗುರುವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಬಂಧಿಸಿ ದೆಹಲಿಗೆ ವಾಪಸ್ ಕಳುಹಿಸಲಾಗಿತ್ತು.</p>.<p><strong>ಸ್ವಾತಂತ್ರ್ಯೋತ್ಸವ ಆಚರಣೆ:</strong> ‘ಆಗಸ್ಟ್ 15 ರಂದು ರಾಜ್ಯದ ಪ್ರತಿ ಪಂಚಾಯಿತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು’ ಎಂದು ಬಿಜೆಪಿಯ ಜಮ್ಮು ಕಾಶ್ಮೀರ ಘಟಕದ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದರು.</p>.<p>‘370ನೇ ವಿಧಿಯನ್ನು ರದ್ದು ಮಾಡಿರುವುದು ರಾಜ್ಯದ ಜನಸಾಮಾನ್ಯರಿಗೆ ಲಭಿಸಿರುವ ಬಹು ದೊಡ್ಡ ಗೆಲುವಾಗಿದೆ. ಜಮ್ಮು ಕಾಶ್ಮೀರದ ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಬೇಕು’ ಎಂದು ಅವರು ಕರೆ ನೀಡಿದರು.</p>.<p><strong>ಥಾರ್ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು</strong></p>.<p>ಪಾಕಿಸ್ತಾನದ ಖೊಕ್ರಪರ್ನಿಂದ ರಾಜಸ್ಥಾನದ ಮುನಾಬಾವೊ ನಡುವೆ ವಾರಕ್ಕೊಮ್ಮೆ ಸಂಚರಿಸುತ್ತಿದ್ದ ‘ಥಾರ್ ಎಕ್ಸ್ಪ್ರೆಸ್’ ರೈಲು ಸಂಚಾರವನ್ನು ಸಹ ರದ್ದುಪಡಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ.</p>.<p>‘ನಾನು ರೈಲ್ವೆ ಖಾತೆಯ ಸಚಿವನಾಗಿರುವವರೆಗೂ ಭಾರತ–ಪಾಕಿಸ್ತಾನದ ಮಧ್ಯೆ ರೈಲು ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಪಾಕಿಸ್ತಾನದ ರೈಲ್ವೆ ಖಾತೆ ಸಚಿವ ಶೇಖ್ ರಷೀದ್ ಶುಕ್ರವಾರ ಹೇಳಿದ್ದಾರೆ.</p>.<p><strong>ಸಾಂಸ್ಕೃತಿಕ ಸಂಬಂಧಕ್ಕೂ ಕತ್ತರಿ:</strong> ಭಾರತದೊಂದಿಗಿನ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನೂ ಸಹ ಪಾಕಿಸ್ತಾನ ಮೊಟಕುಗೊಳಿಸಿದೆ. ಪಾಕಿಸ್ತಾನದ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ‘ಭಾರತ ಬೇಡ ಎನ್ನಿ’ ಎಂಬ ಅಭಿಯಾನವನ್ನೇ ಆರಂಭಿಸಿದೆ.</p>.<p><strong>25 ಮಂದಿ ಆಗ್ರಾ ಜೈಲಿಗೆ</strong></p>.<p>ಜಮ್ಮು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಮಿಯಾ ಖಯ್ಯೂಂ ಹಾಗೂ ಪದಾಧಿಕಾರಿ ಮುಬೀನ್ ಶಾ ಸೇರಿದಂತೆ 25 ಮಂದಿ ಪ್ರತ್ಯೇಕತಾವಾದಿಗಳನ್ನು ಶುಕ್ರವಾರ ಆಗ್ರಾ ಜೈಲಿಗೆ ಸ್ಥಳಾಂತರಿಸಲಾಗಿದೆ.</p>.<p>‘ಸ್ಥಳಾಂತರಗೊಂಡವರೆಲ್ಲ ಪ್ರತ್ಯೆಕತಾವಾದಿಗಳೆಂದು ಗುರುತಿಸಿಕೊಂಡವರಲ್ಲದೆ, ಜಮ್ಮು ಕಾಶ್ಮೀರದ ಶಾಂತಿ ಕದಡಿದ ಇತಿಹಾಸ ಹೊಂದಿದವರಾಗಿದ್ದಾರೆ. ಮುಂದೆಯೂ ಇವರು ಕಲ್ಲು ತೂರಾಟದಂಥ ಕೃತ್ಯದಲ್ಲಿ ತೊಡಗುವ ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಎಲ್ಲರನ್ನೂ ವಾಯುಪಡೆಯ ವಿಶೇಷ ವಿಮಾನದಲ್ಲಿ ಕರೆತಂದು ಆಗ್ರಾದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಸಹಿ ಮಾಡಿದ್ದಾರೆ ಎಂದು ಗೃಹಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಅಕ್ಟೋಬರ್ 31ರಿಂದ ಜಾರಿಯಾಗುವಂತೆ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ. ಅಂದುದೇಶದ ಮೊದಲ ಗೃಹಸಚಿವ ಸರ್ದಾರ್ ಪಟೇಲ್ ಅವರ ಜನ್ಮ ದಿನವೂ ಆಗಿದೆ.</p>.<p>ಜಮ್ಮು ಕಾಶ್ಮೀರವು ಶಾಸನಸಭೆ ಸಹಿತವಾದ ಕೇಂದ್ರಾಡಳಿತ ಪ್ರದೇಶವಾಗಲಿದೆ. ಲಡಾಖ್, ಚಂಡಿಗಡದಂತೆ ಶಾಸನಸಭೆರಹಿತ ಕೇಂದ್ರಾಡಳಿತ ಪ್ರದೇಶವೆನಿಸಲಿದೆ. ಸದ್ಯಕ್ಕೆ ಜಮ್ಮು ಕಾಶ್ಮೀರದ ಶಾಸನಸಭೆಯು ಗರಿಷ್ಠ 107 ಸದಸ್ಯರನ್ನು ಹೊಂದಿರುತ್ತದೆ. ಕ್ಷೇತ್ರ ಮರು ವಿಂಗಡಣೆಯ ಬಳಿಕ ಆ ಸಂಖ್ಯೆಯನ್ನು 114ಕ್ಕೆ ಹೆಚ್ಚಿಸಲಾಗುವುದು. ಇಲ್ಲಿನ 24 ಕ್ಷೇತ್ರಗಳು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಬರುವುದರಿಂದ ಅವು ಖಾಲಿ ಉಳಿಯಲಿವೆ. ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳನ್ನುಲಡಾಖ್ ಒಳಗೊಂಡಿರುತ್ತದೆ.</p>.<p>ಲೋಕಸಭೆಯಲ್ಲಿ ಜಮ್ಮು ಕಾಶ್ಮೀರದ ಐವರು ಸದಸ್ಯರು ಹಾಗೂ ಲಡಾಖ್ನ ಒಬ್ಬ ಪ್ರತಿನಿಧಿ ಇರುತ್ತಾರೆ.</p>.<p class="Subhead">ನೀತಿ ಬದಲಾವಣೆ ಇಲ್ಲ– ಅಮೆರಿಕ: ‘ಜಮ್ಮು ಕಾಶ್ಮೀರ ಕುರಿತಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತ– ಪಾಕಿಸ್ತಾನ ಮಾತುಕತೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಅಮೆರಿಕ ಸ್ಪಷ್ಟಪಡಿಸಿದೆ.</p>.<p>ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅಮೆರಿಕದ ವಿದೇಶಾಂಗ ವ್ಯವಹಾರಗಳ ವಕ್ತಾರ ಮಾರ್ಗನ್ ಒರ್ಟೆಗಸ್, ‘ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು. ಭಾರತ– ಪಾಕಿಸ್ತಾನ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಅಮೆರಿಕ ಬಯಸುತ್ತದೆ’ ಎಂದರು.</p>.<p class="Subhead">ಮಾತುಕತೆಗೆ ಚೀನಾ ಸಲಹೆ: ‘ಕಾಶ್ಮೀರ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು’ ಎಂದು ಚೀನಾ ಪಾಕಿಸ್ತಾನಕ್ಕೆ ಸಲಹೆ ಕೊಟ್ಟಿದೆ.</p>.<p>ವಿಶೇಷಾಧಿಕಾರ ರದ್ದತಿ ಬಳಿಕ ಚೀನಾದ ಬೆಂಬಲ ಕೋರಲು ಆ ದೇಶಕ್ಕೆ ತೆರಳಿದ್ದ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ಚೀನಾ ಈ ಸಲಹೆ ನೀಡಿದೆ.</p>.<p>ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಚೀನಾ, ‘ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿ ಆ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು’ ಎಂದಿರುವುದಲ್ಲದೆ, ‘ಯಾವುದೇ ಒಂದು ರಾಷ್ಟ್ರವು ಅಲ್ಲಿನ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಿ, ಶಾಂತಿ ಕದಡುವ ಪ್ರಯತ್ನ ಮಾಡಬಾರದು’ ಎಂದು ಭಾರತದ ಹೆಸರು ಉಲ್ಲೇಖಿಸದೆಯೇ ಹೇಳಿದೆ.</p>.<p>ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಆಗಸ್ಟ್ 11ರಿಂದ ಮೂರು ದಿನಗಳ ಕಾಲ ಚೀನಾ ಪ್ರವಾಸ ಮಾಡಲಿದ್ದಾರೆ.</p>.<p><strong>ಯೆಚೂರಿ, ರಾಜಾಗೆ ವಿಮಾನ ನಿಲ್ದಾಣದಲ್ಲಿ ತಡೆ</strong></p>.<p><strong>ನವದೆಹಲಿ:</strong> ಜಮ್ಮು ಕಾಶ್ಮೀರದ ಸಿಪಿಎಂ ಮುಖಂಡ ಮೊಹಮ್ಮದ್ ಯೂಸುಫ್ ತಾರಿಗಾಮಿ ಅವರನ್ನು ಭೇಟಿಯಾಗಲು ಹೋಗಿದ್ದ ಪಕ್ಷದ ಮುಖಂಡರಾದ ಸೀತಾರಾಂ ಯೆಚೂರಿ ಹಾಗೂ ಸಿಪಿಐ ನಾಯಕ ಡಿ. ರಾಜಾ ಅವರನ್ನು ಶುಕ್ರವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಮರಳಿ ದೆಹಲಿಗೆ ಕಳುಹಿಸಲಾಗಿದೆ.</p>.<p>‘ಶ್ರೀನಗರಕ್ಕೆ ಹೊರಗಿನವರಿಗೆ ಪ್ರವೇಶ ನಿರಾಕರಿಸುವ ಅಧಿಕೃತ ಆದೇಶವನ್ನು ಅಧಿಕಾರಿಗಳು ನಮಗೆ ತೋರಿಸಿದರು. ಭದ್ರತೆಯ ಕಾರಣದಿಂದಾಗಿ ಬೆಂಗಾವಲು ಸಹಿತವಾದ ಪ್ರವೇಶವನ್ನೂ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ’ ಎಂದು ಯೆಚೂರಿ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.</p>.<p>ಶ್ರೀನಗರ ವಿಮಾನ ನಿಲ್ದಾಣದಿಂದ ಅವರಿಬ್ಬರನ್ನೂ ಮರಳಿ ದೆಹಲಿಗೆ ಕಳುಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮುಖಂಡ ಗುಲಾಂನಬಿ ಆಜಾದ್ ಅವರನ್ನೂ ಗುರುವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಬಂಧಿಸಿ ದೆಹಲಿಗೆ ವಾಪಸ್ ಕಳುಹಿಸಲಾಗಿತ್ತು.</p>.<p><strong>ಸ್ವಾತಂತ್ರ್ಯೋತ್ಸವ ಆಚರಣೆ:</strong> ‘ಆಗಸ್ಟ್ 15 ರಂದು ರಾಜ್ಯದ ಪ್ರತಿ ಪಂಚಾಯಿತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು’ ಎಂದು ಬಿಜೆಪಿಯ ಜಮ್ಮು ಕಾಶ್ಮೀರ ಘಟಕದ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದರು.</p>.<p>‘370ನೇ ವಿಧಿಯನ್ನು ರದ್ದು ಮಾಡಿರುವುದು ರಾಜ್ಯದ ಜನಸಾಮಾನ್ಯರಿಗೆ ಲಭಿಸಿರುವ ಬಹು ದೊಡ್ಡ ಗೆಲುವಾಗಿದೆ. ಜಮ್ಮು ಕಾಶ್ಮೀರದ ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಬೇಕು’ ಎಂದು ಅವರು ಕರೆ ನೀಡಿದರು.</p>.<p><strong>ಥಾರ್ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು</strong></p>.<p>ಪಾಕಿಸ್ತಾನದ ಖೊಕ್ರಪರ್ನಿಂದ ರಾಜಸ್ಥಾನದ ಮುನಾಬಾವೊ ನಡುವೆ ವಾರಕ್ಕೊಮ್ಮೆ ಸಂಚರಿಸುತ್ತಿದ್ದ ‘ಥಾರ್ ಎಕ್ಸ್ಪ್ರೆಸ್’ ರೈಲು ಸಂಚಾರವನ್ನು ಸಹ ರದ್ದುಪಡಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ.</p>.<p>‘ನಾನು ರೈಲ್ವೆ ಖಾತೆಯ ಸಚಿವನಾಗಿರುವವರೆಗೂ ಭಾರತ–ಪಾಕಿಸ್ತಾನದ ಮಧ್ಯೆ ರೈಲು ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಪಾಕಿಸ್ತಾನದ ರೈಲ್ವೆ ಖಾತೆ ಸಚಿವ ಶೇಖ್ ರಷೀದ್ ಶುಕ್ರವಾರ ಹೇಳಿದ್ದಾರೆ.</p>.<p><strong>ಸಾಂಸ್ಕೃತಿಕ ಸಂಬಂಧಕ್ಕೂ ಕತ್ತರಿ:</strong> ಭಾರತದೊಂದಿಗಿನ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನೂ ಸಹ ಪಾಕಿಸ್ತಾನ ಮೊಟಕುಗೊಳಿಸಿದೆ. ಪಾಕಿಸ್ತಾನದ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ‘ಭಾರತ ಬೇಡ ಎನ್ನಿ’ ಎಂಬ ಅಭಿಯಾನವನ್ನೇ ಆರಂಭಿಸಿದೆ.</p>.<p><strong>25 ಮಂದಿ ಆಗ್ರಾ ಜೈಲಿಗೆ</strong></p>.<p>ಜಮ್ಮು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಮಿಯಾ ಖಯ್ಯೂಂ ಹಾಗೂ ಪದಾಧಿಕಾರಿ ಮುಬೀನ್ ಶಾ ಸೇರಿದಂತೆ 25 ಮಂದಿ ಪ್ರತ್ಯೇಕತಾವಾದಿಗಳನ್ನು ಶುಕ್ರವಾರ ಆಗ್ರಾ ಜೈಲಿಗೆ ಸ್ಥಳಾಂತರಿಸಲಾಗಿದೆ.</p>.<p>‘ಸ್ಥಳಾಂತರಗೊಂಡವರೆಲ್ಲ ಪ್ರತ್ಯೆಕತಾವಾದಿಗಳೆಂದು ಗುರುತಿಸಿಕೊಂಡವರಲ್ಲದೆ, ಜಮ್ಮು ಕಾಶ್ಮೀರದ ಶಾಂತಿ ಕದಡಿದ ಇತಿಹಾಸ ಹೊಂದಿದವರಾಗಿದ್ದಾರೆ. ಮುಂದೆಯೂ ಇವರು ಕಲ್ಲು ತೂರಾಟದಂಥ ಕೃತ್ಯದಲ್ಲಿ ತೊಡಗುವ ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಎಲ್ಲರನ್ನೂ ವಾಯುಪಡೆಯ ವಿಶೇಷ ವಿಮಾನದಲ್ಲಿ ಕರೆತಂದು ಆಗ್ರಾದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>