<p><strong>ನಾಗ್ಪುರ:</strong> ದೇಶದಲ್ಲಿರುವ ಎಲ್ಲರಿಗೂ ತಮ್ಮ ಬೆಳವಣಿಗೆ ಹೊಂದಲು ಸಮಾನವಾದ ಅವಕಾಶಗಳು ಸಿಕ್ಕಾಗ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವೆಂದು ಕರೆಯಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ. </p><p>ನಾಗ್ಪುರದಲ್ಲಿ ಬ್ರಹ್ಮಕುಮಾರಿ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ‘ಒಗ್ಗಟ್ಟು ಮತ್ತು ನಂಬಿಕೆಯ ಮೂಲಕ ಮಹಾರಾಷ್ಟ್ರದ ಸುವರ್ಣ ಯುಗ’ ಎನ್ನುವ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. </p><p>ಈ ಅಭಿಯಾನವು ಮಹಾರಾಷ್ಟ್ರದಾದ್ಯಂತ ನಂಬಿಕೆ, ಸಾಮರಸ್ಯ, ಒಗ್ಗಟ್ಟು ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತಲು ನೆರವಾಗಲಿದೆ. ನಾವೆಲ್ಲರೂ ಜೀವನದಲ್ಲಿ ನಕಾರಾತ್ಮಕತೆಯನ್ನು ತ್ಯಜಿಸಿ, ಸಕಾರಾತ್ಮಕತೆಯನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.</p><p>ಛತ್ರಪತಿ ಶಿವಾಜಿ ಮಹಾರಾಜರು ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ. </p><p>ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ, ರಾಜ್ಯ ಹಣಕಾಸು ಸಚಿವ ಚಂದ್ರಶೇಖರ್ ಬವಾಂಕುಲೆ ಹಾಗೂ ಬ್ರಹ್ಮಕುಮಾರಿ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ದೇಶದಲ್ಲಿರುವ ಎಲ್ಲರಿಗೂ ತಮ್ಮ ಬೆಳವಣಿಗೆ ಹೊಂದಲು ಸಮಾನವಾದ ಅವಕಾಶಗಳು ಸಿಕ್ಕಾಗ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವೆಂದು ಕರೆಯಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ. </p><p>ನಾಗ್ಪುರದಲ್ಲಿ ಬ್ರಹ್ಮಕುಮಾರಿ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ‘ಒಗ್ಗಟ್ಟು ಮತ್ತು ನಂಬಿಕೆಯ ಮೂಲಕ ಮಹಾರಾಷ್ಟ್ರದ ಸುವರ್ಣ ಯುಗ’ ಎನ್ನುವ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. </p><p>ಈ ಅಭಿಯಾನವು ಮಹಾರಾಷ್ಟ್ರದಾದ್ಯಂತ ನಂಬಿಕೆ, ಸಾಮರಸ್ಯ, ಒಗ್ಗಟ್ಟು ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತಲು ನೆರವಾಗಲಿದೆ. ನಾವೆಲ್ಲರೂ ಜೀವನದಲ್ಲಿ ನಕಾರಾತ್ಮಕತೆಯನ್ನು ತ್ಯಜಿಸಿ, ಸಕಾರಾತ್ಮಕತೆಯನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.</p><p>ಛತ್ರಪತಿ ಶಿವಾಜಿ ಮಹಾರಾಜರು ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ. </p><p>ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ, ರಾಜ್ಯ ಹಣಕಾಸು ಸಚಿವ ಚಂದ್ರಶೇಖರ್ ಬವಾಂಕುಲೆ ಹಾಗೂ ಬ್ರಹ್ಮಕುಮಾರಿ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>