<p><strong>ಡೆಹಾರಡೂನ್:</strong> ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67ನೇ ಜನ್ಮದಿನ ಅತ್ಯಂತ ಸ್ಮರಣೀಯವಾಗಿತ್ತು. ಅಂಧ ಮಕ್ಕಳು ಹಾಡಿನ ಮೂಲಕ ಜನ್ಮದಿನ ಶುಭಾಶಯ ಕೋರುತ್ತಿದ್ದಂತೆ, ಉಕ್ಕಿಬರುತ್ತಿದ್ದ ಕಣ್ಣೀರನ್ನು ತಡೆಯಲಾಗದೆ ರಾಷ್ಟ್ರಪತಿ ಅವರು ಬಿಕ್ಕಿ ಬಿಕ್ಕಿ ಅತ್ತರು.</p><p>ಅಂಧ ವ್ಯಕ್ತಿಗಳ ಸಬಲೀಕರಣದ ರಾಷ್ಟ್ರೀಯ ಸಂಸ್ಥೆಗೆ ರಾಷ್ಟ್ರಪತಿ ಮುರ್ಮು ಅವರು ಶುಕ್ರವಾರ ಭೇಟಿ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಅಲ್ಲಿನ ವಿದ್ಯಾರ್ಥಿಗಳು ‘ಹ್ಯಾಪಿ ಬರ್ತ್ ಡೇ ಟು ಯೂ’ ಎಂಬ ಹಾಡನ್ನು ಹಾಡಿದರು. ಮಕ್ಕಳ ಹಾಡು ಕೇಳಿ ಭಾವುಕರಾದ ಅವರು, ಗಳಗಳನೆ ಅತ್ತರು.</p><p>‘ಮಕ್ಕಳು ಎಷ್ಟು ಸುಂದರವಾಗಿ ಹಾಡಿದರೆಂದರೆ ನನ್ನಗೆ ಕಣ್ಣೀರು ತಡೆಯಲೇ ಆಗಲಿಲ್ಲ. ಹೃದಯಾಳದ ಆ ಹಾಡು ಕೇಳಿ ಭಾವುಕಳಾದೆ’ ಎಂದು ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.</p>.<p>‘ಅಂಗವೈಕಲ್ಯತೆಯೊಂದಿಗೆ ಹುಟ್ಟಿದ ಮಕ್ಕಳಿಗೆ ವಿಶೇಷವಾದ ಶಕ್ತಿಯೊಂದು ಇದ್ದೇ ಇರುತ್ತದೆ. ಹೀಗಾಗಿ ಆತ್ಮವಿಶ್ವಾಸದಿಂದ ಮುಂದಡಿ ಇಟ್ಟಲ್ಲಿ ಯಶಸ್ಸು ಸಿಕ್ಕೇ ಸಿಗುತ್ತದೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರ್ಕಾರವು ಹಲವು ನೀತಿಗಳನ್ನು ರೂಪಿಸಿದೆ’ ಎಂದರು.</p><p>‘ದಯೆ, ಕರುಣೆ ಹಾಗೂ ಎಲ್ಲರನ್ನೂ ಒಳಗೊಳ್ಳುವ ಗುಣ ಭಾರತದ ಇತಿಹಾಸದಲ್ಲಿ ಹಾಸುಹೊಕ್ಕಾಗಿದೆ. ಈ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದರು.</p><p>ಉತ್ತರಾಖಂಡದ ರಾಜ್ಯಪಾಲ, ನಿವೃತ್ತ ಲೆಫ್ಟಿನೆಂಟ್ ಗುರ್ಮಿತ್ ಸಿಂಗ್ ಮಾತನಾಡಿ, ‘ದೇಶವು ಈಗ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 2047ರಲ್ಲಿ ಸದೃಢ ಭಾರತ ನಿರ್ಮಾಣದ ಕನಸಿನ ಗುರಿ ಸಾಧನೆಯೆಡೆಗೆ ದೇಶ ಮುನ್ನಡೆಯುತ್ತಿದೆ. ಈ ಪಯಣದಲ್ಲಿ ನೀವೂ ಭಾಗಿ’ ಎಂದರು.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಷ್ಟ್ರಪತಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ‘ಸಂಕಷ್ಟ ದಿನಗಳನ್ನು ನೋಡಿರುವ ದ್ರೌಪದಿ ಮುರ್ಮು ಅವರ ಬದುಕು ಮತ್ತು ಸಾಧನೆಯೇ ನಮ್ಮೆಲ್ಲರಿಗೂ ಸ್ಫೂರ್ತಿ. ಸೌಲಭ್ಯ ವಂಚಿತ ಸಮುದಾಯಗಳ ಸಬಲೀಕರಣದತ್ತ ಅವರ ಪರಿಶ್ರಮ ಅನುಕರಣೀಯ’ ಎಂದರು.</p><p>ಉತ್ತರಾಖಂಡಕ್ಕೆ ಗುರುವಾರ ಬಂದ ದ್ರೌಪದಿ ಮುರ್ಮು ಅವರು ಇಲ್ಲಿನ ನವೀಕೃತ ‘ಪ್ರೆಸಿಡೆಂಟ್ ರಿಟ್ರೀಟ್’ ಅನ್ನು ಉದ್ಘಾಟಿಸಿ ‘ರಾಷ್ಟ್ರಪತಿ ನಿಕೇತನ’ ಎಂದು ಮರುನಾಮಕರಣ ಮಾಡಿದರು. ಇದರೊಂದಿಗೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. </p><p>ಜೂನ್ 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗಾಗಿ ದೆಹಲಿಗೆ ಪ್ರಯಾಣಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹಾರಡೂನ್:</strong> ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67ನೇ ಜನ್ಮದಿನ ಅತ್ಯಂತ ಸ್ಮರಣೀಯವಾಗಿತ್ತು. ಅಂಧ ಮಕ್ಕಳು ಹಾಡಿನ ಮೂಲಕ ಜನ್ಮದಿನ ಶುಭಾಶಯ ಕೋರುತ್ತಿದ್ದಂತೆ, ಉಕ್ಕಿಬರುತ್ತಿದ್ದ ಕಣ್ಣೀರನ್ನು ತಡೆಯಲಾಗದೆ ರಾಷ್ಟ್ರಪತಿ ಅವರು ಬಿಕ್ಕಿ ಬಿಕ್ಕಿ ಅತ್ತರು.</p><p>ಅಂಧ ವ್ಯಕ್ತಿಗಳ ಸಬಲೀಕರಣದ ರಾಷ್ಟ್ರೀಯ ಸಂಸ್ಥೆಗೆ ರಾಷ್ಟ್ರಪತಿ ಮುರ್ಮು ಅವರು ಶುಕ್ರವಾರ ಭೇಟಿ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಅಲ್ಲಿನ ವಿದ್ಯಾರ್ಥಿಗಳು ‘ಹ್ಯಾಪಿ ಬರ್ತ್ ಡೇ ಟು ಯೂ’ ಎಂಬ ಹಾಡನ್ನು ಹಾಡಿದರು. ಮಕ್ಕಳ ಹಾಡು ಕೇಳಿ ಭಾವುಕರಾದ ಅವರು, ಗಳಗಳನೆ ಅತ್ತರು.</p><p>‘ಮಕ್ಕಳು ಎಷ್ಟು ಸುಂದರವಾಗಿ ಹಾಡಿದರೆಂದರೆ ನನ್ನಗೆ ಕಣ್ಣೀರು ತಡೆಯಲೇ ಆಗಲಿಲ್ಲ. ಹೃದಯಾಳದ ಆ ಹಾಡು ಕೇಳಿ ಭಾವುಕಳಾದೆ’ ಎಂದು ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.</p>.<p>‘ಅಂಗವೈಕಲ್ಯತೆಯೊಂದಿಗೆ ಹುಟ್ಟಿದ ಮಕ್ಕಳಿಗೆ ವಿಶೇಷವಾದ ಶಕ್ತಿಯೊಂದು ಇದ್ದೇ ಇರುತ್ತದೆ. ಹೀಗಾಗಿ ಆತ್ಮವಿಶ್ವಾಸದಿಂದ ಮುಂದಡಿ ಇಟ್ಟಲ್ಲಿ ಯಶಸ್ಸು ಸಿಕ್ಕೇ ಸಿಗುತ್ತದೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರ್ಕಾರವು ಹಲವು ನೀತಿಗಳನ್ನು ರೂಪಿಸಿದೆ’ ಎಂದರು.</p><p>‘ದಯೆ, ಕರುಣೆ ಹಾಗೂ ಎಲ್ಲರನ್ನೂ ಒಳಗೊಳ್ಳುವ ಗುಣ ಭಾರತದ ಇತಿಹಾಸದಲ್ಲಿ ಹಾಸುಹೊಕ್ಕಾಗಿದೆ. ಈ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದರು.</p><p>ಉತ್ತರಾಖಂಡದ ರಾಜ್ಯಪಾಲ, ನಿವೃತ್ತ ಲೆಫ್ಟಿನೆಂಟ್ ಗುರ್ಮಿತ್ ಸಿಂಗ್ ಮಾತನಾಡಿ, ‘ದೇಶವು ಈಗ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 2047ರಲ್ಲಿ ಸದೃಢ ಭಾರತ ನಿರ್ಮಾಣದ ಕನಸಿನ ಗುರಿ ಸಾಧನೆಯೆಡೆಗೆ ದೇಶ ಮುನ್ನಡೆಯುತ್ತಿದೆ. ಈ ಪಯಣದಲ್ಲಿ ನೀವೂ ಭಾಗಿ’ ಎಂದರು.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಷ್ಟ್ರಪತಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ‘ಸಂಕಷ್ಟ ದಿನಗಳನ್ನು ನೋಡಿರುವ ದ್ರೌಪದಿ ಮುರ್ಮು ಅವರ ಬದುಕು ಮತ್ತು ಸಾಧನೆಯೇ ನಮ್ಮೆಲ್ಲರಿಗೂ ಸ್ಫೂರ್ತಿ. ಸೌಲಭ್ಯ ವಂಚಿತ ಸಮುದಾಯಗಳ ಸಬಲೀಕರಣದತ್ತ ಅವರ ಪರಿಶ್ರಮ ಅನುಕರಣೀಯ’ ಎಂದರು.</p><p>ಉತ್ತರಾಖಂಡಕ್ಕೆ ಗುರುವಾರ ಬಂದ ದ್ರೌಪದಿ ಮುರ್ಮು ಅವರು ಇಲ್ಲಿನ ನವೀಕೃತ ‘ಪ್ರೆಸಿಡೆಂಟ್ ರಿಟ್ರೀಟ್’ ಅನ್ನು ಉದ್ಘಾಟಿಸಿ ‘ರಾಷ್ಟ್ರಪತಿ ನಿಕೇತನ’ ಎಂದು ಮರುನಾಮಕರಣ ಮಾಡಿದರು. ಇದರೊಂದಿಗೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. </p><p>ಜೂನ್ 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗಾಗಿ ದೆಹಲಿಗೆ ಪ್ರಯಾಣಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>