<p><strong>ನವದೆಹಲಿ</strong>: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಭೀತವಾಗಿ ಕಾರ್ಯನಿರ್ವಹಿಸುತ್ತಿದ್ದು, ಖಚಿತ ನಿರ್ಧಾರ ತೆಗೆದುಕೊಳ್ಳುತ್ತಿದೆ. ಪಕ್ಷಪಾತ ಮಾಡದೇ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದರು.</p>.<p>ಬಜೆಟ್ ಅಧಿವೇಶನದ ಮೊದಲ ದಿನ, ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ಅವರು, ‘ಕೇಂದ್ರ ಸರ್ಕಾರವು ಅಭಿವೃದ್ಧಿಯ ಜೊತೆಗೆ ದೇಶದ ಭವ್ಯ ಪರಂಪರೆಗೂ ಮಹತ್ವ ನೀಡುತ್ತಿದೆ’ ಎಂದು ವಿವರಿಸಿದರು.</p>.<p>‘ಭ್ರಷ್ಟಾಚಾರ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ದೊಡ್ಡ ಶತ್ರು. ಇದರ ವಿರುದ್ಧ ಸರ್ಕಾರವು ನಿರಂತರ ಹೋರಾಟ ನಡೆಸುತ್ತಿದೆ. 2047ರ ವೇಳೆಗೆ ಭಾರತವು ಸ್ವಾವಲಂಬಿ ಹಾಗೂ ತನ್ನ ಜವಾಬ್ದಾರಿಯನ್ನು ಪೂರೈಸುವ ದೇಶವಾಗಿ ಹೊರಹೊಮ್ಮಬೇಕಿದೆ’ ಎಂದು ಹೇಳಿದರು.</p>.<p>‘2047ರ ಭಾರತವು ಬಡತನದಿಂದ ಮುಕ್ತವಾಗಿರಬೇಕು. ದೇಶದ ಮಧ್ಯಮ ವರ್ಗದ ಜನರ ಅಭಿವೃದ್ಧಿಯೂ ಆಗಿರಬೇಕು’ ಎಂಬ ಆಶಯವನ್ನು ಮುರ್ಮು ವ್ಯಕ್ತಪಡಿಸಿದರು.</p>.<p>ಒಂದು ಗಂಟೆಗೂ ಹೆಚ್ಚು ಅವಧಿಯ ತಮ್ಮ ಭಾಷಣದಲ್ಲಿ ರಾಷ್ಟ್ರಪತಿ ಮುರ್ಮು ಅವರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಬಿಚ್ಚಿಟ್ಟರು.</p>.<p><strong>ಓದಿ... <a href="https://www.prajavani.net/india-news/president-murmu-lays-out-vision-for-amrit-kaal-to-build-developed-india-in-25-years-1011247.html" target="_blank">ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು: ದ್ರೌಪದಿ ಮುರ್ಮು</a></strong></p>.<p><strong>ರಾಷ್ಟ್ರಪತಿ ಮುರ್ಮು ಅವರ ಭಾಷಣದ ಪ್ರಮುಖ ಅಂಶಗಳು ಹೀಗಿವೆ</strong></p>.<p>* ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ. ಗಡಿ ನಿಯಂತ್ರಣ ರೇಖೆ (ಎಲ್ಒಸಿ) ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿಯ ದುಸ್ಸಾಹಸಗಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ</p>.<p>* ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯಂತಹ ದಿಟ್ಟ ಕ್ರಮಗಳ ಮೂಲಕ ದೃಢ ನಿರ್ಧಾರ ಕೈಗೊಳ್ಳುವ ಸರ್ಕಾರ ಎಂಬುದನ್ನು ಸಾಬೀತುಪಡಿಸಲಾಗಿದೆ</p>.<p>* ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕೆಲ ಸೌಲಭ್ಯಗಳು ಜನರಿಗೆ ನೂರಕ್ಕೆ ನೂರರಷ್ಟು ಜನರಿಗೆ ತಲುಪಿವೆ ಇಲ್ಲವೇ ಗುರಿ ತಲುಪುವ ಹಂತದಲ್ಲಿವೆ</p>.<p>* ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ವಿಳಂಬ ಇಲ್ಲ. ದೂರದೃಷ್ಟಿವುಳ್ಳ ನಿರ್ಧಾರಗಳು ಹಾಗೂ ಅಭಿವೃದ್ಧಿಯಲ್ಲಿನ ವೇಗದಿಂದ ಭಾರತವನ್ನು ಗುರುತಿಸಲಾಗುತ್ತಿದೆ. ಈ ಕಾರಣಗಳಿಂದಾಗಿಯೇ, 10ನೇ ಸ್ಥಾನದಲ್ಲಿದ್ದ ಭಾರತ 5ನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ.</p>.<p>* ಬಡವರು ಹಾಗೂ ಮಹಿಳೆಯರ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ಸಮಾಜದಲ್ಲಿನ ದುರ್ಬಲರ ಏಳಿಗೆಗೂ ಕ್ರಮ ಕೈಗೊಂಡಿದೆ.</p>.<p>* ದೇಶದ ಸಂಸ್ಕೃತಿ ಹಾಗೂ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಮ ಮಂದಿರ, ಕೇದಾರನಾಥ ಧಾಮ ನಿರ್ಮಾಣ ಕಾರ್ಯ ಒಂದೆಡೆಯಾದರೆ, ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳ ಸ್ಥಾಪನೆಗೂ ಕ್ರಮಕೈಗೊಳ್ಳಲಾಗಿದೆ.</p>.<p>* ಮುಂದಿನ 25 ವರ್ಷಗಳ ಅವಧಿಯನ್ನು ಸರ್ಕಾರ ‘ಅಮೃತ ಕಾಲ’ ಎಂದು ಬಣ್ಣಿಸುತ್ತದೆ. ಈ ಅವಧಿಯಲ್ಲಿ ದೇಶವು ‘ಆತ್ಮನಿರ್ಭರ’ವಾಗಬೇಕು. ಈ ಕನಸು ಈಡೇರಿಕೆಗೆ ದೇಶದ ಪ್ರತಿಯೊಬ್ಬರ ಪ್ರಜೆಯೂ ಕೈಜೋಡಿಸಬೇಕು.</p>.<p>* ಜಗತ್ತು ಎದುರಿಸುತ್ತಿರುವ ಸಮಸ್ಯೆಗಳಿಗೆ ಭಾರತವು ಜಿ–20 ಸದಸ್ಯ ರಾಷ್ಟ್ರಗಳ ನೆರವಿನೊಂದಿಗೆ ಸಾಮೂಹಿಕ ನೆಲೆಗಟ್ಟಿನಲ್ಲಿ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದೆ.</p>.<p>* 2070ರ ವೇಳೆಗೆ ಪರಿಸರಕ್ಕೆ ಇಂಗಾಲ ಸೇರುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಸಂಕಲ್ಪ ಮಾಡಿದ್ದು, ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು ಸಾಮರ್ಥ್ಯದ ಪೈಕಿ ಶೇ 40ರಷ್ಟು ವಿದ್ಯುತ್ಅನ್ನು ಪಳೆಯುಳಿಕೆಯೇತರ ಇಂಧನ ಮೂಲಗಳಿಂದ ಉತ್ಪಾದಿಸುವ ಗುರಿಯನ್ನು ಸಾಧಿಸಲಾಗಿದೆ.</p>.<p>* ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಭೀತವಾಗಿ ಕಾರ್ಯನಿರ್ವಹಿಸುತ್ತಿದ್ದು, ಖಚಿತ ನಿರ್ಧಾರ ತೆಗೆದುಕೊಳ್ಳುತ್ತಿದೆ. ಪಕ್ಷಪಾತ ಮಾಡದೇ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದರು.</p>.<p>ಬಜೆಟ್ ಅಧಿವೇಶನದ ಮೊದಲ ದಿನ, ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ಅವರು, ‘ಕೇಂದ್ರ ಸರ್ಕಾರವು ಅಭಿವೃದ್ಧಿಯ ಜೊತೆಗೆ ದೇಶದ ಭವ್ಯ ಪರಂಪರೆಗೂ ಮಹತ್ವ ನೀಡುತ್ತಿದೆ’ ಎಂದು ವಿವರಿಸಿದರು.</p>.<p>‘ಭ್ರಷ್ಟಾಚಾರ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ದೊಡ್ಡ ಶತ್ರು. ಇದರ ವಿರುದ್ಧ ಸರ್ಕಾರವು ನಿರಂತರ ಹೋರಾಟ ನಡೆಸುತ್ತಿದೆ. 2047ರ ವೇಳೆಗೆ ಭಾರತವು ಸ್ವಾವಲಂಬಿ ಹಾಗೂ ತನ್ನ ಜವಾಬ್ದಾರಿಯನ್ನು ಪೂರೈಸುವ ದೇಶವಾಗಿ ಹೊರಹೊಮ್ಮಬೇಕಿದೆ’ ಎಂದು ಹೇಳಿದರು.</p>.<p>‘2047ರ ಭಾರತವು ಬಡತನದಿಂದ ಮುಕ್ತವಾಗಿರಬೇಕು. ದೇಶದ ಮಧ್ಯಮ ವರ್ಗದ ಜನರ ಅಭಿವೃದ್ಧಿಯೂ ಆಗಿರಬೇಕು’ ಎಂಬ ಆಶಯವನ್ನು ಮುರ್ಮು ವ್ಯಕ್ತಪಡಿಸಿದರು.</p>.<p>ಒಂದು ಗಂಟೆಗೂ ಹೆಚ್ಚು ಅವಧಿಯ ತಮ್ಮ ಭಾಷಣದಲ್ಲಿ ರಾಷ್ಟ್ರಪತಿ ಮುರ್ಮು ಅವರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಬಿಚ್ಚಿಟ್ಟರು.</p>.<p><strong>ಓದಿ... <a href="https://www.prajavani.net/india-news/president-murmu-lays-out-vision-for-amrit-kaal-to-build-developed-india-in-25-years-1011247.html" target="_blank">ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು: ದ್ರೌಪದಿ ಮುರ್ಮು</a></strong></p>.<p><strong>ರಾಷ್ಟ್ರಪತಿ ಮುರ್ಮು ಅವರ ಭಾಷಣದ ಪ್ರಮುಖ ಅಂಶಗಳು ಹೀಗಿವೆ</strong></p>.<p>* ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ. ಗಡಿ ನಿಯಂತ್ರಣ ರೇಖೆ (ಎಲ್ಒಸಿ) ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿಯ ದುಸ್ಸಾಹಸಗಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ</p>.<p>* ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಯಂತಹ ದಿಟ್ಟ ಕ್ರಮಗಳ ಮೂಲಕ ದೃಢ ನಿರ್ಧಾರ ಕೈಗೊಳ್ಳುವ ಸರ್ಕಾರ ಎಂಬುದನ್ನು ಸಾಬೀತುಪಡಿಸಲಾಗಿದೆ</p>.<p>* ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕೆಲ ಸೌಲಭ್ಯಗಳು ಜನರಿಗೆ ನೂರಕ್ಕೆ ನೂರರಷ್ಟು ಜನರಿಗೆ ತಲುಪಿವೆ ಇಲ್ಲವೇ ಗುರಿ ತಲುಪುವ ಹಂತದಲ್ಲಿವೆ</p>.<p>* ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ವಿಳಂಬ ಇಲ್ಲ. ದೂರದೃಷ್ಟಿವುಳ್ಳ ನಿರ್ಧಾರಗಳು ಹಾಗೂ ಅಭಿವೃದ್ಧಿಯಲ್ಲಿನ ವೇಗದಿಂದ ಭಾರತವನ್ನು ಗುರುತಿಸಲಾಗುತ್ತಿದೆ. ಈ ಕಾರಣಗಳಿಂದಾಗಿಯೇ, 10ನೇ ಸ್ಥಾನದಲ್ಲಿದ್ದ ಭಾರತ 5ನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ.</p>.<p>* ಬಡವರು ಹಾಗೂ ಮಹಿಳೆಯರ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ಸಮಾಜದಲ್ಲಿನ ದುರ್ಬಲರ ಏಳಿಗೆಗೂ ಕ್ರಮ ಕೈಗೊಂಡಿದೆ.</p>.<p>* ದೇಶದ ಸಂಸ್ಕೃತಿ ಹಾಗೂ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಮ ಮಂದಿರ, ಕೇದಾರನಾಥ ಧಾಮ ನಿರ್ಮಾಣ ಕಾರ್ಯ ಒಂದೆಡೆಯಾದರೆ, ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳ ಸ್ಥಾಪನೆಗೂ ಕ್ರಮಕೈಗೊಳ್ಳಲಾಗಿದೆ.</p>.<p>* ಮುಂದಿನ 25 ವರ್ಷಗಳ ಅವಧಿಯನ್ನು ಸರ್ಕಾರ ‘ಅಮೃತ ಕಾಲ’ ಎಂದು ಬಣ್ಣಿಸುತ್ತದೆ. ಈ ಅವಧಿಯಲ್ಲಿ ದೇಶವು ‘ಆತ್ಮನಿರ್ಭರ’ವಾಗಬೇಕು. ಈ ಕನಸು ಈಡೇರಿಕೆಗೆ ದೇಶದ ಪ್ರತಿಯೊಬ್ಬರ ಪ್ರಜೆಯೂ ಕೈಜೋಡಿಸಬೇಕು.</p>.<p>* ಜಗತ್ತು ಎದುರಿಸುತ್ತಿರುವ ಸಮಸ್ಯೆಗಳಿಗೆ ಭಾರತವು ಜಿ–20 ಸದಸ್ಯ ರಾಷ್ಟ್ರಗಳ ನೆರವಿನೊಂದಿಗೆ ಸಾಮೂಹಿಕ ನೆಲೆಗಟ್ಟಿನಲ್ಲಿ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದೆ.</p>.<p>* 2070ರ ವೇಳೆಗೆ ಪರಿಸರಕ್ಕೆ ಇಂಗಾಲ ಸೇರುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಸಂಕಲ್ಪ ಮಾಡಿದ್ದು, ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು ಸಾಮರ್ಥ್ಯದ ಪೈಕಿ ಶೇ 40ರಷ್ಟು ವಿದ್ಯುತ್ಅನ್ನು ಪಳೆಯುಳಿಕೆಯೇತರ ಇಂಧನ ಮೂಲಗಳಿಂದ ಉತ್ಪಾದಿಸುವ ಗುರಿಯನ್ನು ಸಾಧಿಸಲಾಗಿದೆ.</p>.<p>* ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>