<p><strong>ನವದೆಹಲಿ</strong>: ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಬಲವಂತ್ ಎಸ್. ರಾಜೊಆನಾಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪುನರ್ಪರಿಶೀಲಿಸುವ ವಿಷಯ ರಾಷ್ಟ್ರಪತಿ ಅವರ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>‘ಖಾಲಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಬಿಯಾಂತ್ ಸಿಂಗ್ ಅವರನ್ನು ಬಲವಂತ್ ಹತ್ಯೆ ಮಾಡಿದ್ದ. ಅಪರಾಧಿಗೆ ಕ್ಷಮಾದಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನಾ ಪ್ರಕ್ರಿಯೆಗಳು ಆರಂಭವಾಗಿವೆ. ರಾಷ್ಟ್ರಪತಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.</p>.<p>‘ಪ್ರಸ್ತುತ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲು ಆರು ವಾರಗಳ ಕಾಲಾವಕಾಶ ಅಗತ್ಯವಿದೆ’ ಎಂದು ತುಷಾರ್ ಮೆಹ್ತಾ ತಿಳಿಸಿದ್ದಾರೆ.</p>.<p>ಬಲವಂತ ಪರ ವಾದ ಮಾಡಿದ ಹಿರಿಯ ವಕೀಲ ಮುಕುಲ್ ರೋಹಟಗಿ, ‘ಕಳೆದ 25 ವರ್ಷಗಳಿಂದ ಬಲವಂತ್ ಜೈಲಿನಲ್ಲಿದ್ದಾನೆ. ಆತನ ಕ್ಷಮಾದಾನ ಅರ್ಜಿಯು ಕಳೆದ ಒಂಬತ್ತು ವರ್ಷಗಳಿಂದ ಬಾಕಿ ಉಳಿದಿದೆ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.</p>.<p>ಪಂಜಾಬ್ ಪೊಲೀಸ್ನ ಮಾಜಿ ಕಾನ್ಸ್ಟೆಬಲ್ ಬಲವಂತ್, 1995ರಲ್ಲಿ ಪಂಜಾಬ್ ಸಚಿವಾಲಯದ ಹೊರಗೆ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾನೆ. ಈ ಸ್ಫೋಟದಲ್ಲಿ ಬಿಯಾಂತ್ ಸಿಂಗ್ ಮತ್ತು ಇತರ 16 ಮಂದಿ ಸಾವಿಗೀಡಾಗಿದ್ದರು.</p>.<p>ಗಲ್ಲು ಶಿಕ್ಷೆಯನ್ನು ಪರಿವರ್ತಿಸಿ ಕಡಿಮೆ ಶಿಕ್ಷೆ ವಿಧಿಸುವಂತೆ ಕೋರಿ ಬಲವಂತ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಎರಡು ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಜನವರಿ 25ರಂದು ಆದೇಶ ನೀಡಿತ್ತು.</p>.<p>ತುಷಾರ್ ಮೆಹ್ತಾ ಅವರ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಬಲವಂತ್ ಎಸ್. ರಾಜೊಆನಾಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪುನರ್ಪರಿಶೀಲಿಸುವ ವಿಷಯ ರಾಷ್ಟ್ರಪತಿ ಅವರ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>‘ಖಾಲಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಬಿಯಾಂತ್ ಸಿಂಗ್ ಅವರನ್ನು ಬಲವಂತ್ ಹತ್ಯೆ ಮಾಡಿದ್ದ. ಅಪರಾಧಿಗೆ ಕ್ಷಮಾದಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನಾ ಪ್ರಕ್ರಿಯೆಗಳು ಆರಂಭವಾಗಿವೆ. ರಾಷ್ಟ್ರಪತಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ವಿವರಿಸಿದರು.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.</p>.<p>‘ಪ್ರಸ್ತುತ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲು ಆರು ವಾರಗಳ ಕಾಲಾವಕಾಶ ಅಗತ್ಯವಿದೆ’ ಎಂದು ತುಷಾರ್ ಮೆಹ್ತಾ ತಿಳಿಸಿದ್ದಾರೆ.</p>.<p>ಬಲವಂತ ಪರ ವಾದ ಮಾಡಿದ ಹಿರಿಯ ವಕೀಲ ಮುಕುಲ್ ರೋಹಟಗಿ, ‘ಕಳೆದ 25 ವರ್ಷಗಳಿಂದ ಬಲವಂತ್ ಜೈಲಿನಲ್ಲಿದ್ದಾನೆ. ಆತನ ಕ್ಷಮಾದಾನ ಅರ್ಜಿಯು ಕಳೆದ ಒಂಬತ್ತು ವರ್ಷಗಳಿಂದ ಬಾಕಿ ಉಳಿದಿದೆ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.</p>.<p>ಪಂಜಾಬ್ ಪೊಲೀಸ್ನ ಮಾಜಿ ಕಾನ್ಸ್ಟೆಬಲ್ ಬಲವಂತ್, 1995ರಲ್ಲಿ ಪಂಜಾಬ್ ಸಚಿವಾಲಯದ ಹೊರಗೆ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾನೆ. ಈ ಸ್ಫೋಟದಲ್ಲಿ ಬಿಯಾಂತ್ ಸಿಂಗ್ ಮತ್ತು ಇತರ 16 ಮಂದಿ ಸಾವಿಗೀಡಾಗಿದ್ದರು.</p>.<p>ಗಲ್ಲು ಶಿಕ್ಷೆಯನ್ನು ಪರಿವರ್ತಿಸಿ ಕಡಿಮೆ ಶಿಕ್ಷೆ ವಿಧಿಸುವಂತೆ ಕೋರಿ ಬಲವಂತ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಎರಡು ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಜನವರಿ 25ರಂದು ಆದೇಶ ನೀಡಿತ್ತು.</p>.<p>ತುಷಾರ್ ಮೆಹ್ತಾ ಅವರ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>