ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರುವರಿ 6ರಂದು ವಿಶೇಷ ಅಧಿವೇಶನದ ಸಂದರ್ಭ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತ್ತು. ಮಸೂದೆ ಅಂಗೀಕಾರವು ಉತ್ತರಾಖಂಡ ರಾಜ್ಯದಲ್ಲಿ ಇತಿಹಾಸವಾಗಲಿದೆ ಎಂದು ಧಾಮಿ ಹೇಳಿದ್ದರು. ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿತ್ತು.
‘2022ರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಯನ್ನು ಈ ಕಾಯ್ದೆ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಇದು ಉತ್ತರಾಖಂಡದ ಚಿಕ್ಕ ಕೊಡುಗೆ ’ ಎಂದು ಸಿಎಂ ಹೇಳಿದ್ದರು.
ಈ ಮೂಲಕ ಎಲ್ಲ ಧರ್ಮಗಳ ಮಹಿಳೆಯರು, ಪುರುಷರಿಗೆ ಏಕರೂಪದ ಕಾನೂನು ಅನ್ವಯವಾಗಲಿದೆ. ತಾರತಮ್ಯರಹಿತ, ಏಕತೆಯ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದೂ ಅವರು ಹೇಳಿದ್ದರು.