<p><strong>ನವದೆಹಲಿ:</strong> ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ.20-22ರವರೆಗೆ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.</p><p>ನ.20ರಂದು ಮುರ್ಮು ಅವರು, 'ಒಡಿಶಾದ ಬರಿಪದದಲ್ಲಿ ಅಖಿಲ ಭಾರತ ಸಂತಾಲಿ ಲೇಖಕರ ಸಂಘದ 36ನೇ ವಾರ್ಷಿಕ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಅದೇ ದಿನ ಅವರು ಕುಲಿಯಾನದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಸಹ ಉದ್ಘಾಟಿಸಲಿದ್ದಾರೆ' ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. </p><p>ನ.21 ರಂದು ಪಹಾದ್ಪುರ ಗ್ರಾಮದಲ್ಲಿ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ತರುವಾಯ ಬದಂಪಹಾರ್ ರೈಲು ನಿಲ್ದಾಣಕ್ಕೆ ಭೇಟಿ ಅಲ್ಲಿ ಅವರು ಮೂರು ಹೊಸ ರೈಲು(ಬದಂಪಹಾರ್- ಟಾಟಾನಗರ, ಬದಂಪಹಾರ್-ರೂರ್ಕೆಲಾ ಎಕ್ಸ್ಪ್ರೆಸ್ ಮತ್ತು ಬದಂಪಹಾರ್-ಶಾಲಿಮಾರ್ ಎಕ್ಸ್ಪ್ರೆಸ್) ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.</p><p>ಬಳಿಕ ಅವರು ಬದಂಪಹಾರ್-ಶಾಲಿಮಾರ್ ಎಕ್ಸ್ಪ್ರೆಸ್ನಲ್ಲಿ ಬದಂಪಹಾರ್ನಿಂದ ರೈರಂಗಪುರಕ್ಕೆ ಪ್ರಯಾಣಿಸುತ್ತಾರೆ. ಅದೇ ದಿನ ಸಂಜೆ ಬುರ್ಲಾದ ವೀರ್ ಸುರೇಂದ್ರ ಸಾಯಿ ತಂತ್ರಜ್ಞಾನ ವಿಶ್ವವಿದ್ಯಾಲಯದ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.</p><p>ನ.22ರಂದು ಸಂಬಲ್ಪುರದ ಬ್ರಹ್ಮಾಕುಮಾರೀಸ್ ಸೇವಾಕೇಂದ್ರ ಆಯೋಜಿಸಿರುವ ರಾಷ್ಟ್ರೀಯ ಶಿಕ್ಷಣ ಅಭಿಯಾನ- 'ನವ ಭಾರತಕ್ಕಾಗಿ ಹೊಸ ಶಿಕ್ಷಣ' ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿ ಆಂಧ್ರಪ್ರದೇಶದ ಪುಟ್ಟಪರ್ತಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಶ್ರೀ ಸತ್ಯಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್(SSSIHL)ನ 42ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.</p>.ಡೀಪ್ ಫೇಕ್ | ಪೊಲೀಸರಿಗೆ ತಂತ್ರಜ್ಞಾನದ ಅರಿವು ಅಗತ್ಯ: ದ್ರೌಪದಿ ಮುರ್ಮು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ.20-22ರವರೆಗೆ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.</p><p>ನ.20ರಂದು ಮುರ್ಮು ಅವರು, 'ಒಡಿಶಾದ ಬರಿಪದದಲ್ಲಿ ಅಖಿಲ ಭಾರತ ಸಂತಾಲಿ ಲೇಖಕರ ಸಂಘದ 36ನೇ ವಾರ್ಷಿಕ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಅದೇ ದಿನ ಅವರು ಕುಲಿಯಾನದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಸಹ ಉದ್ಘಾಟಿಸಲಿದ್ದಾರೆ' ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. </p><p>ನ.21 ರಂದು ಪಹಾದ್ಪುರ ಗ್ರಾಮದಲ್ಲಿ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ತರುವಾಯ ಬದಂಪಹಾರ್ ರೈಲು ನಿಲ್ದಾಣಕ್ಕೆ ಭೇಟಿ ಅಲ್ಲಿ ಅವರು ಮೂರು ಹೊಸ ರೈಲು(ಬದಂಪಹಾರ್- ಟಾಟಾನಗರ, ಬದಂಪಹಾರ್-ರೂರ್ಕೆಲಾ ಎಕ್ಸ್ಪ್ರೆಸ್ ಮತ್ತು ಬದಂಪಹಾರ್-ಶಾಲಿಮಾರ್ ಎಕ್ಸ್ಪ್ರೆಸ್) ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.</p><p>ಬಳಿಕ ಅವರು ಬದಂಪಹಾರ್-ಶಾಲಿಮಾರ್ ಎಕ್ಸ್ಪ್ರೆಸ್ನಲ್ಲಿ ಬದಂಪಹಾರ್ನಿಂದ ರೈರಂಗಪುರಕ್ಕೆ ಪ್ರಯಾಣಿಸುತ್ತಾರೆ. ಅದೇ ದಿನ ಸಂಜೆ ಬುರ್ಲಾದ ವೀರ್ ಸುರೇಂದ್ರ ಸಾಯಿ ತಂತ್ರಜ್ಞಾನ ವಿಶ್ವವಿದ್ಯಾಲಯದ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.</p><p>ನ.22ರಂದು ಸಂಬಲ್ಪುರದ ಬ್ರಹ್ಮಾಕುಮಾರೀಸ್ ಸೇವಾಕೇಂದ್ರ ಆಯೋಜಿಸಿರುವ ರಾಷ್ಟ್ರೀಯ ಶಿಕ್ಷಣ ಅಭಿಯಾನ- 'ನವ ಭಾರತಕ್ಕಾಗಿ ಹೊಸ ಶಿಕ್ಷಣ' ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿ ಆಂಧ್ರಪ್ರದೇಶದ ಪುಟ್ಟಪರ್ತಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಶ್ರೀ ಸತ್ಯಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್(SSSIHL)ನ 42ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.</p>.ಡೀಪ್ ಫೇಕ್ | ಪೊಲೀಸರಿಗೆ ತಂತ್ರಜ್ಞಾನದ ಅರಿವು ಅಗತ್ಯ: ದ್ರೌಪದಿ ಮುರ್ಮು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>