<p><strong>ನವದೆಹಲಿ:</strong> ಮಹಾರಾಷ್ಟ್ರದಲ್ಲಿ 2012ರಲ್ಲಿ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿ ಕ್ಷಮಾದಾನ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>2022ರ ಜುಲೈ 25ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ಮುರ್ಮು ಅವರು ತಿರಸ್ಕರಿಸಿದ 3ನೇ ಕ್ಷಮಾದಾನ ಅರ್ಜಿ ಇದಾಗಿದೆ. </p>.<p>ಅಪರಾಧಿ ರವಿ ಅಶೋಕ್ ಘುಮಾರೆಗೆ ವಿಧಿಸಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ 2019ರ ಅಕ್ಟೋಬರ್ 3ರಂದು ಎತ್ತಿಹಿಡಿದಿತ್ತು. ಲೈಂಗಿಕ ಹಸಿವನ್ನು ನೀಗಿಸಿಕೊಳ್ಳಲು ಆತ ಎಲ್ಲಾ ನೈಸರ್ಗಿಕ, ಸಾಮಾಜಿಕ ಮತ್ತು ಕಾನೂನಿನ ಮಿತಿಗಳನ್ನು ಮೀರಿದ್ದಾನೆ ಎಂದು ಕೋರ್ಟ್ ಹೇಳಿತ್ತು.</p>.<p>ಇನ್ನೂ ಅರಳಬೇಕಿದ್ದ ಜೀವವೊಂದನ್ನು ಆ ವ್ಯಕ್ತಿ ನಿರ್ದಯೆಯಿಂದ ಕೊಂದಿದ್ದಾನೆ. ಎರಡು ವರ್ಷದ ಮಗುವಿನ ಮೇಲೆ ಎಸಗಿದ ಕೃತ್ಯವು ಆತನ ಕೊಳಕು ಮತ್ತು ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆಯಲ್ಲದೆ, ಕ್ರೌರ್ಯದ ಭಯಾನಕ ಕಥೆಯನ್ನು ಪ್ರದರ್ಶಿಸುತ್ತದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ( ಭಾರತದ ಈಗಿನ ಮುಖ್ಯ ನ್ಯಾಯಮೂರ್ತಿ) ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಆ ಸಂದರ್ಭದಲ್ಲಿ ಹೇಳಿತ್ತು.</p>.<p>ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6ರಂದು ಈ ಘಟನೆ(ಬಾಲಕಿ ಮೇಲೆ ಅತ್ಯಾಚಾರ, ಕೊಲೆ) ನಡೆದಿತ್ತು. ಬಾಲಕಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿ ಘುಮಾರೆ ಕೃತ್ಯ ಎಸಗಿದ್ದ.</p>.<p>ವಿಚಾರಣಾ ನ್ಯಾಯಾಲಯವು 2015ರ ಸೆಪ್ಟೆಂಬರ್ 16ರಂದು ಆತನನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿತ್ತು. 2016ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್ ಈ ಆದೇಶವನ್ನು ಎತ್ತಿಹಿಡಿದಿತ್ತು. </p>.ನಿರ್ಭಯಾ ಅತ್ಯಾಚಾರಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದಲ್ಲಿ 2012ರಲ್ಲಿ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿ ಕ್ಷಮಾದಾನ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>2022ರ ಜುಲೈ 25ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ಮುರ್ಮು ಅವರು ತಿರಸ್ಕರಿಸಿದ 3ನೇ ಕ್ಷಮಾದಾನ ಅರ್ಜಿ ಇದಾಗಿದೆ. </p>.<p>ಅಪರಾಧಿ ರವಿ ಅಶೋಕ್ ಘುಮಾರೆಗೆ ವಿಧಿಸಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ 2019ರ ಅಕ್ಟೋಬರ್ 3ರಂದು ಎತ್ತಿಹಿಡಿದಿತ್ತು. ಲೈಂಗಿಕ ಹಸಿವನ್ನು ನೀಗಿಸಿಕೊಳ್ಳಲು ಆತ ಎಲ್ಲಾ ನೈಸರ್ಗಿಕ, ಸಾಮಾಜಿಕ ಮತ್ತು ಕಾನೂನಿನ ಮಿತಿಗಳನ್ನು ಮೀರಿದ್ದಾನೆ ಎಂದು ಕೋರ್ಟ್ ಹೇಳಿತ್ತು.</p>.<p>ಇನ್ನೂ ಅರಳಬೇಕಿದ್ದ ಜೀವವೊಂದನ್ನು ಆ ವ್ಯಕ್ತಿ ನಿರ್ದಯೆಯಿಂದ ಕೊಂದಿದ್ದಾನೆ. ಎರಡು ವರ್ಷದ ಮಗುವಿನ ಮೇಲೆ ಎಸಗಿದ ಕೃತ್ಯವು ಆತನ ಕೊಳಕು ಮತ್ತು ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆಯಲ್ಲದೆ, ಕ್ರೌರ್ಯದ ಭಯಾನಕ ಕಥೆಯನ್ನು ಪ್ರದರ್ಶಿಸುತ್ತದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ( ಭಾರತದ ಈಗಿನ ಮುಖ್ಯ ನ್ಯಾಯಮೂರ್ತಿ) ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಆ ಸಂದರ್ಭದಲ್ಲಿ ಹೇಳಿತ್ತು.</p>.<p>ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6ರಂದು ಈ ಘಟನೆ(ಬಾಲಕಿ ಮೇಲೆ ಅತ್ಯಾಚಾರ, ಕೊಲೆ) ನಡೆದಿತ್ತು. ಬಾಲಕಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿ ಘುಮಾರೆ ಕೃತ್ಯ ಎಸಗಿದ್ದ.</p>.<p>ವಿಚಾರಣಾ ನ್ಯಾಯಾಲಯವು 2015ರ ಸೆಪ್ಟೆಂಬರ್ 16ರಂದು ಆತನನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿತ್ತು. 2016ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್ ಈ ಆದೇಶವನ್ನು ಎತ್ತಿಹಿಡಿದಿತ್ತು. </p>.ನಿರ್ಭಯಾ ಅತ್ಯಾಚಾರಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>