<p><strong>ನವದೆಹಲಿ</strong>: ಭೂಕಕ್ಷೆಯಲ್ಲಿ ನಿಷ್ಕ್ರಿಯಗೊಂಡ ಉಪಗ್ರಹಗಳ ಅವಶೇಷಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, 2030ರ ವೇಳೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ತನ್ನ ಬಾಹ್ಯಾಕಾಶ ಯೋಜನೆಗಳನ್ನು ‘ಅವಶೇಷಮುಕ್ತ’ ಆಗಿಸುವ ಗುರಿ ಹೊಂದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಚಂದ್ರಯಾನ–3 ಯೋಜನೆ ಯಶಸ್ವಿಯಾದ ಮೊದಲ ವರ್ಷಾಚರಣೆ ಅಂಗವಾಗಿ ನವದೆಹಲಿಯ ಭಾರತ್ ಮಂಟಪ್ನಲ್ಲಿ ಹಮ್ಮಿಕೊಂಡಿದ್ದ ಚೊಚ್ಚಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಹ್ಯಾಕಾಶದಲ್ಲಿರುವ ಅವಶೇಷಗಳು ಯೋಜನೆಗಳಿಗೆ ಹಿನ್ನಡೆ ಉಂಟುಮಾಡಿವೆ. 2030ರ ಒಳಗಾಗಿ ಭಾರತವು ಎಲ್ಲ ಬಾಹ್ಯಾಕಾಶ ಯೋಜನೆಗಳನ್ನು ‘ಅವಶೇಷಮುಕ್ತ’ಗೊಳಿಸಲು ಮುಂದಡಿ ಇಟ್ಟಿದೆ’ ಎಂದು ಅವರು ಸಂತಸ ವ್ಯಕ್ತಪಡಿಸಿದರು.</p>.<p>ಕಡಿಮೆ ಸಂಪನ್ಮೂಲದಲ್ಲಿ ವಿಶ್ವದಲ್ಲಿಯೇ ಅತ್ಯುತ್ತಮ ಬಾಹ್ಯಾಕಾಶ ಯೋಜನೆಗಳನ್ನು ಸಾಕಾರಗೊಳಿಸಿದ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಿದ ಅವರು, ‘ಇದರಿಂದ ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆಗೂ ಅಮೂಲ್ಯ ಕೊಡುಗೆಗಳನ್ನು ನೀಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷ ಆಗಸ್ಟ್ 23ರಂದು ಚಂದ್ರಯಾನ–3ರ ಭಾಗವಾಗಿ ಕಳುಹಿಸಿದ್ದ ‘ವಿಕ್ರಮ ಲ್ಯಾಂಡರ್’ ಚಂದ್ರನ ಅಂಗಳಕ್ಕೆ ಇಳಿದಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆಗೂ ಭಾರತ ಪಾತ್ರವಾಗಿತ್ತು. </p>.<p>ಕಾರ್ಯಕ್ರಮದಲ್ಲಿ ‘ಭಾರತೀಯ ಅಂತರಿಕ್ಷ ಹ್ಯಾಕಥಾನ್’ ಹಾಗೂ ‘ರೊಬೊಟಿಕ್ಸ್ ಚಾಲೆಂಜ್’ನಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಿದರು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಎಂಜಿನಿಯರ್ಗಳು, ಇಸ್ರೊ ವಿಜ್ಞಾನಿಗಳು, ಬಾಹ್ಯಾಕಾಶ ಕೈಗಾರಿಕೆಗಳ ವಿವಿಧ ಪ್ರತಿನಿಧಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭೂಕಕ್ಷೆಯಲ್ಲಿ ನಿಷ್ಕ್ರಿಯಗೊಂಡ ಉಪಗ್ರಹಗಳ ಅವಶೇಷಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, 2030ರ ವೇಳೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ತನ್ನ ಬಾಹ್ಯಾಕಾಶ ಯೋಜನೆಗಳನ್ನು ‘ಅವಶೇಷಮುಕ್ತ’ ಆಗಿಸುವ ಗುರಿ ಹೊಂದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಚಂದ್ರಯಾನ–3 ಯೋಜನೆ ಯಶಸ್ವಿಯಾದ ಮೊದಲ ವರ್ಷಾಚರಣೆ ಅಂಗವಾಗಿ ನವದೆಹಲಿಯ ಭಾರತ್ ಮಂಟಪ್ನಲ್ಲಿ ಹಮ್ಮಿಕೊಂಡಿದ್ದ ಚೊಚ್ಚಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಹ್ಯಾಕಾಶದಲ್ಲಿರುವ ಅವಶೇಷಗಳು ಯೋಜನೆಗಳಿಗೆ ಹಿನ್ನಡೆ ಉಂಟುಮಾಡಿವೆ. 2030ರ ಒಳಗಾಗಿ ಭಾರತವು ಎಲ್ಲ ಬಾಹ್ಯಾಕಾಶ ಯೋಜನೆಗಳನ್ನು ‘ಅವಶೇಷಮುಕ್ತ’ಗೊಳಿಸಲು ಮುಂದಡಿ ಇಟ್ಟಿದೆ’ ಎಂದು ಅವರು ಸಂತಸ ವ್ಯಕ್ತಪಡಿಸಿದರು.</p>.<p>ಕಡಿಮೆ ಸಂಪನ್ಮೂಲದಲ್ಲಿ ವಿಶ್ವದಲ್ಲಿಯೇ ಅತ್ಯುತ್ತಮ ಬಾಹ್ಯಾಕಾಶ ಯೋಜನೆಗಳನ್ನು ಸಾಕಾರಗೊಳಿಸಿದ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಿದ ಅವರು, ‘ಇದರಿಂದ ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆಗೂ ಅಮೂಲ್ಯ ಕೊಡುಗೆಗಳನ್ನು ನೀಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷ ಆಗಸ್ಟ್ 23ರಂದು ಚಂದ್ರಯಾನ–3ರ ಭಾಗವಾಗಿ ಕಳುಹಿಸಿದ್ದ ‘ವಿಕ್ರಮ ಲ್ಯಾಂಡರ್’ ಚಂದ್ರನ ಅಂಗಳಕ್ಕೆ ಇಳಿದಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆಗೂ ಭಾರತ ಪಾತ್ರವಾಗಿತ್ತು. </p>.<p>ಕಾರ್ಯಕ್ರಮದಲ್ಲಿ ‘ಭಾರತೀಯ ಅಂತರಿಕ್ಷ ಹ್ಯಾಕಥಾನ್’ ಹಾಗೂ ‘ರೊಬೊಟಿಕ್ಸ್ ಚಾಲೆಂಜ್’ನಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಿದರು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಎಂಜಿನಿಯರ್ಗಳು, ಇಸ್ರೊ ವಿಜ್ಞಾನಿಗಳು, ಬಾಹ್ಯಾಕಾಶ ಕೈಗಾರಿಕೆಗಳ ವಿವಿಧ ಪ್ರತಿನಿಧಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>