ಅಲ್ಲಿಂದ ಮತ್ತೆ ಮೈಸೂರಿಗೆ ಬರಲಿರುವ ಅವರು, ಸಂಜೆ 5.45ಕ್ಕೆ ಚೆನ್ನೈಗೆ ತೆರಳಲಿದ್ದಾರೆ.
ತೆಪ್ಪಕಾಡು ಪ್ರದೇಶದಲ್ಲಿ ಅಕ್ಕಪಕ್ಕದ ಹೋಟೆಲ್ ಹಾಗೂ ಪ್ರವಾಸಿಗರಿಗೆ ಶನಿವಾರ ಸಂಜೆಯ ವರೆಗೆ ನಿರ್ಬಂಧ ವಿಧಿಸಲಾಗಿದೆ. ಆ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಏ.9ರಂದು ಬಂಡೀಪುರ ಹಾಗೂ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿ ನಂತರ ರಸ್ತೆ ಮೂಲಕ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದ್ದರು. ಅವರು ಕೂಡ ಬೆಳ್ಳಿ ಬೊಮ್ಮ ದಂಪತಿ ಜೊತೆ ಮಾತುಕತೆ ನಡೆಸಿದ್ದರು.
‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಿಂದ ನೇರವಾಗಿ ಮಧುಮಲೆಗೆ ತೆರಳುತ್ತಾರೆ. ಬಂಡೀಪುರಕ್ಕೆ ಬರುವುದಿಲ್ಲ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
ಸಂಚಾರಕ್ಕೆ ತೊಂದರೆಯಾಗಿಲ್ಲ: ‘ರಾಷ್ಟ್ರಪತಿ ಭೇಟಿಗಾಗಿ ಬಿಗಿ ಭದ್ರತೆ ಕೈಗೊಂಡಿದ್ದರೂ ತಮಿಳುನಾಡಿನ ಕಡೆಗೆ ಹೋಗುವ ಮತ್ತು ರಾಜ್ಯದ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧ ಹೇರಿಲ್ಲ. ಶನಿವಾರ ಹೇಗೆ ಇರುತ್ತದೆ ಎಂಬುದು ಇನ್ನೂ ತಿಳಿದಿಲ್ಲ’ ಎಂದು ಬಂಡೀಪುರದ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದರು. 1